ಓದುಗರ ಪತ್ರ
ದ್ವಿತೀಯ ಪಿಯುಸಿ ಪರೀಕ್ಷೆ ೨ರ -ಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ವಿದ್ಯಾರ್ಥಿ ಗಳ ಪರೀಕ್ಷಾ ಪಲಿತಾಂಶಗಳನ್ನು ಉತ್ತಮಗೊಳಿಸಲು ರಾಜ್ಯ ಸರ್ಕಾರ ೩ ಅವಕಾಶಗಳನ್ನು ನೀಡಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳು ಇನ್ನೂ ಒಂದು ಬಾರಿ ಪರೀಕ್ಷೆ ಬರೆದು ಬಾಕಿ ಉಳಿಸಿಕೊಂಡಿರುವ ವಿಷಯಗಳಲ್ಲಿ ತೇರ್ಗಡೆಯಾಗಬಹುದು. ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಜೀವನವೇ ಮುಗಿದು ಹೋಯಿತು ಎಂಬಂತೆ ಭಾವಿಸುವುದು ಹಾಗೂ ಅನುತ್ತೀರ್ಣರಾದ ಮಕ್ಕಳನ್ನು ಪೋಷಕರು ಇತರೆ ಮಕ್ಕಳೊಂದಿಗೆ ಹೋಲಿಕೆ ಮಾಡಿ ನಿಂದಿಸುವುದು ಸರಿಯಲ್ಲ. ಜೀವನದಲ್ಲಿ ಏನೇ ಸಂಕಷ್ಟ ಬಂದರೂ ಎದುರಿಸುವ ಧೈರ್ಯವನ್ನು ಪೋಷಕರು ಮಕ್ಕಳಿಗೆ ತುಂಬಬೇಕು. ಜೀವನದ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕು.
-ಎಸ್.ಶ್ರೀದೇವಿ, ಮೈಸೂರು
ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)…
ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…