ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆತ್ತ ತಂದೆ-ತಾಯಿಯನ್ನು ವಯಸ್ಸಾದ ಬಳಿಕ ಸರಿಯಾಗಿ ನೋಡಿಕೊಳ್ಳದೆ, ಅವರನ್ನು ಮನೆಯಿಂದ ಹೊರಹಾಕುವುದು, ವೃದ್ಧಾಶ್ರಮಕ್ಕೆ ಸೇರಿಸುವುದು, ಮನೆಯಲ್ಲಿದ್ದರೂ ಸರಿಯಾಗಿ ಆರೈಕೆ ಮಾಡದಿರುವುದನ್ನು ನಾವು ಗಮನಿಸಿದ್ದೇವೆ. ಇಂತಹ ತೊಂದರೆಗಳಿಂದ ಹಿರಿಯರು ಮುಕ್ತವಾಗಲು ಕೇಂದ್ರ ಸರ್ಕಾರವು ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಹಾಗೂ ಕಾಯ್ದೆಯನ್ನು ಜಾರಿಗೆ ತಂದಿರುವುದಾಗಿ ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಪರಿಷತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಯು ಹಿರಿಯ ಜೀವಗಳಿಗೆ ನೆಮ್ಮದಿ ನೀಡಿದೆ ಎಂದರೆ ತಪ್ಪಾಗಲಾರದು. ಎಷ್ಟೋ ಮಕ್ಕಳು ಹೆತ್ತವರಿಂದ ಆಸ್ತಿಯನ್ನು ಬರೆಸಿಕೊಂಡ ನಂತರ ಅವರನ್ನು ಮನೆಯಿಂದ ಹೊರ ಹಾಕಿದ್ದಾರೆ. ಅವರನ್ನು ಸರಿಯಾಗಿ ಆರೈಕೆ ಮಾಡದೆ ನಿರ್ಲಕ್ಷ ತೋರಿದ್ದಾರೆ.
ಇನ್ನು ಕೆಲವರು ವೃದ್ಧಾಶ್ರಮಕ್ಕೆ ಬಿಡುತ್ತಿದ್ದಾರೆ. ಸದ್ಯ ಈ ಕಾಯ್ದೆಯು ನಿರ್ಲಕ್ಷಕ್ಕೆ ಒಳಗಾದ ಹಿರಿಯ ನಾಗರಿಕರಿಗೆ ಆಸರೆಯಾಗಿದ್ದು, ಆಸ್ತಿ ಪಡೆದ ಬಳಿಕ ಮಕ್ಕಳು ಹಿರಿಯರನ್ನು ಹಾರೈಕೆ ಮಾಡದಿದ್ದರೆ, ಹಿರಿಯರಿಂದ ಬರೆಸಿಕೊಂಡ ಆಸ್ತಿ ಪತ್ರಗಳನ್ನು ಅನೂರ್ಜಿತಗೊಳಿಸಿ ಮತ್ತೆ ಹಿರಿಯ ನಾಗರಿಕರ ಹೆಸರಿಗೇ ವರ್ಗಾಯಿಸಲು ಕಾನೂನಿನಲ್ಲಿ ಅವಕಾಶವಿರುವುದು ಒಳ್ಳೆಯದು. ಆದರೆ ಇಂತಹ ಕಾಯ್ದೆಯ ಬಗ್ಗೆ ಹೆಚ್ಚು ಜನರಿಗೆ ಮಾಹಿತಿ ಇರುವುದಿಲ್ಲ. ಆದ್ದರಿಂದ ಸರ್ಕಾರ ಜಾಹೀರಾತುಗಳ ಮೂಲಕ ಈ ಕಾಯ್ದೆ ಬಗ್ಗೆ ಪ್ರಚಾರ ಮಾಡಬೇಕು. ಆ ಮೂಲಕ ಹಿರಿಯ ನಾಗರಿಕರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಇದರಿಂದ ಎಷ್ಟೂ ಮಕ್ಕಳು ಹೆತ್ತವರನ್ನು ನಿರ್ಲಕ್ಷಿಸುವುದು ತಪ್ಪುತ್ತದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…