ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆತ್ತ ತಂದೆ-ತಾಯಿಯನ್ನು ವಯಸ್ಸಾದ ಬಳಿಕ ಸರಿಯಾಗಿ ನೋಡಿಕೊಳ್ಳದೆ, ಅವರನ್ನು ಮನೆಯಿಂದ ಹೊರಹಾಕುವುದು, ವೃದ್ಧಾಶ್ರಮಕ್ಕೆ ಸೇರಿಸುವುದು, ಮನೆಯಲ್ಲಿದ್ದರೂ ಸರಿಯಾಗಿ ಆರೈಕೆ ಮಾಡದಿರುವುದನ್ನು ನಾವು ಗಮನಿಸಿದ್ದೇವೆ. ಇಂತಹ ತೊಂದರೆಗಳಿಂದ ಹಿರಿಯರು ಮುಕ್ತವಾಗಲು ಕೇಂದ್ರ ಸರ್ಕಾರವು ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಹಾಗೂ ಕಾಯ್ದೆಯನ್ನು ಜಾರಿಗೆ ತಂದಿರುವುದಾಗಿ ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಪರಿಷತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಯು ಹಿರಿಯ ಜೀವಗಳಿಗೆ ನೆಮ್ಮದಿ ನೀಡಿದೆ ಎಂದರೆ ತಪ್ಪಾಗಲಾರದು. ಎಷ್ಟೋ ಮಕ್ಕಳು ಹೆತ್ತವರಿಂದ ಆಸ್ತಿಯನ್ನು ಬರೆಸಿಕೊಂಡ ನಂತರ ಅವರನ್ನು ಮನೆಯಿಂದ ಹೊರ ಹಾಕಿದ್ದಾರೆ. ಅವರನ್ನು ಸರಿಯಾಗಿ ಆರೈಕೆ ಮಾಡದೆ ನಿರ್ಲಕ್ಷ ತೋರಿದ್ದಾರೆ.
ಇನ್ನು ಕೆಲವರು ವೃದ್ಧಾಶ್ರಮಕ್ಕೆ ಬಿಡುತ್ತಿದ್ದಾರೆ. ಸದ್ಯ ಈ ಕಾಯ್ದೆಯು ನಿರ್ಲಕ್ಷಕ್ಕೆ ಒಳಗಾದ ಹಿರಿಯ ನಾಗರಿಕರಿಗೆ ಆಸರೆಯಾಗಿದ್ದು, ಆಸ್ತಿ ಪಡೆದ ಬಳಿಕ ಮಕ್ಕಳು ಹಿರಿಯರನ್ನು ಹಾರೈಕೆ ಮಾಡದಿದ್ದರೆ, ಹಿರಿಯರಿಂದ ಬರೆಸಿಕೊಂಡ ಆಸ್ತಿ ಪತ್ರಗಳನ್ನು ಅನೂರ್ಜಿತಗೊಳಿಸಿ ಮತ್ತೆ ಹಿರಿಯ ನಾಗರಿಕರ ಹೆಸರಿಗೇ ವರ್ಗಾಯಿಸಲು ಕಾನೂನಿನಲ್ಲಿ ಅವಕಾಶವಿರುವುದು ಒಳ್ಳೆಯದು. ಆದರೆ ಇಂತಹ ಕಾಯ್ದೆಯ ಬಗ್ಗೆ ಹೆಚ್ಚು ಜನರಿಗೆ ಮಾಹಿತಿ ಇರುವುದಿಲ್ಲ. ಆದ್ದರಿಂದ ಸರ್ಕಾರ ಜಾಹೀರಾತುಗಳ ಮೂಲಕ ಈ ಕಾಯ್ದೆ ಬಗ್ಗೆ ಪ್ರಚಾರ ಮಾಡಬೇಕು. ಆ ಮೂಲಕ ಹಿರಿಯ ನಾಗರಿಕರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಇದರಿಂದ ಎಷ್ಟೂ ಮಕ್ಕಳು ಹೆತ್ತವರನ್ನು ನಿರ್ಲಕ್ಷಿಸುವುದು ತಪ್ಪುತ್ತದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…