ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆತ್ತ ತಂದೆ-ತಾಯಿಯನ್ನು ವಯಸ್ಸಾದ ಬಳಿಕ ಸರಿಯಾಗಿ ನೋಡಿಕೊಳ್ಳದೆ, ಅವರನ್ನು ಮನೆಯಿಂದ ಹೊರಹಾಕುವುದು, ವೃದ್ಧಾಶ್ರಮಕ್ಕೆ ಸೇರಿಸುವುದು, ಮನೆಯಲ್ಲಿದ್ದರೂ ಸರಿಯಾಗಿ ಆರೈಕೆ ಮಾಡದಿರುವುದನ್ನು ನಾವು ಗಮನಿಸಿದ್ದೇವೆ. ಇಂತಹ ತೊಂದರೆಗಳಿಂದ ಹಿರಿಯರು ಮುಕ್ತವಾಗಲು ಕೇಂದ್ರ ಸರ್ಕಾರವು ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಹಾಗೂ ಕಾಯ್ದೆಯನ್ನು ಜಾರಿಗೆ ತಂದಿರುವುದಾಗಿ ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಪರಿಷತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಯು ಹಿರಿಯ ಜೀವಗಳಿಗೆ ನೆಮ್ಮದಿ ನೀಡಿದೆ ಎಂದರೆ ತಪ್ಪಾಗಲಾರದು. ಎಷ್ಟೋ ಮಕ್ಕಳು ಹೆತ್ತವರಿಂದ ಆಸ್ತಿಯನ್ನು ಬರೆಸಿಕೊಂಡ ನಂತರ ಅವರನ್ನು ಮನೆಯಿಂದ ಹೊರ ಹಾಕಿದ್ದಾರೆ. ಅವರನ್ನು ಸರಿಯಾಗಿ ಆರೈಕೆ ಮಾಡದೆ ನಿರ್ಲಕ್ಷ ತೋರಿದ್ದಾರೆ.
ಇನ್ನು ಕೆಲವರು ವೃದ್ಧಾಶ್ರಮಕ್ಕೆ ಬಿಡುತ್ತಿದ್ದಾರೆ. ಸದ್ಯ ಈ ಕಾಯ್ದೆಯು ನಿರ್ಲಕ್ಷಕ್ಕೆ ಒಳಗಾದ ಹಿರಿಯ ನಾಗರಿಕರಿಗೆ ಆಸರೆಯಾಗಿದ್ದು, ಆಸ್ತಿ ಪಡೆದ ಬಳಿಕ ಮಕ್ಕಳು ಹಿರಿಯರನ್ನು ಹಾರೈಕೆ ಮಾಡದಿದ್ದರೆ, ಹಿರಿಯರಿಂದ ಬರೆಸಿಕೊಂಡ ಆಸ್ತಿ ಪತ್ರಗಳನ್ನು ಅನೂರ್ಜಿತಗೊಳಿಸಿ ಮತ್ತೆ ಹಿರಿಯ ನಾಗರಿಕರ ಹೆಸರಿಗೇ ವರ್ಗಾಯಿಸಲು ಕಾನೂನಿನಲ್ಲಿ ಅವಕಾಶವಿರುವುದು ಒಳ್ಳೆಯದು. ಆದರೆ ಇಂತಹ ಕಾಯ್ದೆಯ ಬಗ್ಗೆ ಹೆಚ್ಚು ಜನರಿಗೆ ಮಾಹಿತಿ ಇರುವುದಿಲ್ಲ. ಆದ್ದರಿಂದ ಸರ್ಕಾರ ಜಾಹೀರಾತುಗಳ ಮೂಲಕ ಈ ಕಾಯ್ದೆ ಬಗ್ಗೆ ಪ್ರಚಾರ ಮಾಡಬೇಕು. ಆ ಮೂಲಕ ಹಿರಿಯ ನಾಗರಿಕರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಇದರಿಂದ ಎಷ್ಟೂ ಮಕ್ಕಳು ಹೆತ್ತವರನ್ನು ನಿರ್ಲಕ್ಷಿಸುವುದು ತಪ್ಪುತ್ತದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…