ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆತ್ತ ತಂದೆ-ತಾಯಿಯನ್ನು ವಯಸ್ಸಾದ ಬಳಿಕ ಸರಿಯಾಗಿ ನೋಡಿಕೊಳ್ಳದೆ, ಅವರನ್ನು ಮನೆಯಿಂದ ಹೊರಹಾಕುವುದು, ವೃದ್ಧಾಶ್ರಮಕ್ಕೆ ಸೇರಿಸುವುದು, ಮನೆಯಲ್ಲಿದ್ದರೂ ಸರಿಯಾಗಿ ಆರೈಕೆ ಮಾಡದಿರುವುದನ್ನು ನಾವು ಗಮನಿಸಿದ್ದೇವೆ. ಇಂತಹ ತೊಂದರೆಗಳಿಂದ ಹಿರಿಯರು ಮುಕ್ತವಾಗಲು ಕೇಂದ್ರ ಸರ್ಕಾರವು ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಹಾಗೂ ಕಾಯ್ದೆಯನ್ನು ಜಾರಿಗೆ ತಂದಿರುವುದಾಗಿ ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಪರಿಷತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಯು ಹಿರಿಯ ಜೀವಗಳಿಗೆ ನೆಮ್ಮದಿ ನೀಡಿದೆ ಎಂದರೆ ತಪ್ಪಾಗಲಾರದು. ಎಷ್ಟೋ ಮಕ್ಕಳು ಹೆತ್ತವರಿಂದ ಆಸ್ತಿಯನ್ನು ಬರೆಸಿಕೊಂಡ ನಂತರ ಅವರನ್ನು ಮನೆಯಿಂದ ಹೊರ ಹಾಕಿದ್ದಾರೆ. ಅವರನ್ನು ಸರಿಯಾಗಿ ಆರೈಕೆ ಮಾಡದೆ ನಿರ್ಲಕ್ಷ ತೋರಿದ್ದಾರೆ.
ಇನ್ನು ಕೆಲವರು ವೃದ್ಧಾಶ್ರಮಕ್ಕೆ ಬಿಡುತ್ತಿದ್ದಾರೆ. ಸದ್ಯ ಈ ಕಾಯ್ದೆಯು ನಿರ್ಲಕ್ಷಕ್ಕೆ ಒಳಗಾದ ಹಿರಿಯ ನಾಗರಿಕರಿಗೆ ಆಸರೆಯಾಗಿದ್ದು, ಆಸ್ತಿ ಪಡೆದ ಬಳಿಕ ಮಕ್ಕಳು ಹಿರಿಯರನ್ನು ಹಾರೈಕೆ ಮಾಡದಿದ್ದರೆ, ಹಿರಿಯರಿಂದ ಬರೆಸಿಕೊಂಡ ಆಸ್ತಿ ಪತ್ರಗಳನ್ನು ಅನೂರ್ಜಿತಗೊಳಿಸಿ ಮತ್ತೆ ಹಿರಿಯ ನಾಗರಿಕರ ಹೆಸರಿಗೇ ವರ್ಗಾಯಿಸಲು ಕಾನೂನಿನಲ್ಲಿ ಅವಕಾಶವಿರುವುದು ಒಳ್ಳೆಯದು. ಆದರೆ ಇಂತಹ ಕಾಯ್ದೆಯ ಬಗ್ಗೆ ಹೆಚ್ಚು ಜನರಿಗೆ ಮಾಹಿತಿ ಇರುವುದಿಲ್ಲ. ಆದ್ದರಿಂದ ಸರ್ಕಾರ ಜಾಹೀರಾತುಗಳ ಮೂಲಕ ಈ ಕಾಯ್ದೆ ಬಗ್ಗೆ ಪ್ರಚಾರ ಮಾಡಬೇಕು. ಆ ಮೂಲಕ ಹಿರಿಯ ನಾಗರಿಕರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಇದರಿಂದ ಎಷ್ಟೂ ಮಕ್ಕಳು ಹೆತ್ತವರನ್ನು ನಿರ್ಲಕ್ಷಿಸುವುದು ತಪ್ಪುತ್ತದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…