ಓದುಗರ ಪತ್ರ

ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ಶಿವನಸಮುದ್ರ ಸೂಕ್ತ ಸ್ಥಳ

ರಾಜ್ಯ ಸರ್ಕಾರ, ಮಂಡ್ಯ ಜಿಲ್ಲೆಯ ವಿಶ್ವ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯ(ಕೆ.ಆರ್.ಎಸ್.) ದ ಹತ್ತಿರ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಲು ಮುಂದಾಗಿದೆ. ಆದರೆ, ಮಂಡ್ಯ ರೈತ ಸಂಘ ಸರ್ಕಾರದ ಈ ನಿರ್ಧಾರವನ್ನು ವಿರೋಧ ಮಾಡುತ್ತಿದೆ. ಅಮ್ಯೂಸ್‌ಮೆಂಟ್ ಪಾರ್ಕ್ ನಲ್ಲಿ ಕಾವೇರಿ ಪ್ರತಿಮೆ ಸ್ಥಾಪಿಸುವ ಉದ್ದೇಶವಿದೆ. ಜತೆಗೆ ಜಾಯಿಂಟ್ ವ್ಹೀಲ್ ಅಳವಡಿಸಬೇಕಾದರೆ ಆಳವಾದ ಅಡಿಪಾಯ ಬೇಕಾಗುತ್ತದೆ.

ಅಡಿಪಾಯ ಹಾಕುವಾಗ ಶತಮಾನದ ಅಂಚಿನಲ್ಲಿರುವ ಕನ್ನಂಬಾಡಿ ಅಣೆಕಟ್ಟೆಗೆ ಅಪಾಯ ತಪ್ಪಿದ್ದಲ್ಲ. ಆದ್ದರಿಂದ ಈ ಸ್ಥಳವನ್ನು ಕೈಬಿಡಬೇಕಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ(ಬ್ಲಫ್)ದಲ್ಲಿ ನಿರ್ಮಿಸಿರುವ ಕೆ. ಶೇಷಾದ್ರಿ ಅಯ್ಯರ್ ಜಲವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ಪ್ರವಾಸಿಗರು ದಿನಂಪ್ರತಿ ಭೇಟಿ ನೀಡುತ್ತಿದ್ದರು.

ಭಯೋತ್ಪಾದಕರ ದಾಳಿಯ ಭಯದಿಂದಾಗಿ ಜಲವಿದ್ಯುತ್ ಕೇಂದ್ರಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ. ಇದರ ಪರಿಣಾಮ ಪ್ರವಾಸಿಗರು ಅತ್ತ ಮುಖಮಾಡದೇ ಇರುವುದರಿಂದ ಅಲ್ಲಿನ ಉದ್ಯಾನವನಗಳು ನಿರ್ಲಕ್ಷ್ಯಕ್ಕೊಳಗಾಗಿವೆ. ಒಂದು ಕಾಲದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಶಿವನ ಸಮುದ್ರ ಪ್ರವಾಸಿ ಕೇಂದ್ರ ಇಂದು ಯಾರಿಗೂ ಬೇಡವಾಗಿದೆ.

ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತಗಳು ಪ್ರತಿ ವರ್ಷ ಗಗನಚುಕ್ಕಿ, ಭರಚುಕ್ಕಿ ಜಲಪಾತೋತ್ಸವದ ಹೆಸರಿನಲ್ಲಿ ಕೋಟ್ಯಂತರ ರೂ. ವೆಚ್ಚ ಮಾಡಿ ಕೇವಲ ಒಂದೆರಡು ದಿನಗಳು ಮಾತ್ರ ಜಲಪಾತ ಉತ್ಸವ ನಡೆಸುತ್ತಿವೆ. ಅದರ ಬದಲು ಅದೇ ಹಣದಿಂದ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಿದರೆ, ಪಾರ್ಕ್ ಜೊತೆಗೆ ಅಲ್ಲಿನ ಗಗನಚುಕ್ಕಿ ಹಾಗೂ ಭರಚುಕ್ಕಿ ಜಲಪಾತಗಳು ಪ್ರವಾಸಿಗರನ್ನು ಆಕರ್ಷಿಸಿ ಉತ್ತಮ ಪ್ರವಾಸೋದ್ಯಮ ಕೇಂದ್ರವಾಗುವುದರಲ್ಲಿ ಸಂಶಯವಿಲ್ಲ. ಇದರಿಂದ ಅಲ್ಲಿನ ಪ್ರವಾಸೋದ್ಯಮ ಅಭಿವೃದ್ಧಿಯಾಗಿ ಅಲ್ಲಿನ ರೈತರಿಗೆ, ಯುವಕರಿಗೆ ಉದ್ಯೋಗ ದೊರೆಯುತ್ತದೆ.

– ಸಿ. ಸಿದ್ದರಾಜು ಆಲಕೆರೆ, ಮಂಡ್ಯ

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago