ಓದುಗರ ಪತ್ರ

ಓದುಗರ ಪತ್ರ:  ಹೆಬ್ಬಾಳ ಜಲಾಶಯ ಕಾಲುವೆ ದುರಸ್ತಿಗೊಳಿಸಿ

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಹೆಬ್ಬಾಳ ಜಲಾಶಯವು ೮,೦೦೦ ಎಕರೆ ಕೃಷಿ ಭೂಮಿಗೆ ನೀರಾವರಿ ಸೌಲಭ್ಯವನ್ನು ಒದಗಿಸುತ್ತದೆ. ಬೆಳಗನಹಳ್ಳಿ, ಬೆಳಗನಹಳ್ಳಿ ಕಾವಲ್, ಎಚ್.ಮಟಕೆರೆ, ಹೈರಿಗೆ, ಮಲಾರ ಕಾಲೋನಿ, ಮಾದಾಪುರ, ದೇವರಾಜ ಕಾಲೋನಿ, ಕೋಳಗಾಲ, ಗುಜ್ಜಪ್ಪನ ಹುಂಡಿ ಗ್ರಾಮಗಳ ರೈತರು ಈ ಜಲಾಶಯದ ನೀರನ್ನು ಆಶ್ರಯಿಸಿ ಭತ್ತದ ಕೃಷಿ ಮಾಡುತ್ತಾರೆ. ಜಲಾಶಯದ ಕಾಲುವೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಮಲಾರ ಕಾಲೋನಿ ಹತ್ತಿರ ಅರೆ ಬರೆ ಕಾಮಗಾರಿ ನಡೆಸಿದ ಗುತ್ತಿಗೆದಾರರು ಸರ್ಕಾರದಿಂದ ಕಾಮಗಾರಿ ಬಿಲ್ ಪಾವತಿಸಿಕೊಂಡು ನಾಪತ್ತೆ ಯಾಗಿದ್ದಾರೆ. ಇದರಿಂದಾಗಿ ಹೈರಿಗೆ ಗ್ರಾಮದ ಹತ್ತಿರ ಕಾಲುವೆ ನೀರು ನಿಂತು ದುರ್ವಾಸನೆ ಬೀರುತ್ತಿದೆ. ಹಾಗೂ ಸೊಳ್ಳೆಗಳ ಕಾಟ ಜಾಸ್ತಿಯಾಗಿದೆ. ಇದರಿಂದಾಗಿ ಅಕ್ಕಪಕ್ಕದ ಮನೆಗಳಿಗೆ ತೊಂದರೆ ಆಗುತ್ತಿದೆ. ಮಳೆಗಾಲ ಬಂದರೆ ಈ ಕಾಲುವೆಯ ಕೊಳಚೆ ನೀರು ಮನೆಗಳಿಗೆ ನುಗ್ಗಿ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಈ ಕುರಿತು ಶಾಸಕರು ಹಾಗೂ ಹೆಬ್ಬಾಳ ಜಲಾಶಯ ನಿರ್ವಹಣೆ ಮಾಡುವ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ತಾಲ್ಲೂಕಿನ ಜನಪ್ರತಿನಿಧಿಗಳು ಹೆಬ್ಬಾಳ ಕಾಲುವೆಯ ಹೂಳು ತೆಗೆಸಿ ದುರಸ್ತಿ ಮಾಡಿಸುವ ಮೂಲಕ ಗ್ರಾಮಸ್ಥರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

28 mins ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

2 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

4 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

4 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

4 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

4 hours ago