ಮಂಡ್ಯ ಜಿಲ್ಲೆಯ ವಿ. ಸಿ. ಫಾರಂನಲ್ಲಿ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದಾಗಿ ಮಾಧ್ಯಮ ಗಳಲ್ಲಿ ವರದಿಯಾಗಿದೆ. ವಿವಿ ಸ್ಥಾಪನೆಯಾದರೆ ಮಂಡ್ಯ ಸೇರಿದಂತೆ ಮೈಸೂರು, ಕೊಡಗು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಲ್ಲಿನ ರೈತರಿಗೆ ಅನುಕೂಲವಾಗಲಿದೆ.
ಕೃಷಿ ಕಾಲೇಜು ಹಾಗೂ ಸಂಶೋಧನಾ ಕೇಂದ್ರ ಒಳಗೊಂಡಂತೆ ಮಂಡ್ಯದ ವಿ. ಸಿ. ಫಾರಂನಲ್ಲಿ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂಬ ಪ್ರಸ್ತಾಪವನ್ನು ಮಾಜಿ ಉಪಸಭಾಪತಿ ಮರಿತಿಬ್ಬೇಗೌಡರವರು ಹಲವಾರು ಬಾರಿ ವಿಧಾನಪರಿಷತ್ನಲ್ಲಿ ಪ್ರಸ್ತಾಪಿಸುತ್ತಲೇ ಇದ್ದರು. ಅವರ ಬೇಡಿಕೆ ಈಗ ಈಡೇರಿದಂತಾಗಿದೆ. ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆ ಆಗುವುದರಿಂದ ರೈತರ ಅನೇಕ ಸಮಸ್ಯೆಗಳಿಗೆ ವಿಶೇಷವಾಗಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಒಂದೇ ಮೂಲದಿಂದ ಪರಿಹಾರ ದೊರಕುತ್ತದೆ. ಪ್ರಸ್ತುತ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾನಿಲಯದ ಅಧೀನದಲ್ಲಿ ಮೈಸೂರು ತೋಟಗಾರಿಕೆ ಕಾಲೇಜು ಕಾರ್ಯ ನಿರ್ವಹಿಸುತ್ತಿದ್ದು, ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಅಸ್ತಿತ್ವಕ್ಕೆ ಬಂದರೆ ಮೈಸೂರು ವಿಭಾಗದಲ್ಲಿನ ಕೃಷಿಗೆ ಸಂಬಂಧಪಟ್ಟ ಎಲ್ಲ ಶಿಕ್ಷಣ ಸಂಸ್ಥೆಗಳು, ಸಂಶೋಧನಾ ಕೇಂದ್ರಗಳು, ವಿಸ್ತರಣಾ ಘಟಕಗಳು ಹಾಗೂ ಕಾಲೇಜುಗಳು ಅದರ ಅಧೀನಕ್ಕೆ ಬರುತ್ತವೆ. ಇದರಿಂದ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗಳ ರೈತರಿಗೂ ಹೆಚ್ಚಿನ ಅನು ಕೂಲವಾಗಲಿದೆ.
ಬೆಸಗರಹಳ್ಳಿ ರವಿ ಪ್ರಸಾದ್ , ಮೈಸೂರು
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…