ಓದುಗರ ಪತ್ರ

ಶಿಕ್ಷಣ ಇಲಾಖೆಯ ಅನುಮತಿ ಕಡ್ಡಾಯವಾಗಲಿ

ಸರ್ಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಅನೇಕ ಖಾಸಗಿ ಟ್ಯೂಷನ್ ಹಾಗೂ ಕೋಚಿಂಗ್ ಸೆಂಟರ್‌ಗಳಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕೆಲ ಕೋಚಿಂಗ್‌ ಸೆಂಟರ್‌ಗಳು ಹಾಗೂ ಟ್ಯೂಷನ್ಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದಾಗಿ ಜಾಹೀರಾತುಗಳನ್ನು ನೀಡಿ ವಿದ್ಯಾರ್ಥಿಗಳನ್ನು ಸೆಳೆಯಲಾಗುತ್ತಿದೆ. ತರಬೇತಿ ನೀಡಲಾಗುವುದು, ಖಚಿತವಾಗಿ ಉದ್ಯೋಗ ಸಿಗುವಂತೆ
ಮಾಡಲಾಗುವುದು ಎಂದು ನಂಬಿಸಿ ಸಾವಿರಾರು ರೂ. ವಸೂಲಿ ಮಾಡುತ್ತಿದ್ದಾರೆ. ಹೀಗೆ ವಿದ್ಯಾರ್ಥಿಗಳನ್ನು ನಂಬಿಸಿ ಹಣ ವಸೂಲಿ ಮಾಡುವ ಬಹುತೇಕ ಕೋಚಿಂಗ್ ಸೆಂಟರ್‌ಗಳು ಯಾವುದೇ ರೀತಿಯ ಗುಣಮಟ್ಟದ ಶಿಕ್ಷಣವನ್ನು ನೀಡದೆ, ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸವನ್ನೂ ಕೊಡಿಸದೆ ವಿದ್ಯಾರ್ಥಿಗಳ ಹಣ ಹಾಗೂ ಸಮಯವನ್ನು ವ್ಯರ್ಥ ಮಾಡುತ್ತಿವೆ ಇದರಿಂದಾಗಿ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ. ಆದ್ದರಿಂದ ಶಿಕ್ಷಣ ಇಲಾಖೆಯು ಟ್ಯೂಷನ್ ಮತ್ತು ಕೋಚಿಂಗ್ ಸೆಂಟರ್ ಗಳನು ನಡೆಸುವವರು ಕಡ್ಡಾಯವಾಗಿ ಇಲಾಖೆಯ ಅನುಮತಿ ಪಡೆಯುವಂತೆ ಆದೇಶಿಸಬೇಕಿದೆ. ಅಲ್ಲದೆ ಇಲಾಖೆಯೂ ಅನುಮತಿ ನೀಡುವ ಮುನ್ನ ಈ ಕೋಚಿಂಗ್‌ ಸೆಂಟರ್‌ಗಳು ಹಾಗೂ ಟ್ಯೂಷನ್‌ಗಳನ್ನು ಪರಿಶೀಲಿಸಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

11 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

11 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

12 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

13 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

17 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

17 hours ago