ಓದುಗರ ಪತ್ರ

ಓದುಗರ ಪತ್ರ: ಸಭಾಧ್ಯಕ್ಷರ ನಿರ್ಧಾರ ಸ್ವಾಗತಾರ್ಹ

ವಿಧಾನಸಭಾ ಅಧಿವೇಶನದಲ್ಲಿ ಕೆಲ ಶಾಸಕರು ಪ್ರತಿಭಟನೆ ಮಾಡುವ ಭರದಲ್ಲಿ ಕಾಗದ ಪತ್ರಗಳನ್ನು ಸಭಾಧ್ಯಕ್ಷರ ಪೀಠದತ್ತ ತೂರಿ ಆ ಸ್ಥಾನಕ್ಕೆ ಅಗೌರವ ತೋರಿರುವುದು ನಿಜಕ್ಕೂ ಖಂಡನೀಯ.

ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸುವ ಎಲ್ಲ ಶಾಸಕರೂ ತಮ್ಮ ತಮ್ಮ ಕ್ಷೇತ್ರದ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರಗಳನ್ನು ಕಂಡುಕೊಳ್ಳಬೇಕು. ಹಾಗೆಯೇ ವಿರೋಧ ಪಕ್ಷದ ಶಾಸಕರೂ ಸರ್ಕಾರದ ನಿರ್ಧಾರಗಳನ್ನು ಪ್ರಶ್ನಿಸುವ ಹಾಗೂ ಅವುಗಳ ವಿರುದ್ಧ ಪ್ರತಿಭಟಿಸುವ ಹಕ್ಕನ್ನು ಹೊಂದಿದ್ದರೂ ಆ ಪ್ರತಿಭಟನೆಗಳು ಸದನದ ಪೀಠದ ಗೌರವಕ್ಕೆ ಧಕ್ಕೆಯಾಗದಂತಿರಬೇಕು.

ಆದರೆ, ಬಿಜೆಪಿಯ ಕೆಲ ಶಾಸಕರು ವಿಧಾನಸಭಾ ಅಧಿವೇಶನದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಅಗೌರವ ತೋರಿದ್ದಾರೆ. ಪ್ರತಿಭಟನೆ ಮಾಡುವ ನೆಪದಲ್ಲಿ ಸಭಾಧ್ಯಕ್ಷರ ಪೀಠದ ಕಡೆಗೆ ಕಾಗದಪತ್ರಗಳನ್ನು ಎಸೆದು, ಸಭಾಧ್ಯಕ್ಷರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ನಿಜಕ್ಕೂ ಖಂಡನೀಯ.

ಇದು ಸದನದ ಸಾರ್ವಭೌಮತ್ವಕ್ಕೆ ಮಾಡಿದ ಅವಮಾನ. ಶಾಂತಿ ರೀತಿಯಲ್ಲಿ ವರ್ತಿಸುವಂತೆ ಸಭಾಧ್ಯಕ್ಷರು ಪದೇ ಪದೇ ವಿರೋಧ ಪಕ್ಷದ ಶಾಸಕರಲ್ಲಿ ಮನವಿ ಮಾಡಿದರೂ ಕೇಳದೆ ಶಾಸಕರು ಪ್ರತಿಭಟನೆ ಮಾಡುತ್ತಾ ಸಭಾಧ್ಯಕ್ಷರ ಪೀಠಕ್ಕೆ ಅಪಮಾನ ಮಾಡಿದ್ದಾರೆ. ಶಾಸಕರ ವರ್ತನೆಯಿಂದ ಬೆಸತ್ತು ಸಭಾಧ್ಯಕ್ಷರು ಅವರನ್ನು ಸದನದಿಂದ 6 ತಿಂಗಳ ಕಾಲ ಅಮಾನತ್ತು ಮಾಡಿದ್ದಾರೆ. ಈ ಕ್ರಮ ಇತರೆ ಶಾಸಕರಿಗೆ ಪಾಠವಾಗಿದೆ.

-ಪಿ.ರಾಜು ಅಶೋಕಪುರಂ, ಕೆಪಿಸಿಸಿ ಸದಸ್ಯರು ಸಂಯೋಜಕರು, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

49 mins ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

51 mins ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

53 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

55 mins ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

59 mins ago