ಒಳ ಮೀಸಲಾತಿಯ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಂವಿಧಾನದಲ್ಲಿ ಜಾತಿವಾರು ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಹಿಂದುಳಿದ ವರ್ಗಗಳು ಹಾಗೂ ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ ಮತ್ತು ಅವರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಸಾಽಸುವ ಮೂಲಕ ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಬೇಕು ಎಂಬ ಉದ್ದೇಶದಿಂದ ಡಾ. ಬಿ. ಆರ್. ಅಂಬೇಡ್ಕರ್ರವರು ಈ ಮೀಸಲಾತಿ ಯನ್ನು ಜಾರಿಗೆ ತಂದರು.
ಮೀಸಲಾತಿ ವ್ಯವಸ್ಥೆ ಜಾರಿಗೆ ಬಂದು ೭೦ ವರ್ಷ ಗಳೇ ಕಳೆದರೂ ಕೆಲವು ರಾಜಕಾರಣಿಗಳು ಈ ಮೀಸಲಾತಿ ವ್ಯವಸ್ಥೆಯನ್ನು ತಮ್ಮ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈಗ ನ್ಯಾಯಾಲಯ ನೀಡಿ ರುವ ಈ ತೀರ್ಪು ಎಲ್ಲ ಸಮುದಾಯಗಳ ಶ್ರೇಯೋಭಿವೃದ್ಧಿಗೆ ಸಹಕಾರಿ ಯಾಗಲಿದೆ. ಒಳ ಮೀಸಲಾತಿ ಜಾರಿ ಮಾಡುವುದರಿಂದ ಉಪಜಾತಿ ಗಳ ಲ್ಲಿರುವ ಅತಿ ಹಿಂದುಳಿದ ಜಾತಿಗಳಿಗೂ ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಿದಂತಾಗುತ್ತದೆ. ಈ ಬಗ್ಗೆ ಸಾಕಷ್ಟು ವರ್ಷ ಗಳಿಂದ ಅನೇಕ ಹೋರಾಟಗಳನ್ನು ಮಾಡಲಾಗಿತ್ತು. ಅದಕ್ಕೆ ಈಗ ಫಲ ಸಿಕ್ಕಂತಾಗಿದೆ. ಒಳ ಮೀಸಲಾತಿ ಜಾರಿಯಿಂದಾಗಿ ದೇಶದಲ್ಲಿರುವ ಪ್ರತಿಯೊಂದು ಉದ್ಯೋಗ ಮತ್ತು ರಾಜಕೀಯ ರಂಗದಲ್ಲಿಯೂ ಎಲ್ಲರಿಗೂ ಅವಕಾಶ ಸಿಕ್ಕಂತಾಗುತ್ತದೆ.
-ಜಿ. ಎನ್. ಕಾರ್ತಿಕ್, ವಕೀಲರು, ಗುಂಡ್ಲುಪೇಟೆ.
ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…
ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಡಾವಣೆ ಪೊಲೀಸ್…
ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್…
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್ ರದ್ದುಗೊಳಿಸಿದ…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…