ಓದುಗರ ಪತ್ರ

ಓದುಗರ ಪತ್ರ| ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ

ಒಳ ಮೀಸಲಾತಿಯ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಂವಿಧಾನದಲ್ಲಿ ಜಾತಿವಾರು ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಹಿಂದುಳಿದ ವರ್ಗಗಳು ಹಾಗೂ ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ ಮತ್ತು ಅವರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಸಾಽಸುವ ಮೂಲಕ ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಬೇಕು ಎಂಬ ಉದ್ದೇಶದಿಂದ ಡಾ. ಬಿ. ಆರ್. ಅಂಬೇಡ್ಕರ್‌ರವರು ಈ ಮೀಸಲಾತಿ ಯನ್ನು ಜಾರಿಗೆ ತಂದರು.

ಮೀಸಲಾತಿ ವ್ಯವಸ್ಥೆ ಜಾರಿಗೆ ಬಂದು ೭೦ ವರ್ಷ ಗಳೇ ಕಳೆದರೂ ಕೆಲವು ರಾಜಕಾರಣಿಗಳು ಈ ಮೀಸಲಾತಿ ವ್ಯವಸ್ಥೆಯನ್ನು ತಮ್ಮ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈಗ ನ್ಯಾಯಾಲಯ ನೀಡಿ ರುವ ಈ ತೀರ್ಪು ಎಲ್ಲ ಸಮುದಾಯಗಳ ಶ್ರೇಯೋಭಿವೃದ್ಧಿಗೆ ಸಹಕಾರಿ ಯಾಗಲಿದೆ. ಒಳ ಮೀಸಲಾತಿ ಜಾರಿ ಮಾಡುವುದರಿಂದ ಉಪಜಾತಿ ಗಳ ಲ್ಲಿರುವ ಅತಿ ಹಿಂದುಳಿದ ಜಾತಿಗಳಿಗೂ ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಿದಂತಾಗುತ್ತದೆ. ಈ ಬಗ್ಗೆ ಸಾಕಷ್ಟು ವರ್ಷ ಗಳಿಂದ ಅನೇಕ ಹೋರಾಟಗಳನ್ನು ಮಾಡಲಾಗಿತ್ತು. ಅದಕ್ಕೆ ಈಗ ಫಲ ಸಿಕ್ಕಂತಾಗಿದೆ. ಒಳ ಮೀಸಲಾತಿ ಜಾರಿಯಿಂದಾಗಿ ದೇಶದಲ್ಲಿರುವ ಪ್ರತಿಯೊಂದು ಉದ್ಯೋಗ ಮತ್ತು ರಾಜಕೀಯ ರಂಗದಲ್ಲಿಯೂ ಎಲ್ಲರಿಗೂ ಅವಕಾಶ ಸಿಕ್ಕಂತಾಗುತ್ತದೆ.

-ಜಿ. ಎನ್. ಕಾರ್ತಿಕ್, ವಕೀಲರು, ಗುಂಡ್ಲುಪೇಟೆ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

35 mins ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

51 mins ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

1 hour ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

2 hours ago

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

2 hours ago