ಓದುಗರ ಪತ್ರ

ಓದುಗರ ಪತ್ರ| ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ

ಒಳ ಮೀಸಲಾತಿಯ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಂವಿಧಾನದಲ್ಲಿ ಜಾತಿವಾರು ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಹಿಂದುಳಿದ ವರ್ಗಗಳು ಹಾಗೂ ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ ಮತ್ತು ಅವರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಸಾಽಸುವ ಮೂಲಕ ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಬೇಕು ಎಂಬ ಉದ್ದೇಶದಿಂದ ಡಾ. ಬಿ. ಆರ್. ಅಂಬೇಡ್ಕರ್‌ರವರು ಈ ಮೀಸಲಾತಿ ಯನ್ನು ಜಾರಿಗೆ ತಂದರು.

ಮೀಸಲಾತಿ ವ್ಯವಸ್ಥೆ ಜಾರಿಗೆ ಬಂದು ೭೦ ವರ್ಷ ಗಳೇ ಕಳೆದರೂ ಕೆಲವು ರಾಜಕಾರಣಿಗಳು ಈ ಮೀಸಲಾತಿ ವ್ಯವಸ್ಥೆಯನ್ನು ತಮ್ಮ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈಗ ನ್ಯಾಯಾಲಯ ನೀಡಿ ರುವ ಈ ತೀರ್ಪು ಎಲ್ಲ ಸಮುದಾಯಗಳ ಶ್ರೇಯೋಭಿವೃದ್ಧಿಗೆ ಸಹಕಾರಿ ಯಾಗಲಿದೆ. ಒಳ ಮೀಸಲಾತಿ ಜಾರಿ ಮಾಡುವುದರಿಂದ ಉಪಜಾತಿ ಗಳ ಲ್ಲಿರುವ ಅತಿ ಹಿಂದುಳಿದ ಜಾತಿಗಳಿಗೂ ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಿದಂತಾಗುತ್ತದೆ. ಈ ಬಗ್ಗೆ ಸಾಕಷ್ಟು ವರ್ಷ ಗಳಿಂದ ಅನೇಕ ಹೋರಾಟಗಳನ್ನು ಮಾಡಲಾಗಿತ್ತು. ಅದಕ್ಕೆ ಈಗ ಫಲ ಸಿಕ್ಕಂತಾಗಿದೆ. ಒಳ ಮೀಸಲಾತಿ ಜಾರಿಯಿಂದಾಗಿ ದೇಶದಲ್ಲಿರುವ ಪ್ರತಿಯೊಂದು ಉದ್ಯೋಗ ಮತ್ತು ರಾಜಕೀಯ ರಂಗದಲ್ಲಿಯೂ ಎಲ್ಲರಿಗೂ ಅವಕಾಶ ಸಿಕ್ಕಂತಾಗುತ್ತದೆ.

-ಜಿ. ಎನ್. ಕಾರ್ತಿಕ್, ವಕೀಲರು, ಗುಂಡ್ಲುಪೇಟೆ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago