ಓದುಗರ ಪತ್ರ

ಓದುಗರ ಪತ್ರ | ಗಿಡ, ಮರಗಳಿಗೆ ಮಾರಕವಾಗಿರುವ ಟೈಲ್‌ಗಳು

ಮೈಸೂರು ಮಹಾನಗರ ಪಾಲಿಕೆ ಪಾದಚಾರಿ ಮಾರ್ಗಗಳಿಗೆ ಇಂಟರ್ ಲಾಕಿಂಗ್ ಟೈಲ್ಸ್‌ಗಳನ್ನು ಅಳವಡಿಸುತ್ತಿದ್ದು, ಇದು ಪಾದಚಾರಿಗಳಿಗೆ ಸುರಕ್ಷಿತ ಮತ್ತು ಆರಾಮದಾಯಕವಾದ ನಡಿಗೆಗೆ ಅನುಕೂಲವಾಗುತ್ತದೆ.

ಆದರೆ, ಹಲವು ಕಡೆ ಗಿಡಮರಗಳಿಗೆ ನೀರು ಹಾಕಲೂ ಆಗದಂತೆ ಟೈಲ್ಸ್ ಗಳನ್ನು ಹಾಕುತ್ತಿರುವುದರಿಂದ ಹತ್ತಾರು ವರ್ಷಗಳಿಂದ ಬೆಳೆಸಿರುವ ಮರಗಳು ಒಣಗುತ್ತಿವೆ. ಸುಂದರ ಪಾದಚಾರಿ ಮಾರ್ಗದ ನೆಪದಲ್ಲಿ ಮರಗಳನ್ನು ಉಸಿರುಗಟ್ಟಿಸಲಾಗುತ್ತಿದೆ. ಈಗಾಗಲೇ ರಸ್ತೆಯನ್ನು ಅಗೆದು ಮರಗಳ ಬೇರಿಗೆ ಹಾನಿ ಮಾಡಲಾಗಿದೆ. ಮರಗಳ ಸುತ್ತ ನಾಲ್ಕು ಅಡಿ ಜಾಗವನ್ನೂ ಬಿಡದಂತೆ ಅಗೆಯಲಾಗಿದೆ. ಪಾದಚಾರಿ ಮಾರ್ಗ ನಿರ್ಮಿಸಲು ಮರಗಳನ್ನು ಬೇರು ಸಮೇತ ಕೊರೆಯುವುದು ಸರಿಯಲ್ಲ. ಮರಗಳ ಸುತ್ತ ನಾಲ್ಕು ಅಡಿ ಜಾಗ ಬಿಟ್ಟು ಟೈಲ್ಸ್ ಅಳವಡಿಸಬೇಕು. ಬೆಳೆದ ಮರಗಳ ಬೇರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು. ಮರಗಳಿಗೆ ಹಾಗೂ ಅದರ ಬೇರುಗಳಿಗೆ ಹಾನಿ ಯಾಗದಂತೆ ಕೆಲಸ ಮಾಡಲು ಗುತ್ತಿಗೆದಾರರಿಗೆ ಸಂಬಂಧಪಟ್ಟವರು ಮೊದಲೇ ಸೂಚಿಸಬೇಕಿದೆ.

-ಗೋವಿತ್ ಕಿರಣ್, ರಾಜೇಂದ್ರ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

2 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

6 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

6 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

6 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

6 hours ago