ಓದುಗರ ಪತ್ರ
ಮೈಸೂರು ಮಹಾನಗರ ಪಾಲಿಕೆ ಪಾದಚಾರಿ ಮಾರ್ಗಗಳಿಗೆ ಇಂಟರ್ ಲಾಕಿಂಗ್ ಟೈಲ್ಸ್ಗಳನ್ನು ಅಳವಡಿಸುತ್ತಿದ್ದು, ಇದು ಪಾದಚಾರಿಗಳಿಗೆ ಸುರಕ್ಷಿತ ಮತ್ತು ಆರಾಮದಾಯಕವಾದ ನಡಿಗೆಗೆ ಅನುಕೂಲವಾಗುತ್ತದೆ.
ಆದರೆ, ಹಲವು ಕಡೆ ಗಿಡಮರಗಳಿಗೆ ನೀರು ಹಾಕಲೂ ಆಗದಂತೆ ಟೈಲ್ಸ್ ಗಳನ್ನು ಹಾಕುತ್ತಿರುವುದರಿಂದ ಹತ್ತಾರು ವರ್ಷಗಳಿಂದ ಬೆಳೆಸಿರುವ ಮರಗಳು ಒಣಗುತ್ತಿವೆ. ಸುಂದರ ಪಾದಚಾರಿ ಮಾರ್ಗದ ನೆಪದಲ್ಲಿ ಮರಗಳನ್ನು ಉಸಿರುಗಟ್ಟಿಸಲಾಗುತ್ತಿದೆ. ಈಗಾಗಲೇ ರಸ್ತೆಯನ್ನು ಅಗೆದು ಮರಗಳ ಬೇರಿಗೆ ಹಾನಿ ಮಾಡಲಾಗಿದೆ. ಮರಗಳ ಸುತ್ತ ನಾಲ್ಕು ಅಡಿ ಜಾಗವನ್ನೂ ಬಿಡದಂತೆ ಅಗೆಯಲಾಗಿದೆ. ಪಾದಚಾರಿ ಮಾರ್ಗ ನಿರ್ಮಿಸಲು ಮರಗಳನ್ನು ಬೇರು ಸಮೇತ ಕೊರೆಯುವುದು ಸರಿಯಲ್ಲ. ಮರಗಳ ಸುತ್ತ ನಾಲ್ಕು ಅಡಿ ಜಾಗ ಬಿಟ್ಟು ಟೈಲ್ಸ್ ಅಳವಡಿಸಬೇಕು. ಬೆಳೆದ ಮರಗಳ ಬೇರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು. ಮರಗಳಿಗೆ ಹಾಗೂ ಅದರ ಬೇರುಗಳಿಗೆ ಹಾನಿ ಯಾಗದಂತೆ ಕೆಲಸ ಮಾಡಲು ಗುತ್ತಿಗೆದಾರರಿಗೆ ಸಂಬಂಧಪಟ್ಟವರು ಮೊದಲೇ ಸೂಚಿಸಬೇಕಿದೆ.
-ಗೋವಿತ್ ಕಿರಣ್, ರಾಜೇಂದ್ರ ನಗರ, ಮೈಸೂರು
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…