ಓದುಗರ ಪತ್ರ

ಓದುಗರ ಪತ್ರ | ಅಂತ್ಯಕ್ರಿಯೆಗೂ ದುಬಾರಿ ಶುಲ್ಕವೆ?

ಮೈಸೂರು ಮಹಾನಗರ ಪಾಲಿಕೆ ಇದೀಗ ತನ್ನ ಸಂಪನ್ಮೂಲಗಳನ್ನು ಕ್ರೋಢೀಕರಿಸುವ ಸಲುವಾಗಿ ಮೈಸೂರಿನ ನಾಲ್ಕು ಚಿತಾಗಾರಗಳಲ್ಲಿ ಅಂತ್ಯಕ್ರಿಯೆ ನೆರವೇರಿಸಲು ರೂ. ೫೦೦ ಶುಲ್ಕವನ್ನು ನಿಗದಿಪಡಿಸಿದೆ ಎಂದು ಮಾಧ್ಯಮ ಗಳಲ್ಲಿ ವರದಿಯಾಗಿದೆ. ಇದು ದುರದೃಷ್ಟಕರ ಸಂಗತಿ.

ಸತ್ತವರಿಗೆ ಸದ್ಗತಿ ದೊರಕಿಸಲೆಂದು ಅಲ್ಲಿಗೆ ಬರುವವರು ಅಪರಕ್ರಿಯೆಗಳನ್ನು ಮಾಡಿ ಹೋಗುತ್ತಾರೆ. ಬದುಕಿರುವವರೆಗೂ ವಿವಿಧ ತೆರಿಗೆಗಳನ್ನು ಹೇರುವ ಸರ್ಕಾರಗಳು, ಸತ್ತವರ ಅಂತ್ಯಕ್ರಿಯೆ ನೆರವೇರಿಸಲೂ ತೆರಿಗೆಗಳನ್ನು ಹೇರುವ ಮೂಲಕ ಜನರ ನೆಮ್ಮದಿಯನ್ನು ಹಾಳುಗೆಡಹುತ್ತಿದೆ. ಈಗಾಗಲೇ ಪಾಲಿಕೆಯು ಆಸ್ತಿ ತೆರಿಗೆಯಲ್ಲಿ ಪ್ರತಿ ಮನೆಗೂ ಸ್ಮಶಾನ ತೆರಿಗೆ ಎಂದು ೧೫೦ ರೂ. ಗಳನ್ನು ಸಂದಾಯ ಮಾಡಿಸಿಕೊಳ್ಳುತ್ತಿದ್ದು, ೫೦೦ ರೂ. ಶುಲ್ಕವನ್ನು ನಿಗದಿಪಡಿಸಿರುವುದು ಸರಿಯಲ್ಲ ಅನಿಸುತ್ತದೆ. ಬಹುಶಃ ಅಂತಹ ಮನೆಯಲ್ಲಿನ ಸದಸ್ಯರ ಮರಣಕ್ಕಿಂತಲೂ ಹೆಚ್ಚೇ ಸ್ಮಶಾನ ತೆರಿಗೆ ಸಂದಾಯವಾಗುತ್ತದೆ ಅಲ್ಲವೇ. ಅಷ್ಟಕ್ಕೂ ಪ್ರತಿ ವರುಷವೂ ಸ್ಮಶಾನಕ್ಕೆ ತೆರಿಗೆದಾರರು ಹೋಗಿ ಬರುತ್ತಾರೆಯೇ ಎಂಬ ವಿವೇಚನೆಯೂ ಇಲ್ಲವಲ್ಲ. ಒಟ್ಟಿನಲ್ಲಿ ಈ ಸರ್ಕಾರಕ್ಕೆ ‘ಹಣ ಸೂರೆ ಹೆಣ ಸೂರೆ’ ಎಂಬ ಗಾದೆ ಮಾತು ಸೂಕ್ತವಾಗಿ ಅನ್ವಯಿಸುತ್ತದೆ.

– ವಿಜಯ್ ಹೆಮ್ಮಿಗೆ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

1 hour ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

1 hour ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

1 hour ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

1 hour ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

1 hour ago