ಓದುಗರ ಪತ್ರ

ಓದುಗರ ಪತ್ರ | ಅಂತ್ಯಕ್ರಿಯೆಗೂ ದುಬಾರಿ ಶುಲ್ಕವೆ?

ಮೈಸೂರು ಮಹಾನಗರ ಪಾಲಿಕೆ ಇದೀಗ ತನ್ನ ಸಂಪನ್ಮೂಲಗಳನ್ನು ಕ್ರೋಢೀಕರಿಸುವ ಸಲುವಾಗಿ ಮೈಸೂರಿನ ನಾಲ್ಕು ಚಿತಾಗಾರಗಳಲ್ಲಿ ಅಂತ್ಯಕ್ರಿಯೆ ನೆರವೇರಿಸಲು ರೂ. ೫೦೦ ಶುಲ್ಕವನ್ನು ನಿಗದಿಪಡಿಸಿದೆ ಎಂದು ಮಾಧ್ಯಮ ಗಳಲ್ಲಿ ವರದಿಯಾಗಿದೆ. ಇದು ದುರದೃಷ್ಟಕರ ಸಂಗತಿ.

ಸತ್ತವರಿಗೆ ಸದ್ಗತಿ ದೊರಕಿಸಲೆಂದು ಅಲ್ಲಿಗೆ ಬರುವವರು ಅಪರಕ್ರಿಯೆಗಳನ್ನು ಮಾಡಿ ಹೋಗುತ್ತಾರೆ. ಬದುಕಿರುವವರೆಗೂ ವಿವಿಧ ತೆರಿಗೆಗಳನ್ನು ಹೇರುವ ಸರ್ಕಾರಗಳು, ಸತ್ತವರ ಅಂತ್ಯಕ್ರಿಯೆ ನೆರವೇರಿಸಲೂ ತೆರಿಗೆಗಳನ್ನು ಹೇರುವ ಮೂಲಕ ಜನರ ನೆಮ್ಮದಿಯನ್ನು ಹಾಳುಗೆಡಹುತ್ತಿದೆ. ಈಗಾಗಲೇ ಪಾಲಿಕೆಯು ಆಸ್ತಿ ತೆರಿಗೆಯಲ್ಲಿ ಪ್ರತಿ ಮನೆಗೂ ಸ್ಮಶಾನ ತೆರಿಗೆ ಎಂದು ೧೫೦ ರೂ. ಗಳನ್ನು ಸಂದಾಯ ಮಾಡಿಸಿಕೊಳ್ಳುತ್ತಿದ್ದು, ೫೦೦ ರೂ. ಶುಲ್ಕವನ್ನು ನಿಗದಿಪಡಿಸಿರುವುದು ಸರಿಯಲ್ಲ ಅನಿಸುತ್ತದೆ. ಬಹುಶಃ ಅಂತಹ ಮನೆಯಲ್ಲಿನ ಸದಸ್ಯರ ಮರಣಕ್ಕಿಂತಲೂ ಹೆಚ್ಚೇ ಸ್ಮಶಾನ ತೆರಿಗೆ ಸಂದಾಯವಾಗುತ್ತದೆ ಅಲ್ಲವೇ. ಅಷ್ಟಕ್ಕೂ ಪ್ರತಿ ವರುಷವೂ ಸ್ಮಶಾನಕ್ಕೆ ತೆರಿಗೆದಾರರು ಹೋಗಿ ಬರುತ್ತಾರೆಯೇ ಎಂಬ ವಿವೇಚನೆಯೂ ಇಲ್ಲವಲ್ಲ. ಒಟ್ಟಿನಲ್ಲಿ ಈ ಸರ್ಕಾರಕ್ಕೆ ‘ಹಣ ಸೂರೆ ಹೆಣ ಸೂರೆ’ ಎಂಬ ಗಾದೆ ಮಾತು ಸೂಕ್ತವಾಗಿ ಅನ್ವಯಿಸುತ್ತದೆ.

– ವಿಜಯ್ ಹೆಮ್ಮಿಗೆ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮನ್‌ಮುಲ್ ಅಧ್ಯಕ್ಷರಾಗಿ ಹರೀಶ್‌ಬಾಬು ಆಯ್ಕೆ ಬಹುತೇಕ ಖಚಿತ

ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ  ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)…

4 mins ago

ಅಂದು ಮಿನಿ ವಿಧಾನಸೌಧ, ಇಂದು ಪ್ರಮೋದಾ ದೇವಿ ಒಡೆಯರ ಆಸ್ತಿ?

ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…

8 mins ago

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

21 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

21 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

21 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

21 hours ago