ಓದುಗರ ಪತ್ರ

ಓದುಗರ ಪತ್ರ | ಅಂತ್ಯಕ್ರಿಯೆಗೂ ದುಬಾರಿ ಶುಲ್ಕವೆ?

ಮೈಸೂರು ಮಹಾನಗರ ಪಾಲಿಕೆ ಇದೀಗ ತನ್ನ ಸಂಪನ್ಮೂಲಗಳನ್ನು ಕ್ರೋಢೀಕರಿಸುವ ಸಲುವಾಗಿ ಮೈಸೂರಿನ ನಾಲ್ಕು ಚಿತಾಗಾರಗಳಲ್ಲಿ ಅಂತ್ಯಕ್ರಿಯೆ ನೆರವೇರಿಸಲು ರೂ. ೫೦೦ ಶುಲ್ಕವನ್ನು ನಿಗದಿಪಡಿಸಿದೆ ಎಂದು ಮಾಧ್ಯಮ ಗಳಲ್ಲಿ ವರದಿಯಾಗಿದೆ. ಇದು ದುರದೃಷ್ಟಕರ ಸಂಗತಿ.

ಸತ್ತವರಿಗೆ ಸದ್ಗತಿ ದೊರಕಿಸಲೆಂದು ಅಲ್ಲಿಗೆ ಬರುವವರು ಅಪರಕ್ರಿಯೆಗಳನ್ನು ಮಾಡಿ ಹೋಗುತ್ತಾರೆ. ಬದುಕಿರುವವರೆಗೂ ವಿವಿಧ ತೆರಿಗೆಗಳನ್ನು ಹೇರುವ ಸರ್ಕಾರಗಳು, ಸತ್ತವರ ಅಂತ್ಯಕ್ರಿಯೆ ನೆರವೇರಿಸಲೂ ತೆರಿಗೆಗಳನ್ನು ಹೇರುವ ಮೂಲಕ ಜನರ ನೆಮ್ಮದಿಯನ್ನು ಹಾಳುಗೆಡಹುತ್ತಿದೆ. ಈಗಾಗಲೇ ಪಾಲಿಕೆಯು ಆಸ್ತಿ ತೆರಿಗೆಯಲ್ಲಿ ಪ್ರತಿ ಮನೆಗೂ ಸ್ಮಶಾನ ತೆರಿಗೆ ಎಂದು ೧೫೦ ರೂ. ಗಳನ್ನು ಸಂದಾಯ ಮಾಡಿಸಿಕೊಳ್ಳುತ್ತಿದ್ದು, ೫೦೦ ರೂ. ಶುಲ್ಕವನ್ನು ನಿಗದಿಪಡಿಸಿರುವುದು ಸರಿಯಲ್ಲ ಅನಿಸುತ್ತದೆ. ಬಹುಶಃ ಅಂತಹ ಮನೆಯಲ್ಲಿನ ಸದಸ್ಯರ ಮರಣಕ್ಕಿಂತಲೂ ಹೆಚ್ಚೇ ಸ್ಮಶಾನ ತೆರಿಗೆ ಸಂದಾಯವಾಗುತ್ತದೆ ಅಲ್ಲವೇ. ಅಷ್ಟಕ್ಕೂ ಪ್ರತಿ ವರುಷವೂ ಸ್ಮಶಾನಕ್ಕೆ ತೆರಿಗೆದಾರರು ಹೋಗಿ ಬರುತ್ತಾರೆಯೇ ಎಂಬ ವಿವೇಚನೆಯೂ ಇಲ್ಲವಲ್ಲ. ಒಟ್ಟಿನಲ್ಲಿ ಈ ಸರ್ಕಾರಕ್ಕೆ ‘ಹಣ ಸೂರೆ ಹೆಣ ಸೂರೆ’ ಎಂಬ ಗಾದೆ ಮಾತು ಸೂಕ್ತವಾಗಿ ಅನ್ವಯಿಸುತ್ತದೆ.

– ವಿಜಯ್ ಹೆಮ್ಮಿಗೆ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇಂಧನದ ಮೇಲಿನ ತೆರಿಗೆ ಇಳಿಸಿ

ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು…

3 mins ago

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

4 hours ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

4 hours ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

4 hours ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

4 hours ago