ಓದುಗರ ಪತ್ರ
ಓದುಗರ ಪತ್ರ |
ಡುಬ್ಬ ನಿರ್ಮಿಸಿ ಮೈಸೂರಿನ ವಿಜಯನಗರ ನೀರಿನ ಟ್ಯಾಂಕ್ನಿಂದ ತ್ರಿನೇತ್ರ ವೃತ್ತದ ಕಡೆ ಸಾಗುವ ಮುಖ್ಯ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿರುತ್ತದೆ.
ತ್ರಿನೇತ್ರ ವೃತ್ತದಿಂದ ಬರುವ ವಾಹನಗಳು ರೈಲ್ವೆ ಬಡಾವಣೆ ಕಡೆಗೆ ತಿರುವು ತೆಗೆದುಕೊಳ್ಳುವ ಸ್ಥಳದಲ್ಲಿ ರಸ್ತೆ ಡುಬ್ಬವಿಲ್ಲದೆ ವಾಹನ ಚಾಲಕರು ಪರದಾಡುವಂತಾಗಿದೆ. ಅದೇ ರೀತಿ ವಿದ್ಯಾ ವರ್ಧಕ ಇಂಜಿನಿಯ ರಿಂಗ್ ಕಾಲೇಜು ಕಡೆಯಿಂದ ಮುಖ್ಯ ರಸ್ತೆಗೆ ಸೇರುವ ವಾಹನಗಳು ಕೂಡ ತೊಂದರೆಗೊಳಗಾಗುತ್ತಿವೆ.
ವಾಟರ್ ಟ್ಯಾಂಕಿನಿಂದ ಇಳಿಜಾರಿನಲ್ಲಿ ಬರುವ ವಾಹನಗಳು ವೇಗವಾಗಿಯೇ ಚಲಿಸುತ್ತವೆ. ಹಾಗಾಗಿ ಎದುರಿನಿಂದ ಬರುವ ವಾಹನಗಳು ಬಲ ತಿರುವು ತೆಗೆದುಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ತಪ್ಪಿಸಿ ಸಂಚಾರ ವ್ಯವಸ್ಥೆ ಸುಗಮವಾಗುವಂತೆ ಅನುವಾಗಲು ಸಪ್ತಗಿರಿ ಗ್ಲಾಸ್ ಅಂಗಡಿ ಮುಂದೆ, ಕೆ. ಎಫ್. ಸಿ. ಎದುರು ಹಾಗೂ ವಿದ್ಯಾವರ್ಧಕ ಇಂಜಿನಿಯ ರಿಂಗ್ ಕಾಲೇಜು ರಸ್ತೆಗಳಲ್ಲಿ ಡುಬ್ಬಗಳನ್ನು ನಿರ್ಮಿಸಿದಲ್ಲಿ ವಾಹನ ಸವಾರರಿಗೆ ಅನುಕೂಲವಾಗುವುದಲ್ಲದೇ, ಅನಾಹುತಗಳನ್ನು ತಪ್ಪಿಸಬಹುದಾಗಿದೆ.
– ವಿಜಯ್ ಹೆಮ್ಮಿಗೆ, ಮೈಸೂರು
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…