ಓದುಗರ ಪತ್ರ
ಓದುಗರ ಪತ್ರ |
ಡುಬ್ಬ ನಿರ್ಮಿಸಿ ಮೈಸೂರಿನ ವಿಜಯನಗರ ನೀರಿನ ಟ್ಯಾಂಕ್ನಿಂದ ತ್ರಿನೇತ್ರ ವೃತ್ತದ ಕಡೆ ಸಾಗುವ ಮುಖ್ಯ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿರುತ್ತದೆ.
ತ್ರಿನೇತ್ರ ವೃತ್ತದಿಂದ ಬರುವ ವಾಹನಗಳು ರೈಲ್ವೆ ಬಡಾವಣೆ ಕಡೆಗೆ ತಿರುವು ತೆಗೆದುಕೊಳ್ಳುವ ಸ್ಥಳದಲ್ಲಿ ರಸ್ತೆ ಡುಬ್ಬವಿಲ್ಲದೆ ವಾಹನ ಚಾಲಕರು ಪರದಾಡುವಂತಾಗಿದೆ. ಅದೇ ರೀತಿ ವಿದ್ಯಾ ವರ್ಧಕ ಇಂಜಿನಿಯ ರಿಂಗ್ ಕಾಲೇಜು ಕಡೆಯಿಂದ ಮುಖ್ಯ ರಸ್ತೆಗೆ ಸೇರುವ ವಾಹನಗಳು ಕೂಡ ತೊಂದರೆಗೊಳಗಾಗುತ್ತಿವೆ.
ವಾಟರ್ ಟ್ಯಾಂಕಿನಿಂದ ಇಳಿಜಾರಿನಲ್ಲಿ ಬರುವ ವಾಹನಗಳು ವೇಗವಾಗಿಯೇ ಚಲಿಸುತ್ತವೆ. ಹಾಗಾಗಿ ಎದುರಿನಿಂದ ಬರುವ ವಾಹನಗಳು ಬಲ ತಿರುವು ತೆಗೆದುಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ತಪ್ಪಿಸಿ ಸಂಚಾರ ವ್ಯವಸ್ಥೆ ಸುಗಮವಾಗುವಂತೆ ಅನುವಾಗಲು ಸಪ್ತಗಿರಿ ಗ್ಲಾಸ್ ಅಂಗಡಿ ಮುಂದೆ, ಕೆ. ಎಫ್. ಸಿ. ಎದುರು ಹಾಗೂ ವಿದ್ಯಾವರ್ಧಕ ಇಂಜಿನಿಯ ರಿಂಗ್ ಕಾಲೇಜು ರಸ್ತೆಗಳಲ್ಲಿ ಡುಬ್ಬಗಳನ್ನು ನಿರ್ಮಿಸಿದಲ್ಲಿ ವಾಹನ ಸವಾರರಿಗೆ ಅನುಕೂಲವಾಗುವುದಲ್ಲದೇ, ಅನಾಹುತಗಳನ್ನು ತಪ್ಪಿಸಬಹುದಾಗಿದೆ.
– ವಿಜಯ್ ಹೆಮ್ಮಿಗೆ, ಮೈಸೂರು
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…