ಓದುಗರ ಪತ್ರ
ಓದುಗರ ಪತ್ರ |
ಡುಬ್ಬ ನಿರ್ಮಿಸಿ ಮೈಸೂರಿನ ವಿಜಯನಗರ ನೀರಿನ ಟ್ಯಾಂಕ್ನಿಂದ ತ್ರಿನೇತ್ರ ವೃತ್ತದ ಕಡೆ ಸಾಗುವ ಮುಖ್ಯ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿರುತ್ತದೆ.
ತ್ರಿನೇತ್ರ ವೃತ್ತದಿಂದ ಬರುವ ವಾಹನಗಳು ರೈಲ್ವೆ ಬಡಾವಣೆ ಕಡೆಗೆ ತಿರುವು ತೆಗೆದುಕೊಳ್ಳುವ ಸ್ಥಳದಲ್ಲಿ ರಸ್ತೆ ಡುಬ್ಬವಿಲ್ಲದೆ ವಾಹನ ಚಾಲಕರು ಪರದಾಡುವಂತಾಗಿದೆ. ಅದೇ ರೀತಿ ವಿದ್ಯಾ ವರ್ಧಕ ಇಂಜಿನಿಯ ರಿಂಗ್ ಕಾಲೇಜು ಕಡೆಯಿಂದ ಮುಖ್ಯ ರಸ್ತೆಗೆ ಸೇರುವ ವಾಹನಗಳು ಕೂಡ ತೊಂದರೆಗೊಳಗಾಗುತ್ತಿವೆ.
ವಾಟರ್ ಟ್ಯಾಂಕಿನಿಂದ ಇಳಿಜಾರಿನಲ್ಲಿ ಬರುವ ವಾಹನಗಳು ವೇಗವಾಗಿಯೇ ಚಲಿಸುತ್ತವೆ. ಹಾಗಾಗಿ ಎದುರಿನಿಂದ ಬರುವ ವಾಹನಗಳು ಬಲ ತಿರುವು ತೆಗೆದುಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ತಪ್ಪಿಸಿ ಸಂಚಾರ ವ್ಯವಸ್ಥೆ ಸುಗಮವಾಗುವಂತೆ ಅನುವಾಗಲು ಸಪ್ತಗಿರಿ ಗ್ಲಾಸ್ ಅಂಗಡಿ ಮುಂದೆ, ಕೆ. ಎಫ್. ಸಿ. ಎದುರು ಹಾಗೂ ವಿದ್ಯಾವರ್ಧಕ ಇಂಜಿನಿಯ ರಿಂಗ್ ಕಾಲೇಜು ರಸ್ತೆಗಳಲ್ಲಿ ಡುಬ್ಬಗಳನ್ನು ನಿರ್ಮಿಸಿದಲ್ಲಿ ವಾಹನ ಸವಾರರಿಗೆ ಅನುಕೂಲವಾಗುವುದಲ್ಲದೇ, ಅನಾಹುತಗಳನ್ನು ತಪ್ಪಿಸಬಹುದಾಗಿದೆ.
– ವಿಜಯ್ ಹೆಮ್ಮಿಗೆ, ಮೈಸೂರು
ಇಂದೋರ್ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…
ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…
ಚಂದ್ರಶೇಖರ್ ಮೂರ್ತಿ.ಕೆ.ಎಸ್ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…
ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…