ಓದುಗರ ಪತ್ರ
ಮೈಸೂರು ವಿಶ್ವವಿದ್ಯಾನಿಲಯದ ಜೈನಶಾಸ್ತ್ರ ಮತ್ತು ಪ್ರಾಕೃತ ಅಧ್ಯಯನ ವಿಭಾಗದ ಎದುರು ಚರಂಡಿ ನೀರು ಉಕ್ಕಿ ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ವಿಶ್ವವಿದ್ಯಾನಿಲಯದಲ್ಲಿ ಸ್ವಚ್ಛತೆ ನಿರ್ವಹಣೆ, ನಲ್ಲಿ ಮತ್ತು ಒಳಚರಂಡಿ ನಿರ್ವಹಣೆಗೆಂದೇ ಪ್ರತ್ಯೇಕ ವಿಭಾಗವಿದ್ದು, ಸಿಬ್ಬಂದಿಯೂ ಇರುತ್ತಾರೆ. ಆದರೆ ಹಲವಾರು ದಿನಗಳಿಂದ ರಸ್ತೆಯ ಮೇಲೆ ಚರಂಡಿ ನೀರು ಹರಿಯುತ್ತಿದ್ದರೂ ವಿಶ್ವವಿದ್ಯಾನಿಲಯದ ಜೈನ ಶಾಸ್ತ್ರ ಮತ್ತು ಪ್ರಾಕೃತ ಅಧ್ಯಯನ ಕೇಂದ್ರದ ಮುಖ್ಯಸ್ಥರು ಹಾಗೂ ಸಿಬ್ಬಂದಿಯ ಗಮನಕ್ಕೆ ಬಾರದಿರುವುದು ವಿಪರ್ಯಾಸ.
ಸ್ವಚ್ಛತಾ ಸಿಬ್ಬಂದಿಯೂ ಕಂಡೂ ಕಾಣದಂತಿದ್ದಾರೆ. ಸಂಬಂಧಪಟ್ಟವರು ಕೂಡಲೇ ಹಾಳಾಗಿರುವ ಚರಂಡಿ ಪೈಪ್ಲೈನ್ ದುರಸ್ತಿ ಮಾಡುವ ಮೂಲಕ ನೈರ್ಮಲ್ಯ ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ.
– ನವೀನ್, ಮೈಸೂರು
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…