ಮಳೆಗಾಲ ಆರಂಭವಾಗಲಿದ್ದು ಬಿರುಬೇಸಿಗೆ ಸಹಜವಾಗಿ ಕಡಿಮೆಯಾಗಲಿದೆ. ಮಳೆಗಾಲ ಒಂದಷ್ಟು ಅನಾಹುತಗಳನ್ನೂ ತಂದೊಡ್ಡುತ್ತದೆ. ಕೆಲವೊಮ್ಮೆ ಊಹಿಸಲೂ ಕಷ್ಟ ಸಾಧ್ಯವಾಗಬಹುದು. ಮೈಸೂರು ನಗರಪಾಲಿಕೆ ವ್ಯಾಪ್ತಿಯ ತಗ್ಗು ಪ್ರದೇಶಗಳ ನಿವಾಸಿಗಳಿಗೆ ಮಳೆಗಾಲದ ಸಂದರ್ಭದಲ್ಲಿ ಆತಂಕ ಇದ್ದದ್ದೇ, ಹಲವೆಡೆ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುತ್ತಿಲ್ಲ. ಹಾಗಾಗಿ ರಸ್ತೆಗಳು ಜಲಾವೃತವಾಗಿ ಜನಸಾಮಾನ್ಯರು ಪರದಾಡುವಂತಾಗಿದೆ.
ಇದನ್ನೂ ಓದಿ:- ಓದುಗರ ಪತ್ರ | ‘ಆಪರೇಷನ್ ಸಿಂಧೂರ’ ಮಾಹಿತಿಯನ್ನು ಸರ್ಕಾರವೇ ಜನರಿಗೆ ನೀಡಲಿ
ಚರಂಡಿಗಳಲ್ಲಿ ಕೊಳಚೆ ನೀರು ಸರಾಗವಾಗಿ ಹರಿದು ಹೋಗದಿದ್ದರೆ, ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳುತ್ತವೆ. ಈ ಸಂದರ್ಭಗಳಲ್ಲಿ ಡೆಂಗ್ಯೂ ಮತ್ತಿತರ ಮಾರಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ನಗರ ಪಾಲಿಕೆ ಅಽಕಾರಿಗಳು, ಮುಂಜಾಗ್ರತೆಯಾಗಿ ಚರಂಡಿಗಳಲ್ಲಿ ಹೂಳು ತೆಗೆಸಬೇಕು, ರಸ್ತೆಗಳಲ್ಲಿರುವ ಹಳ್ಳ- ದಿಣ್ಣೆಗಳನ್ನು ಮುಚ್ಚಿಸಲು ತುರ್ತಾಗಿ ಕ್ರಮವಹಿಸಬೇಕು. ಉದಾಸೀನ ತೋರಿದರೆ ಜನರು, ಮಕ್ಕಳ ಜೀವ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಕಡೆಗಣಿಸಿದಂತಾಗುತ್ತದೆ. ಹಾಗಾಗಿ ಸಂಬಂಧ ಪಟ್ಟ ಅಽಕಾರಿಗಳು ಮಳೆಗಾಲದಲ್ಲಿ ಉಂಟಾಗಬಹುದಾದ ಅನಾಹುತ ಗಳನ್ನು ಸಮರ್ಪಕವಾಗಿ ಎದುರಿಸಲು ಮುಂಜಾಗ್ರತೆ ಕ್ರಮವಹಿಸಬೇಕು.
– ಜಿ. ಶಿವಶಂಕರ್,ಜಯನಗರ,ಮೈಸೂರು
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…
ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…