ಎಡಿಟೋರಿಯಲ್

ದಾಖಲೆ ಬಜೆಟ್; ಹಾದಿ ಸುಲಭದ್ದಲ್ಲ

ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ ಬೆನ್ನಲ್ಲೇ ಪಕ್ಷದ ಹೈಕಮಾಂಡ್ ಅವಕಾಶ ಕೊಟ್ಟರೆ ಇನ್ನೂ ಎರಡು ಬಜೆಟ್ ಮಂಡಿಸುವುದಾಗಿ ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದ ಈ ವರ್ಷದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.ಗಳಷ್ಟಿದ್ದು, ಕಳೆದ ವರ್ಷದ ಬಜೆಟ್ ಗಾತ್ರ ೪,೦೯,೫೪೯ ರೂ. ಗಳಷ್ಟಿತ್ತು. ಈ ಬಜೆಟ್‌ನಲ್ಲಿ ೩೮,೪೫೫ ಕೋಟಿ ರೂ.ಗಳಷ್ಟು ಹೆಚ್ಚಿನ ಗಾತ್ರದ ಬಜೆಟ್ ಮಂಡಿಸಿದ್ದು, ಶೇ.೯.೪ ರಷ್ಟು ಬೆಳವಣಿಗೆಯಾಗಿದೆ. ಹದಿನೆಂಟು ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಗುಜರಾತ್ ಹಣಕಾಸು ಸಚಿವರಾಗಿದ್ದ ವಜುಭಾಯ್ ವಾಲಾ ಅವರ ಹಾದಿಯಲ್ಲಿ ಸಾಗಿರುವ ಸಿದ್ದರಾಮಯ್ಯ ಅವರು ಈ ಸಾಧನೆಗೆ ಸವೆಸಿದ ಹಾದಿ ಸುಲಭದ್ದಲ್ಲ, ೧೩ ಬಾರಿ ಬಜೆಟ್ ಮಂಡಿಸಿದ್ದ ರಾಮಕೃಷ್ಣ ಹೆಗಡೆ, ಎಂಟು ಬಾರಿ ಬಜೆಟ್ ಮಂಡಿಸಿರುವ ಬಿ.ಎಸ್.ಯಡಿಯೂರಪ್ಪ ಅವರನ್ನು ಹಿಂದಿಕ್ಕಿ ೧೭ನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ಬರೆದಿರುವುದು ಮಾತ್ರವಲ್ಲ, ಮುಖ್ಯಮಂತ್ರಿ ಎಚ್.ಡಿ.ದೇವೇಗೌಡರ ಸಂಪುಟದಲ್ಲಿ ಹಣಕಾಸು ಮಂತ್ರಿಯಾಗಿ ಚೊಚ್ಚಲ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿದ್ದಾಗ ನೂರು ಕುರಿ ಲೆಕ್ಕ ಹಾಕಲು ಬಾರದ ಕುರುಬನಿಗೆ ರಾಜ್ಯದ ಬಜೆಟ್ ಮಂಡಿಸುವ ಸಾಮರ್ಥ್ಯವಿದೆಯೇ ಎಂದು ಕುಹಕವಾಡಿದವರೆಲ್ಲ ಮೂಗಿನ ಮೇಲೆ ಬೆರಳಿಡುವಂತೆ ಮಾಡಿದ್ದಾರೆ.

ಈ ಬಜೆಟ್ ಜನಕೇಂದ್ರಿತ ಬಜೆಟ್, ನಾಡಿನ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿ ಕೇಂದ್ರಿತ ಬಜೆಟ್. ನಾಡಿನ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಯನ್ನು ಧ್ಯಾನಿಸಿ ನಾವು ಈ ಬಜೆಟ್ಟನ್ನು ರೂಪಿಸಿದ್ದೇವೆ. ಹಾಗಾಗಿ ಈ ಬಜೆಟ್ ಕೇವಲ ಅಂಕಿಸಂಖ್ಯೆಗಳ ಆಟವಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಆರ್ಥಿಕ ಶಿಸ್ತಿನ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಾ, ವಿಪರೀತ ಸಾಲ ಮಾಡಿ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದ್ದಾರೆ ಎಂಬ ಆರೋಪವನ್ನು ಅಲ್ಲಗಳೆಯದೆ, ಸಾಲವಿಲ್ಲದೆ ವ್ಯವಸ್ಥೆಯನ್ನು ಮುನ್ನಡೆಸಲಾಗುವುದಿಲ್ಲ. ಆದರೆ, ಸಾಲವನ್ನು ಯಾವ ಮಟ್ಟದಲ್ಲಿ ಮಾಡಬೇಕು ಎಂಬುದಕ್ಕೆ ವಿತ್ತೀಯ ಹೊಣೆಗಾರಿಕೆ ಮತ್ತು ಬಜೆಟ್ ನಿರ್ವಹಣೆ ಕಾಯ್ದೆಯನ್ನು ಮಾಡಿಕೊಂಡಿದ್ದೇವೆ. ನಾವು ಮಾಡುವ ಸಾಲವು ಈ ಕಾಯ್ದೆಯಲ್ಲಿ ರೂಪಿಸಿಕೊಂಡ ನಿಯಮಗಳ ಒಳಗೆ ಇರಬೇಕಾಗುತ್ತದೆ. ಬಿಜೆಪಿಯವರಿಗೆ ರಾಜ್ಯದ ಸಾಲದ ಬಗ್ಗೆ ಮಾತನಾಡುವ ನೈತಿಕತೆ ಉಳಿಸಿಕೊಂಡಿಲ್ಲ. ರಾಜ್ಯಗಳಿಗೆ ಕೊಡಬೇಕಾದುದನ್ನು ಕೊಡದೆ, ರಾಜ್ಯಗಳ ಕುತ್ತಿಗೆ ಹಿಸುಕಿ ರಾಜ್ಯಗಳಿಂದ ತೆರಿಗೆ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರದ ಸಾಲವು ನಿರ್ಮಲಾ ಸೀತಾರಾಮನ್ ಅವರ ಬಜೆಟ್ ದಾಖಲೆಗಳ ಪ್ರಕಾರ ೨೦೨೭ರ ಮಾರ್ಚ್ ಅಂತ್ಯಕ್ಕೆ ೨೧೮.೬೩ ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಲಿದೆ. ೨೦೧೪ರ ಮಾರ್ಚ್‌ನಿಂದ ಈವರೆಗೆ ೧೬೫.೫೨ ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಸಾಲ ಮಾಡಲಾಗಿದೆ. ಇದರಲ್ಲಿ ಈ ಹತ್ತು ವರ್ಷಗಳಲ್ಲಿ ತೀರಿಸಿರುವ ಸಾಲ ಇಲ್ಲ. ಮೋದಿ ಸರ್ಕಾರ ರೈತರ ಸಾಲ ಮನ್ನಾ ಮಾಡುವುದಾಗಲೀ ಅಥವಾ ಇನ್ನಿತರ ಯಾವುದೇ ಜನ ಕಲ್ಯಾಣ ಕಾರ್ಯಕ್ರಮಗಳನ್ನುಜಾರಿಗೊಳಿಸಿಲ್ಲ ಎಂದೂ ಚಾಟಿ ಬೀಸಿರುವುದಲ್ಲದೇ, ತಮ್ಮ ಇತ್ತೀಚಿನ ಎಲ್ಲಾ ಬಜೆಟ್ಗಳಲ್ಲೂ ಕೇಂದ್ರ ಸರ್ಕಾರದ ವಿರುದ್ಧ ತಗಾದೆ ಎತ್ತಿದಂತೆಯೇ ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯವಾಗುತ್ತಿದೆ ಎಂದು ಜರಿದಿರುವುದಲ್ಲದೇ ಮನ್ರೇಗಾ ಮರುಜಾರಿಗಾಗಿ ಕಾನೂನು ಹೋರಾಟ ಮಾಡುವುದಾಗಿ ಬಜೆಟ್‌ನಲ್ಲೇ ಹೇಳುವ ಮೂಲಕ ಕೇಂದ್ರದ ಜತೆಗೆ ಸಮರ ಮುಂದುವರಿಸಿದ್ದಾರೆ.

ಪಕ್ಷದೊಳಗೆ ಸಿಎಂ ಕುರ್ಚಿಗೆ ಟವೆಲ್ ಹಾಕಲು ಕಾದಿರುವ ಹಲವು ನಾಯಕರಿಗೆ ನಿರಾಶೆಯಾಗುವಂತೆ ಹೈಕಮಾಂಡ್ ಅವಕಾಶ ನೀಡಿದರೆ ಇನ್ನೂ ಎರಡು ಬಜೆಟ್ ಮಂಡಿಸುವೆ ಎನ್ನುವ ಮೂಲಕ ೨೦೨೮ರವರೆಗೆ ಕುರ್ಚಿ ಬಿಡಲ್ಲ ಎಂಬ ಮನದ ಇಂಗಿತ ವ್ಯಕ್ತಪಡಿಸುವ ಮೂಲಕ ಪಕ್ಷದ ನಾಯಕರ ಒಳ ಬೇಗುದಿ ಹೆಚ್ಚಿಸಿದ್ದಾರೆ.

” ಈ ಬಜೆಟ್ ಜನಕೇಂದ್ರಿತ ಬಜೆಟ್, ನಾಡಿನ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿ ಕೇಂದ್ರಿತ ಬಜೆಟ್. ನಾಡಿನಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಯನ್ನು ಧ್ಯಾನಿಸಿ ನಾವು ಈ ಬಜೆಟ್ಟನ್ನು ರೂಪಿಸಿದ್ದೇವೆ. ಹಾಗಾಗಿ ಈ ಬಜೆಟ್ ಕೇವಲ ಅಂಕಿಸಂಖ್ಯೆಗಳ ಆಟವಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.”

 

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

6 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

6 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

7 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

16 hours ago