ಎಡಿಟೋರಿಯಲ್

ಸಂಪಾದಕೀಯ : ಸೂಕ್ತ ಭದ್ರತೆಯೊಂದಿಗೆ ಯಶಸ್ವಿಯಾಗಲಿ ಮಡಿಕೇರಿ ದಸರಾ..!

ಸೂಕ್ತ ಭದ್ರತೆಯೊಂದಿಗೆ ಯಶಸ್ವಿಯಾಗಲಿ ಮಡಿಕೇರಿ ದಸರಾ..! 

ಐತಿಹಾಸಿಕ ಮಡಿಕೇರಿ ಉತ್ಸವಕ್ಕೆ ಕರಗಗಳು ಹೊರಡುವುದರೊಂದಿಗೆ ಚಾಲನೆ ದೊರೆತಿದೆ. ಈ ಬಾರಿ ಸಂಪ್ರದಾಯಗಳೊಂದಿಗೆ ಅದ್ಧೂರಿ ದಸರಾ ಆಚರಣೆಗೆ ನಿರ್ಧರಿಸಲಾಗಿದ್ದು, ೨ ಲಕ್ಷಕ್ಕೂ ಅಧಿಕ ಮಂದಿ ಮಡಿಕೇರಿಗೆ ಆಗಮಿಸುವ ನಿರೀಕ್ಷೆ ಇದೆ. ಸೂಕ್ಷ್ಮ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಷ್ಟೊಂದು ಪ್ರಮಾಣದ ಜನತೆಗೆ ಸೂಕ್ತ ಭದ್ರತೆಯೊಂದಿಗೆ ಅಗತ್ಯ ಸೌಲಭ್ಯ ಕೂಡ ಒದಗಿಸಬೇಕಿದೆ.
ಹೌದು. ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವ ಜನರು ರಾತ್ರಿ ಮಡಿಕೇರಿ ದಸರಾದ ದಶಮಂಟಪಗಳ ಶೋಭಾಯಾತ್ರೆ ವೀಕ್ಷಿಸಲು ಕೊಡಗಿನತ್ತ ಆಗಮಿಸುತ್ತಾರೆ. ಹತ್ತಾರು ಚಲನವಲನಗಳನ್ನೊಳಗೊಂಡ ಕಲಾಕೃತಿಗಳ ಕಥಾ ಹಂದರ ದೇವಲೋಕವೇ ಧರೆಗಿಳಿದಂತೆ ಭಾಸವಾಗಿಸುತ್ತದೆ.
ಕಳೆದ ನಾಲ್ಕು ವರ್ಷಗಳಿಂದ ಪ್ರಕೃತಿ ವಿಕೋಪ ಹಾಗೂ ಕೊರೊನಾದಿಂದಾಗಿ ದಸರಾವನ್ನು ಸರಳವಾಗಿ ಆಚರಿಸಲಾಗಿತ್ತು. ನಾಲ್ಕು ವರ್ಷಗಳ ಬಳಿಕ ಈ ಬಾರಿ ಅದ್ಧೂರಿ ದಸರಾ ನಡೆಯುತ್ತಿರುವುದರಿಂದ ಜನಸಂಖ್ಯೆ ಸಹಜವಾಗಿಯೇ ಹೆಚ್ಚಳವಾಗಲಿದೆ.
ರಾತ್ರಿ ಮಂಜಿನ ನಗರಿಯ ಪ್ರಮುಖ ಬೀದಿಗಳಲ್ಲಿ ನಡೆಯುವ ಅದ್ಧೂರಿ ದಶಮಂಟಪಗಳ ಶೋಭಾಯಾತ್ರೆ ಕಣ್ತುಂಬಿಕೊಳ್ಳಲು ಮಹಿಳೆಯರು, ಯುವತಿಯರು, ಮಕ್ಕಳು ಕೂಡ ಆಗಮಿಸುತ್ತಾರೆ. ಸಹಜವಾಗಿ ಶೋಭಾಯಾತ್ರೆ ಸಂದರ್ಭ ನೂಕುನುಗ್ಗಲು ಉಂಟಾಗುವುದರಿಂದ ಮಹಿಳೆಯರಿಗೆ ಹೆಚ್ಚು ಅಸುರಕ್ಷತೆ ಕಾಡುತ್ತದೆ. ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಕಾರ್ಯೋನ್ಮುಖವಾಗಿದೆ.
ಈಗಾಗಲೇ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಮೀಪದ ಹಾಸನ, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಹೆಚ್ಚುವರಿ ಪೊಲೀಸರನ್ನು ಜಿಲ್ಲೆಗೆ ನಿಯೋಜಿಸಲಾಗುತ್ತದೆ. ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲು ನಿರ್ಧರಿಸಲಾಗಿದ್ದು, ಈ ಬಾರಿ ಜನಸಂಖ್ಯೆ ಹೆಚ್ಚಳವಾಗುವುದರಿಂದ ಇನ್ನಷ್ಟು ಹೆಚ್ಚುವರಿ ಪೊಲೀಸರ ನಿಯೋಜನೆ ಅನಿವಾರ್ಯವಾಗಿದೆ. ದಸರಾದಂದು ರಾತ್ರಿ ವೇಳೆ ಘರ್ಷಣೆ, ಕಲಹ, ಕೊಲೆಯಂತಹ ಅಹಿತಕರ ಘಟನೆಗಳು ನಡೆದಿರುವ ಉದಾಹರಣೆ ಇರುವುದರಿಂದ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಬೇಕಾಗಿದೆ. ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ನಗರಲ್ಲಿ ಟ್ಯೂಬ್‌ಲೈಟ್ ಅಳವಡಿಕೆ, ಸಿಸಿ ಕ್ಯಾಮೆರಾ ಅಳವಡಿಕೆಯಂತಹ ಮುಂಜಾಗ್ರತಾ ಕ್ರಮಗಳು ನಡೆಯುತ್ತಿದೆ. ಇದರೊಂದಿಗೆ ಡ್ರೋನ್ ಸೇರಿದಂತೆ ಉತ್ತಮ ಗುಣಮಟ್ಟದ ಕ್ಯಾಮೆರಾಗಳಿಂದ ಚಿತ್ರೀಕರಣ ಮಾಡಬೇಕಿದೆ. ನಿರ್ಜನ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಬೇಕಿದೆ.
ಲಕ್ಷಾಂತರ ಮಂದಿ ಕೊಡಗು ಜಿಲ್ಲೆಗೆ ಆಗಮಿಸುವುದರಿಂದ ಗಡಿ ಭಾಗಗಳಲ್ಲೂ ಎಚ್ಚರಿಕೆ ವಹಿಸಬೇಕಿದೆ. ಜೊತೆಗೆ ಸಾವಿರಾರು ಸಂಖ್ಯೆಯ ವಾಹನಗಳು ಜಿಲ್ಲೆಯತ್ತ ಆಗಮಿಸುವುದರಿಂದ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕಿದೆ. ನಗರ ಪ್ರದೇಶಗಳಲ್ಲಿ ವಾಹನ ದಟ್ಟಣೆ ಉಂಟಾಗುವುದನ್ನು ತಡೆಗಟ್ಟುವ ಪ್ರಯತ್ನವನ್ನು ಪೊಲೀಸ್ ಇಲಾಖೆ ಮಾಡಬೇಕಿದೆ.
ದಸರಾ ನಡೆದ ಮರುದಿನ ಮಡಿಕೇರಿ ನಗರ ಕಸದ ಕೊಂಪೆಯಾಗಿ ಮಾರ್ಪಾಡಾಗುತ್ತದೆ. ಪ್ರತಿವರ್ಷ ಕಸದ ಸಮಸ್ಯೆ ದಸರಾದಲ್ಲಿ ಕಾಡುತ್ತದೆ. ಹೀಗಾಗಿ ಅಗತ್ಯವಿರುವ ಕಡೆಗಳಲ್ಲಿ ಕಸದ ಬುಟ್ಟಿಗಳನ್ನು ತಾತ್ಕಾಲಿಕವಾಗಿ ಅಳವಡಿಸಬೇಕಿದೆ. ನಗರಸಭೆ ಈ ಸಂಬಂಧ ಗಮನಹರಿಸಬೇಕಿದ್ದು, ಸಾರ್ವಜನಿರಲ್ಲಿಯೂ ಅರಿವು ಮೂಡಿಸುವ ಫಲಕಗಳನ್ನು ಅಳವಡಿಸುವ ಮೂಲಕ ನಗರದ ಸ್ವಚ್ಛತೆಯನ್ನು ಕಾಪಾಡಬೇಕಿದೆ.
ದಸರಾ ಸಂದರ್ಭ ಮದ್ಯ ನಿಷೇಧ ಮಾಡಲಾಗುತ್ತದೆ. ಪ್ರತಿವರ್ಷ ಮದ್ಯ ನಿಷೇಧ ಮಾಡಿದರೂ ಶೋಭಾಯಾತ್ರೆ ಸಂದರ್ಭ ಮದ್ಯದ ಅಮಲು ಕಂಡುಬರುತ್ತದೆ. ಕೆಲವರು ಮದ್ಯ ಸೇವನೆ ಮಾಡಿ ಅತಿರೇಕದಿಂದ ವರ್ತಿಸುವ ಘಟನೆಗಳು ನಡೆಯುತ್ತವೆ. ಹೀಗಾಗಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಅಬಕಾರಿ ಇಲಾಖೆ ಕೂಡ ಮುನ್ನೆಚ್ಚರಿಕೆ ವಹಿಸಬೇಕಿದೆ.  ಹೊರ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯ ಯುವ ಸಮೂಹ ದಸರಾ ವೀಕ್ಷಣೆಗೆ ಕೊಡಗಿನತ್ತ ಆಗಮಿಸುತ್ತಾರೆ. ಕೆಲ ಯುವ ಸಮೂಹ ಮಾದಕ ವಸ್ತುಗಳನ್ನು ಜಿಲ್ಲೆಗೆ ತರುವ ಸಾಧ್ಯತೆ ಇದೆ. ಈ ಹಿಂದೆ ನಡೆದ ಕೊಲೆ ಪ್ರಕರಣದಲ್ಲಿ ಮಾದಕ ವಸ್ತು ಸೇವನೆ ಕಂಡುಬಂದಿರುವುದರಿಂದ ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ.
ನಿರ್ಜನ ಪ್ರದೇಶಗಳಲ್ಲಿ ಸೇರುವ ಯುವ ಸಮೂಹದ ಬಗ್ಗೆಯೂ ಪೊಲೀಸರು ಗಮನ ಹರಿಸಬೇಕಿದೆ.
ದಶಮಂಟಪಗಳ ತೀರ್ಪುಗಾರಿಕಾ ಪ್ರದರ್ಶನದ ಸಂದರ್ಭ ಹೆಚ್ಚಿನ ನೂಕು ನುಗ್ಗಲು ಉಂಟಾಗುತ್ತದೆ. ಈ ಸಂದರ್ಭ ಸಾರ್ವಜನಿಕರು ಪರಸ್ಪರ ಕೈ ಮಿಲಾಯಿಸುವ ಘಟನೆಗಳೂ ನಡೆಯುತ್ತದೆ. ಹೀಗಾಗಿ ಮಂಟಪದ ಬಳಿಯೂ ಪೊಲೀಸ್ ಇಲಾಖೆ ಭದ್ರತೆ ಒದಗಿಸಬೇಕಿದೆ. ಮಂಟಪಗಳ ಸ್ವಯಂ ಸೇವಕರು ಕೂಡ ಪ್ರದರ್ಶನ ಸಮಯದಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ.
ಕಡೆಯದಾಗಿ ಈ ಬಾರಿಯ ದಸರಾ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೆ ಯಶಸ್ವಿಯಾಗಲು ಪೊಲೀಸರ ಸಹಕಾರ, ಕೊಡುಗೆ ಅತ್ಯಗತ್ಯವಾಗಿದೆ. ಹಾಗೆಯೇ ಭದ್ರತೆ ಒದಗಿಸುವ ಪೊಲೀಸರಿಗೆ ವಸತಿ ಹಾಗೂ ಊಟದ ವ್ಯವಸ್ಥೆಗೆ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು.
andolanait

Recent Posts

ಓದುಗರ ಪತ್ರ: ಪ್ರತಿಯೊಬ್ಬರಿಗೂ ನಾಗರಿಕ ಪ್ರಜ್ಞೆ ಅಗತ್ಯ

ಕೆಲವು ಜನರು ತಮ್ಮ ಮನೆಯ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳ, ರಸ್ತೆ ಬದಿಯಲ್ಲಿ ಸುರಿಯುವ ಮೂಲಕ ವಿರೂಪಗೊಳಿಸಿ ಸ್ವಚ್ಛ ಭಾರತದ ನಿಯಮವನ್ನು…

48 mins ago

ಓದುಗರ ಪತ್ರ: ಸಾರ್ವಜನಿಕವಾಗಿ ಶುಚಿ ಪ್ಯಾಡ್ ದೊರೆಯಲಿ

ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಮಹಿಳೆಯರು ಒಂದು…

50 mins ago

ಓದುಗರ ಪತ್ರ: ವಿದೇಶಿ ಸಂಗ್ರಹಾಲಯದಿಂದ ನಾಡಿನ ಶಿಲ್ಪಗಳನ್ನು ಹಿಂಪಡೆಯಿರಿ

ಕರ್ನಾಟಕದ ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯ ಭಾಗವಾಗಿರುವ ಅನೇಕ ಅಮೂಲ್ಯವಾದ ಶಿಲ್ಪಗಳು ಬ್ರಿಟಿಷ್ ಮ್ಯೂಜಿಯಂ (ಲಂಡನ್), ಲೂವ್ರೇ ಮ್ಯೂಜಿಯಂ (ಪ್ಯಾರಿಸ್),…

52 mins ago

ಓದುಗರ ಪತ್ರ: ಬದನವಾಳು ಗ್ರಾಮ ಸ್ವರಾಜ್ಯದ ಕನಸನ್ನು ನೆನಪಿಸಿದ ಆಂದೋಲನ

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಪುಟ್ಟ ಗ್ರಾಮ ಬದನವಾಳುಗೆ ೧೯೨೭ಹಾಗೂ ೧೯೩೪ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭೇಟಿ ನೀಡಿ ಕೈಮಗ್ಗ…

54 mins ago

ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ಬ್ಯಾಂಕ್ ಠೇವಣಿಗಳಿಗಿಂತ ವೇಗವಾಗಿ ಸಾಲಗಳು ಬೆಳೆಯುತ್ತಿವೆ

ಪ್ರೊ.ಆರ್.ಎಂ.ಚಿಂತಾಮಣಿ ೨೦೨೫-೨೬ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದ ಕೊನೆಯ ವೇಳೆಗೆ (ಡಿಸೆಂಬರ್೨೦೨೫) ದೇಶದಲ್ಲಿ ಉಪಭೋಗ (Consumption) ಮುಂದಾಗಿರುವ ಆರ್ಥಿಕ ಚಟುವಟಿಕೆಗಳು…

58 mins ago

ರಾಜ್ಯದ ಇತಿಹಾಸದ ಪುಟಗಳಲ್ಲಿ ಮೈಸೂರಿನ ದಾಖಲೆ

ಕೆ.ಬಿ.ರಮೇಶನಾಯಕ ದೇಶದಲ್ಲೇ ಹಲವು ಏಳು-ಬೀಳುಗಳು, ಸ್ಥಿತ್ಯಂತರವನ್ನು ಕಂಡ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯು ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ. ಮುಖ್ಯಮಂತ್ರಿಯಾಗಿ…

1 hour ago