ಸಂಪಾದಕೀಯ

ದಿಲ್ಲಿಯಲ್ಲಿ ಆಪ್ಗೆ ಸೋಲಿನ ಆಘಾತ; ಸ್ವಯಂಕೃತ ಅಪರಾಧ

ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ವಿಧಾನಸಭೆ ಚುನಾವಣೆಯಲ್ಲಿ ಸತತ ಹ್ಯಾಟ್ರಿಕ್ ಸಾಧಿಸುವ ಆಪ್ ಆದ್ಮಿ ಪಕ್ಷದ ಕನಸು ನುಚ್ಚುನೂರಾಗಿದೆ. ೨೦೨೦ರಲ್ಲಿ ನಡೆದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರ ಮಾತಿಗೆ ಮನ್ನಣೆ ನೀಡದ ಮತದಾರರು ಸತತ ಎರಡನೇ ಬಾರಿಗೆ ಅರವಿಂದ ಕೇಜ್ರಿವಾಲ್ ನೇತೃತ್ವದ ಆಪ್‌ಗೆ ಅಧಿಕಾರ ನೀಡಿದ್ದರು. ಆಗ ಮುಖಭಂಗಕ್ಕೆ ಒಳಗಾಗಿದ್ದ ಬಿಜೆಪಿ ಈ ಬಾರಿ ನಿಚ್ಚಳ ಬಹುಮತ ಗಳಿಸುವ ಮೂಲಕ ಅಂದಿನ ರಾಜಕೀಯ ಸೇಡನ್ನು ತೀರಿಸಿಕೊಂಡಿದೆ. ಇಲ್ಲಿ ಒಂದೂ ಸ್ಥಾನ ಗೆಲ್ಲಲಾಗದ ಕಾಂಗ್ರೆಸ್‌ಗೆ ಕೂಡ ತೀವ್ರ ಮುಖಭಂಗವಾಗಿದೆ.

೨೦೧೨ರಲ್ಲಿ ಕೇಂದ್ರದಲ್ಲಿದ್ದ ಯುಪಿಎ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ನೇತೃತ್ವದಲ್ಲಿ ಹೋರಾಟ ನಡೆಯಿತು. ಈ ಚಳವಳಿಯ ಗರ್ಭದಿಂದಲೇ ಹುಟ್ಟಿಕೊಂಡದ್ದು ಆಪ್. ಅರವಿಂದ ಕೇಜ್ರಿವಾಲ್ ಸರ್ಕಾರ ಅಬಕಾರಿ ನೀತಿ ಬದಲಾವಣೆಯಲ್ಲಿ ಅಕ್ರಮ ಎಸಗಿದೆ ಎಂಬ ಆರೋಪ ಬಹುಶಃ ಆಪ್‌ಗೆ ಮುಳುವಾಗಿದೆ. ಅದಕ್ಕಿಂತ ಮುಖ್ಯವಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಕಟುವಾಗಿ ಟೀಕಿಸಿದ್ದ ಬಿಜೆಪಿಯು ಹೊಸದಿಲ್ಲಿಯಲ್ಲಿ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಯೋಜನೆಗಳ ಭರವಸೆ ಮೂಲಕವೇ ಗದ್ದಿಗೆ ಹಿಡಿಯಲು ಮುಂದಾಗಿರುವುದು ಎಲ್ಲ ರಾಜಕೀಯ ಪಕ್ಷಗಳಿಗೂ ಪಾಠ ಎನ್ನಬಹುದು.

೨೭ ವರ್ಷಗಳಿಂದ ದಿಲ್ಲಿಯಲ್ಲಿ ಅಧಿಕಾರದ ಬರ ಎದುರಿಸಿದ್ದ ಬಿಜೆಪಿಗೆ ಈ ಬಾರಿ ಮತದಾರರು ಅವಕಾಶ ನೀಡಿದ್ದಾರೆ. ಇಲ್ಲಿ ಜಾತಿ, ಮತ, ಧರ್ಮಗಳಿಗಿಂತ ಹೆಚ್ಚಾಗಿ ಬಡವರ ಪರವಾಗಿ ಬಿಜೆಪಿ  ಘೋಷಿಸಿದ ಯೋಜನೆಗಳು ಮತ ಗಳಿಸಿಕೊಡುವಲ್ಲಿ ಯಶಸ್ವಿಯಾಗಿವೆ. ಇಂಡಿಯಾ ಒಕ್ಕೂಟದಿಂದ ಆಪ್ ಹೊರಗೆ ಬಂದಿದ್ದು ನಿರೀಕ್ಷೆ ಮಟ್ಟದಲ್ಲಿ ಪಕ್ಷಕ್ಕೆ ಲಾಭವಾಗಿಲ್ಲ. ಆದರೆ, ೧೦ ವರ್ಷಗಳ ಹಿಂದೆ ಜನಸಾಮಾನ್ಯರ ಆಶಾಕಿರಣವಾಗಿ ದಿಲ್ಲಿ ಗದ್ದಿಗೆ ಏರಿದ ಕೇಜ್ರಿವಾಲ್ ನೇತೃತ್ವದ ಆಪ್, ಹಲವು ಉಚಿತ ಯೋಜನೆಗಳ ಅನುಷ್ಠಾನದ ಮೂಲಕ ಜನಪ್ರಿಯತೆಯನ್ನು ಗಳಿಸಿತ್ತು. ಬಿಜೆಪಿಯ ಪಟ್ಟುಗಳಿಗೆ ಪ್ರತಿಪಟ್ಟುಗಳನ್ನು ಹಾಕುತ್ತಲೇ ಅಧಿಕಾರ ಉಳಿಸಿಕೊಂಡು ಸಾಗಿತ್ತು. ಆದರೆ, ಎರಡನೇ ಅವಧಿಯಲ್ಲಿ ಅಬಕಾರಿ ನಿಯಮಾವಳಿ ಜಾರಿಯಲ್ಲಿ ಅಕ್ರಮ ಎಸಲಾಗಿದೆ ಎಂಬ ಆರೋಪದಡಿ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ಜೈಲುಪಾಲಾಗಿದ್ದು ಪಕ್ಷದ ಹಿನ್ನಡೆಗೆ ಕಾರಣವಾಗಿರಬಹುದು.

ಜಾಮೀನು ಪಡೆದು ಜೈಲಿನಿಂದ ಹೊರಬಂದರೂ ಮತದಾರರ ಮನಸ್ಸು ಗೆಲ್ಲುವುದಕ್ಕೆ ಸೂಕ್ತ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಲಿಲ್ಲ. ಬಹುಶಃ ಮುಖ್ಯಮಂತ್ರಿಯಾಗಿ ಅತಿಶಿ ಅವರನ್ನು ಆಯ್ಕೆ ಮಾಡಿದ್ದು ಪಕ್ಷದೊಳಗೆ ಅಸಮಾಧಾನಕ್ಕೆ ಕಾರಣವಾಗಿದ್ದು ಚುನಾವಣೆಯಲ್ಲಿ ಈ ಫಲಿತಾಂಶಕ್ಕೆ ಕಾರಣವಾಗಿರಬಹುದು. ಅಲ್ಲದೆ, ಕೇಜ್ರಿವಾಲ್ ಅವರ ಅತಿಯಾದ ಆತ್ಮವಿಶ್ವಾಸವೂ ಈ ಪರಿಸ್ಥಿತಿಯನ್ನು ತಂದಿದೆ ಎನ್ನಬಹುದು. ಅಲ್ಲದೆ, ಟಿಕೆಟ್ ಹಂಚಿಕೆಯಲ್ಲೂ ಕೇಜ್ರಿವಾಲ್ ಎಡವಿದರು. ೨೦ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿತು. ಅವರೆಲ್ಲರೂ ಅಸಮಾಧಾನಿತರಾಗಿದ್ದರು. ಈ ಎಲ್ಲ ಅಂಶಗಳೂ ಕೇಜ್ರಿವಾಲ್ ಆಡಳಿತ ಕೊನೆಯಾಗಲು ಕಾರಣವಾದವು. ಬಿಜೆಪಿ ಎರಡೂವರೆ ದಶಕಗಳ ನಂತರ ರಾಜಧಾನಿಯಲ್ಲಿ ರಾಜ್ಯಭಾರ ಮಾಡಲು ಹೊರಟಿದೆ. ಆದರೆ, ಇಷ್ಟು ವರ್ಷಗಳು ಅಧಿಕಾರ ಕೊಡದ ಮತದಾರರ ಮನದೊಳಗಿನ ತುಮುಲಗಳನ್ನು ಅರ್ಥ ಮಾಡಿಕೊಂಡು ಅಧಿಕಾರ ನಡೆಸಿದರೆ ಬಿಜೆಪಿಗೆ ಮುಂದಿನ ದಿನಗಳಲ್ಲಿ ಉತ್ತಮ ಅವಕಾಶ ಲಭಿಸಬಹುದು. ಅದರ ಹೊರತಾಗಿ ತನ್ನ ಚಾಳಿ ಮುಂದುವರಿಸಿದರೆ, ಆಪ್‌ಗಿಂತ ಹೀನಾಯ ಪರಿಸ್ಥಿತಿ ಎದುರಿಸಿದರೂ ಅಚ್ಚರಿ ಇಲ್ಲ.

ಇನ್ನು ಒಂದು ಕಾಲದಲ್ಲಿ ದಿಲ್ಲಿಯ ಸಾರ್ವಭೌಮ ಎಂಬಂತಿದ್ದ, ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್‌ನ್ನು ಈ ಫಲಿತಾಂಶ ಅವನತಿಯ ಅಂಚಿಗೆ ತಂದು ನಿಲ್ಲಿಸಿದೆ. ಒಂದೇ ಒಂದು ಸ್ಥಾನವನ್ನೂ ಗೆಲ್ಲದ ಕಾಂಗ್ರೆಸ್ ಪಕ್ಷವೂ ರಾಜಕೀಯನೀತಿಜ್ಞ, ಪ್ರಬಲ ನಾಯಕರ ಕೊರತೆಯಿಂದ ಬಳಲುತ್ತಿದೆ. ಈ ಬಗ್ಗೆ ಪಕ್ಷದ ನಾಯಕರೆಲ್ಲರೂ ಗಂಭೀರ ಆಲೋಚನೆ ಮಾಡಬೇಕಾಗಿದೆ.

” ಜಾಮೀನು ಪಡೆದು ಜೈಲಿನಿಂದ ಹೊರಬಂದರೂ ಮತದಾರರ ಮನಸ್ಸು ಗೆಲ್ಲುವುದುಕ್ಕೆ ಸೂಕ್ತ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಲಿಲ್ಲ. ಬಹುಶಃ ಮುಖ್ಯಮಂತ್ರಿಯಾಗಿ ಅತಿಶಿ ಅವರನ್ನು ಆಯ್ಕೆ ಮಾಡಿದ್ದು ಪಕ್ಷದೊಳಗೆ ಅಸಮಾಧಾನಕ್ಕೆ ಕಾರಣವಾಗಿದ್ದು ಚುನಾವಣೆಯಲ್ಲಿ ಈ ಫಲಿತಾಂಶಕ್ಕೆ ಕಾರಣವಾಗಿರಬಹುದು. ಅಲ್ಲದೆ, ಕೇಜ್ರಿವಾಲ್ ಅವರ ಅತಿಯಾದ ಆತ್ಮವಿಶ್ವಾಸವೂ ಈ ಪರಿಸ್ಥಿತಿ ತಂದಿದೆ ಎನ್ನಬಹುದು. ಅಲ್ಲದೆ, ಟಿಕೆಟ್ ಹಂಚಿಕೆಯಲ್ಲೂ ಕೇಜ್ರಿವಾಲ್ ಎಡವಿದರು. ೨೦ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿತು. ಅವರೆಲ್ಲರೂ ಅಸಮಾಧಾ ನಿತರಾಗಿದ್ದರು. ಈ ಎಲ್ಲ ಅಂಶಗಳೂ ಕೇಜ್ರಿವಾಲ್ ಆಡಳಿತ ಕೊನೆಯಾಗಲು ಕಾರಣವಾದವು”

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

40 mins ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

2 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

6 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

7 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

8 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

9 hours ago