ಸಂಪಾದಕೀಯ

ಸಣ್ಣಪುಟ್ಟ ವ್ಯಾಪಾರಿಗಳಿಗೂ ಜಿಎಸ್‌ಟಿ ಅರಿವು ಅಗತ್ಯ

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅಂದರೇನು ಎಂಬುದನ್ನೇ ಇನ್ನೂ ಸರಿಯಾಗಿ ಅರ್ಥ ಮಾಡಿಕೊಳ್ಳದ ಬಹುತೇಕ ಸಣ್ಣಪುಟ್ಟ ವ್ಯಾಪಾರಿಗಳಿಗೆ ಲಕ್ಷಾಂತರ ರೂ. ತೆರಿಗೆ ಪಾವತಿಸಬೇಕು ಎಂಬುದಾಗಿ ನೋಟಿಸ್ ನೀಡಿದರೆ, ಅವರ ಸ್ಥಿತಿಅಯೋಮಯವಾಗಿರುತ್ತದೆ. ಬೇಕರಿ, ಚಹ ಅಂಗಡಿ, ತರಕಾರಿ ಅಂಗಡಿಗಳ ಮಾರಾಟಗಾರರೂ ಸೇರಿದಂತೆ ಅನೇಕ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ಜಾರಿಯಾಗಿದ್ದು, ಆದರೆ, ರಾಜ್ಯ ಸರ್ಕಾರ ತೆರಿಗೆ ಬಾಕಿ ವಸೂಲಿ ಮಾಡುವುದಿಲ್ಲ ಎಂದು ಹೇಳಿದೆ.

ವಾಸ್ತವವಾಗಿ ವಾರ್ಷಿಕ ೪೦ ಲಕ್ಷ ರೂ. ವಹಿವಾಟು ನಡೆಸಿದ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ಜಾರಿ ಮಾಡಲಾಗುತ್ತದೆ. ಆದರೆ, ಪೆಟ್ಟಿಗೆ ಅಂಗಡಿಯವರು, ಬೀದಿಬದಿಯ ವ್ಯಾಪಾರಿಗಳು,ಹೂ- ಹಣ್ಣು, ತರಕಾರಿ ಮಾರಾಟಗಾರರಿಗೆ ನೋಟಿಸ್ ನೀಡುವಂತಿಲ್ಲ. ರಾಜ್ಯ ವಾಣಿಜ್ಯ ಇಲಾಖೆಯು ಸಾವಿರಾರು ವ್ಯಾಪಾರಿಗಳಿಗೆ ನೋಟಿಸ್ ಕಳುಹಿಸಿದೆ ಎನ್ನಲಾಗಿದೆ. ಸದ್ಯಕ್ಕೆ ಸರ್ಕಾರ ಬಾಕಿ ತೆರಿಗೆ ಪಾವತಿಸುವ ಅಗತ್ಯ ಇಲ್ಲ ಎಂದು ಹೇಳಿರುವುದರಿಂದ ನೋಟಿಸ್ ಪಡೆದಿರುವ ವ್ಯಾಪಾರಿಗಳಿಗೆ ಸ್ವಲ್ಪ ಸಮಾಧಾನ ತಂದಿದೆ. ದೇಶದಲ್ಲಿ ಯುಪಿಐ ಆಧಾರಿತ ಡಿಜಿಟಲ್ ಪೇಮೆಂಟ್ ಆವರಿಸಿಕೊಳ್ಳುವುದಕ್ಕೆ ಮುಂಚೆ ಯಾವುದೇ ವ್ಯಾಪಾರಿಗಳ ವಹಿವಾಟು ನಗದು ರೂಪದಲ್ಲಿ ನಡೆಯುತ್ತಿತ್ತು. ಅದರಿಂದ ವ್ಯಾಪಾರಿಗಳ ಆದಾಯ ಎಷ್ಟು ಎನ್ನುವುದನ್ನು ಲೆಕ್ಕ ಹಾಕಲು ಸಾಧ್ಯವಾಗುತ್ತಿರಲಿಲ್ಲ. ಈಗ ಬಹುತೇಕ ವ್ಯವಹಾರ ಯುಪಿಐ ಮೂಲಕ ಆಗುತ್ತಿದ್ದು, ಪ್ರತಿ ರೂಪಾಯಿಯಲೆಕ್ಕವೂ ಲಭ್ಯವಾಗುತ್ತಿದೆ.

ಬಹುತೇಕ ಸಣ್ಣಪುಟ್ಟ ವ್ಯಾಪಾರಿಗಳು ತಮ್ಮ ವಹಿವಾಟಿನಲ್ಲಿ ನಗದು ಮತ್ತು ಚಿಲ್ಲರೆ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು ಎಂಬ ಏಕೈಕ ಉದ್ದೇಶದಿಂದ ಕ್ಯೂಆರ್ ಸ್ಕ್ಯಾನ್ ನ್ನು ಅಳವಡಿಸಿಕೊಂಡಿದ್ದಾರೆ. ಆದರೆ, ಲಕ್ಷಾಂತರ ರೂ. ತೆರಿಗೆ ಪಾವತಿಸಬೇಕು ಅಂತ ಜಿಎಸ್‌ಟಿ ನೋಟಿಸ್ ಬರುತ್ತಿದ್ದಂತ ಬೆಚ್ಚಿಬಿದ್ದರು.

ಅಷ್ಟೇ ಅಲ್ಲ. ಡಿಜಿಟಲ್ ಪೇಮೆಂಟ್ ವ್ಯವಸ್ಥೆಯಿಂದ ವಿಮುಖರಾಗಿದ್ದಾರೆ. ಚಿಲ್ಲರೆ ಸಮಸ್ಯೆ ತಪ್ಪಿಸಲು ಯುಪಿಐ ನೆರವಾಗಿತ್ತು. ಸದ್ಯದ ನೋಟಿಸ್ ಗೊಂದಲದಿಂದಾಗಿ ಈ ವವಸ್ಥೆಯ ಬಗ್ಗೆ ಜನರಲ್ಲಿ ಅನುಮಾನ ಮೂಡಿದೆ.

ಜಿಎಸ್‌ಟಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾನೂನು. ಇಡೀ ದೇಶ ದಲ್ಲಿ ಏಕ ರೂಪದ ತೆರಿಗೆ ಸಂದಾಯ ಪದ್ಧತಿ ಇರಬೇಕು. ಅಲ್ಲದೆ, ತೆರಿಗೆ ಪಾವತಿಯಿಂದ ಯಾರೂ ನುಣುಚಿಕೊಳ್ಳ ಬಾರದು ಎಂಬುದು ಈ ಕಾನೂನಿನ ಉದ್ದೇಶ. ಇದರಲ್ಲಿರುವ ಗೊಂದಲಗಳನ್ನು ಕೇಂದ್ರ ಸರ್ಕಾರವೇ ನಿವಾರಣೆ ಮಾಡಬೇಕು. ರಾಜ್ಯ ಸರ್ಕಾರಗಳು ಯಾವುದೇ ಉಪ ನಿಯಮಾವಳಿಗಳನ್ನು ರೂಪಿಸಲು ಸಾಧ್ಯವಿಲ್ಲ. ಜಿಎಸ್‌ಟಿಯಲ್ಲಿ ರಾಜ್ಯ ಸರ್ಕಾರವು ಮೂಕಪ್ರೇಕ್ಷಕನಂತೆ ಇರಬೇಕಾಗಿದೆ.

ಸಣ್ಣಪುಟ್ಟ ವ್ಯಾಪಾರಿಗಳು, ಜಿಎಸ್‌ಟಿ ಪರಿಗಣಿಸಿರುವ ಆದಾಯ ಮೊತ್ತದಲ್ಲಿ ಸಾಲ, ವೈಯಕ್ತಿಕ ವಹಿವಾಟು ಕೂಡ ಸೇರಿದೆ. ನೋಟಿಸ್ ನೀಡುವುದು ತಪ್ಪಲ್ಲ. ಆದರೆ ಮಧ್ಯವರ್ತಿಗಳಿಗೆ ಅವಕಾಶನೀಡದೆ, ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಮಾರ್ಗದರ್ಶನ ನೀಡಬೇಕು ಎಂದು ಮನವಿ ಮಾಡಿದ್ದು, ಇದರಲ್ಲಿ ಅರ್ಥವಿದೆ. ರಾಜ್ಯ ಸರ್ಕಾರಕ್ಕೆ ಜಿಎಸ್‌ಟಿ ವಿಷಯದಲ್ಲಿ ಯಾವುದೇ ಅಧಿಕಾರ ಇರದಿದ್ದರೂ, ಬೀದಿಬದಿ ವ್ಯಾಪಾರಿಗಳು, ತರಕಾರಿ ಮಾರಾಟಗಾರರಂತಹವರಿಗೆ ಜಿಎಸ್‌ಟಿ ಬಗ್ಗೆ ಅರ್ಥವಾಗುವಂತೆ ಸರಳ ವಿಧಾನದಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾರ್ಷಿಕ ೪೦ ಲಕ್ಷ ರೂ. ವಹಿವಾಟು ಹೊಂದಿರುವ ವ್ಯಾಪಾರಿಗಳು ಜಿಎಸ್‌ಟಿನೋಂದಣಿಯನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದು ಹೇಳಿದ್ದಾರೆ. ಅದಕ್ಕೆ ಪೂರಕವಾಗಿ ರಾಜ್ಯಾದ್ಯಂತ ಜಿಎಸ್‌ಟಿ ಕುರಿತ ಅರಿವಿನ ಅಭಿಯಾನ ನಡೆಸುವ ಬಗ್ಗೆ ಸರ್ಕಾರ ಕೂಡ ಯೋಚಿಸಬೇಕು. ವಾಸ್ತವವಾಗಿ ಜಿಎಸ್‌ಟಿ ಕುರಿತು ಕೇವಲ ವ್ಯಾಪಾರಿಗಳಲ್ಲದೆ, ಜನಸಾಮಾನ್ಯರೂ ಅರ್ಥೈಸಿಕೊಳ್ಳುವುದು ಅಗತ್ಯ. ಪ್ರಸ್ತುತ ಕಾಲಘಟ್ಟದಲ್ಲಿ ಕಾರ್ಪೊರೇಟ್ ಕಂಪೆನಿಗಳಷ್ಟು ದೊಡ್ಡ ಪ್ರಮಾಣದಲ್ಲಿ ಅಲ್ಲದಿದ್ದರೂ ಸಾಕಷ್ಟು ವ್ಯಾಪಾರಿಗಳು ಜಿಎಸ್‌ಟಿ ವ್ಯಾಪ್ತಿಗೆ ಸೇರುತ್ತಿದ್ದಾರೆ.

ಆದರೆ, ಅವರಿಗೆ ಆ ಬಗ್ಗೆ ಮಾಹಿತಿ ಇರುವುದಿಲ್ಲ. ದಿಢೀರ್ ನೋಟಿಸ್ ಜಾರಿಯಾಗಿಬಿಟ್ಟರೆ ಕಕ್ಕಾಬಿಕ್ಕಿಯಾಗುವುದು ಖಂಡಿತ. ಇಂತಹ ಪ್ರಕರಣಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಹಾಗೂ ವಾಣಿಜ್ಯ ಇಲಾಖೆ ಜಾಗ್ರತೆವಹಿಸಬೇಕು. ಸಣ್ಣ ಪ್ರಮಾಣದ ವ್ಯಾಪಾರಿಗಳ ಅನುಕೂಲಕ್ಕಾಗಿ ಜಿಎಸ್‌ಟಿ ಸಹಾಯವಾಣಿಯನ್ನೂ ತೆರೆಯುವುದು ಸೂಕ್ತ. ಆ ಮೂಲಕ ಸಣ್ಣಪುಟ್ಟ ವ್ಯಾಪಾರಿಗಳಲ್ಲಿ ಉದ್ಭವಿಸಿರುವ ಜಿಎಸ್‌ಟಿ ಗೊಂದಲವನ್ನು ನಿವಾರಿಸಬೇಕು.

” ಜಿಎಸ್‌ಟಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾನೂನು. ಇಡೀ ದೇಶದಲ್ಲಿ ಏಕ ರೂಪದ ತೆರಿಗೆ ಸಂದಾಯ ಪದ್ಧತಿ ಇರಬೇಕು. ಅಲ್ಲದೆ, ತೆರಿಗೆ ಪಾವತಿಯಿಂದ ಯಾರೂ ನುಣುಚಿಕೊಳ್ಳಬಾರದು ಎಂಬುದು ಈ ಕಾನೂನಿನ ಉದ್ದೇಶ. ಇದರಲ್ಲಿರುವ ಗೊಂದಲಗಳನ್ನು ಕೇಂದ್ರ ಸರ್ಕಾರವೇ ನಿವಾರಣೆ ಮಾಡಬೇಕು. ರಾಜ್ಯ ಸರ್ಕಾರಗಳು ಯಾವುದೇ ಉಪ ನಿಯಮಾವಳಿಗಳನ್ನು ರೂಪಿಸಲು ಸಾಧ್ಯವಿಲ್ಲ. ಜಿಎಸ್‌ಟಿಯಲ್ಲಿ ರಾಜ್ಯ ಸರ್ಕಾರವು ಮೂಕಪ್ರೇಕ್ಷಕನಂತೆ ಇರಬೇಕಾಗಿದೆ.”

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್
Tags: Andolanagst

Recent Posts

ದೆಹಲಿಯಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್‌ ಘೋಷಣೆ

ನವದೆಹಲಿ: ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ…

4 hours ago

ರಾಜ್ಯದಲ್ಲಿ ಮತ್ತಷ್ಟು ತಗ್ಗಲಿದೆ ಮಳೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ…

6 hours ago

ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಎಚ್ಚರಿಕೆ

ಕಠ್ಮಂಡು: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯ ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ…

6 hours ago

ಓದುಗರ ಪತ್ರ: ಸಚಿವರಿಬ್ಬರ ಹೇಳಿಕೆಗಳು ‘ಲಕ್ಷ್ಮಣರೇಖೆ’ ಮೀರದಿರಲಿ

ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು…

12 hours ago

ಓದುಗರ ಪತ್ರ: ‘ಸಂಧ್ಯಾ ಕಿರಣ’ ಯೋಜನೆಯ ವ್ಯಾಪ್ತಿಗೆ ವಯೋನಿಗದಿ ಬೇಡ

ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ…

12 hours ago

ಓದುಗರ ಪತ್ರ: ಗುರು-ಶಿಷ್ಯರ ಸಂಬಂಧ ವರ್ಣನಾತೀತ

ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು…

12 hours ago