• ಕೀರ್ತಿ ಬೈಂದೂರು
ಸಿನಿಮಾ ನೋಡುವುದಕ್ಕೆಂದು ಗೆಳತಿಯರು ಒಟ್ಟಾಗಿ ಥಿಯೇಟರ್‌ನಲ್ಲಿ ಕೂತಿದ್ದೆವು. ‘ಇನ್ನೇನು ರಾಷ್ಟ್ರಗೀತೆ ಬರತ್ತೆ, ಏಳೋದಕ್ಕೆ ತಯಾರಾಗಿರು ಅಂತ ಪಕ್ಕದಲ್ಲಿ ಕೂತ ಅಜ್ಜ ಮೊದಲೇ ಅಜ್ಜಿಯನ್ನು ಎಬ್ಬಿಸಿದರು. ಸಿನಿಮಾ ಆರಂಭವಾಗಿ ಹತ್ತು ನಿಮಿಷ ಕಳೆದಿರಲಿಕ್ಕೂ ಇಲ್ಲ, ಅಷ್ಟರಲ್ಲಿ ಈ ಅಜ್ಜ ಸಿನಿ ವಿಮರ್ಶೆಗೆ ತೊಡಗಿದ್ದೇ. ಅಷ್ಟಕ್ಕೂ ಕಾಣುತ್ತಿದ್ದ ಚಿತ್ರ, ಇತ್ತೀಚಿನ ಸಿನಿಮಾಗಳಿಗಿಂತ ಭಿನ್ನ ಕಥಾಹಂದರವನ್ನೇನೂ ಒಳಗೊಂಡಿರಲಿಲ್ಲ ಎನ್ನಿ. ವಿಚಿತ್ರವೆಂದರೆ ಈ ಅಜ್ಜ ಚಿತ್ರದ ಕತೆ ಹೋಲುವ ಇತರ ಸಿನಿಮಾಗಳ ಹೆಸರನು ಒಂದಾದ ಮೇಲೊಂದರಂತೆ ಹೇಳುತ್ತಲಿದ್ದರು!

ಹೆಸರಿಸಿದ ಕೆಲವೊಂದು ಸಿನಿಮಾಗಳನ್ನು ನೋಡಿರದ ನಮಗೆಲ್ಲಾ ಅಚ್ಚರಿ. ಹೇಗೆ ಸಾಧ್ಯ ಕೇಳೋಣವೆಂದು ಮಧ್ಯೆ ಬಾಯಿ ಹಾಕಿದರೆ, ಎಲ್ಲಿ ಅವರ ಭಾವಪರವಶತೆಯನ್ನು ಕದಲಿಸಿದಂತಾಗುವುದೋ ಎಂದು ಸುಮ್ಮನಿದ್ದೆವು. ಈಗಿನ ನಾಯಕರು ನಮ್ಮ ಕಾಲದ ನಾಯಕರಿಗೆ ಸಮರಲ್ಲ ಎಂಬುದು ಅಜ್ಜ ಅಜ್ಜಿಯರ ಏಕಮತ. ಹಾಗಾಗಿಯೋ ಏನೋ ರೊಮ್ಯಾಂಟಿಕ್ ಹಾಡುಗಳ ಹಿನ್ನೆಲೆಯಲ್ಲಿ ಅವರಿಬ್ಬರು ರೆಟ್ರೋ ಸಿನಿಮಾದ ಹಿಟ್ ಜೋಡಿಗಳನ್ನು ಕಲ್ಪಿಸಿಕೊಳ್ಳುತ್ತಿದ್ದರು. ಅಜ್ಜಿ ಮೆಲುವಾಗಿ ಒಂದೆರಡು ಹಾಡುಗಳನ್ನು ಮೈಮರೆತು ಗುನುಗಿದ್ದರು. ನಾವು ಅಚ್ಚರಿಯಿಂದ ಅವರನ್ನೇ ನೋಡುತ್ತಿದ್ದೆವು. ಸುಮ್ಮನಿರೆಂದು ಪಾಪದ ಅಜ್ಜಿಯನ್ನು ಅಜ್ಜ ಎಚ್ಚರಿಸಿದ್ದೂ ಆಯಿತು. ಕಾಣುತ್ತಿದ್ದ ಚಿತ್ರದಲ್ಲಿ ನಾಯಕಿ ದೊಡ್ಡ ಕಾಯಿಲೆಯಲ್ಲಿ ಬಳಲುತ್ತಿರುತ್ತಾಳೆ, ಚಲನಚಿತ್ರದ ಒಳ ತಿರುಳು ಧನಾತ್ಮಕವಾಗೇ ಇದ್ದರೂ ನನ್ನಂಥವಳಿಗೆ ಟ್ರಾಜಿಡಿ ಸಿನೆಮಾವನ್ನು ಅರಗಿಸಿಕೊಳ್ಳುವುದಕ್ಕೆ ವಾರವಾದರೂ ಬೇಕು. ಆ ವರ್ಷ ನಂಗೆ ಹಾಗಾಗಿರ್ಲಿಲ್ವಾ? ಅವು, ಇವು ಎಷ್ಟು ಅನುಭವಿಸಿದ್ರು!” ಈ ಕತೆಗಳನ್ನು ಸ್ವಲ್ಪ ನಾಜೂಕಾಗಿ ಹೆಣೆದರೆ ಮಸ್ತಾದ ಸಿನಿಮಾ ತಯಾರೆಂಬ ತೀರ್ಮಾನಕ್ಕೂ ಬಂದರು. ಹೀಗೆ ಸಾವಿನೊಂದಿಗೆ ಮುಖಾಮುಖಿಯಾದ ಘಟನೆಗಳನ್ನು ನೆನಪಿಸುತ್ತಾ, ತೆರೆಯ ಮೇಲಣ ಕತೆಯನ್ನೂ ಮೀರಿಸಿದ ಪಂಟರಿವರು.

ಚಿತ್ರದಲ್ಲಿ ಬಾಡುತ್ತಿದ್ದ ಬಳ್ಳಿಯೊಂದನ್ನು ರಾತ್ರಿ ಕಳೆದು ಬೆಳಗಾಗುವುದರೊಳಗೆ ನಾಯಕ ಮರುಜೀವ ನೀಡುವ ದೃಶ್ಯವೊಂದಿದೆ. ನಾಯಕಿಗೆ ಹಸಿರೆಂದರೆ ಜೀವ. ಪರದೆಯಲ್ಲಿ ಹಸಿರ ಬಳ್ಳಿಯ ಚಿತ್ರ ಬರುತ್ತಿದ್ದಂತೆ ಇಡೀ ಥಿಯೇಟರ್ ಮೌನವಾಗಿ ಕಣ್ಣುಂಬಿಕೊಳ್ಳುತ್ತಿತ್ತು. ‘ಇವನು ಬಳ್ಳಿ ಹತ್ತಿರದ ಮಣ್ಣ ಗೆದರಿದ ತಕ್ಷಣ ಮಳೆ ಬರತ್ತಾ!’ ಎಂದು ಅಜ್ಜ ಲಾಜಿಕ್ ತಿಳಿಸುತ್ತಿದ್ದರೆ, ‘ಏ, ಎಷ್ಟೇ ಚೆನ್ನಾಗಿ ಹೂ ಅರಳಿದೆ ನೋಡ್ರಿ!’, ಮಾತುಗಳನ್ನು ಮೆಲ್ಲನೆ ಉಸುರುತ್ತಾ ಅಜ್ಜಿ ಮ್ಯಾಜಿಕ್ ಗಮನಿಸುತ್ತಿದ್ದರು. ಸಾಮ್ಯ ವೈರುಧ್ಯಗಳ ನಡುವೆ ಬದುಕಬೇಕಾದ ಈ ಜೀವನ ಅದೆಷ್ಟು ಸೋಜಿಗ ಎನಿಸಿದ್ದು, ಇವರಿಬ್ಬರನ್ನೂ ಕಂಡ ಮೇಲೆಯೇ. ಹೀಗೆ ಅಪ್ಪಟ ಜೀವಂತಿಕೆಯ ಕ್ಷಣಗಳನ್ನು ನಗುತ್ತಲೇ ಕಟ್ಟಿಕೊಳ್ಳುವ ಹಿರಿಜೀವಗಳು, ಸಿನೆಮಾ ಮುಗಿದ ಮೇಲೆ ಜನಸಂಧಿಯ ನೂಕುನುಗ್ಗಲಲ್ಲಿ ಅವರಿಬ್ಬರನ್ನೂ ಮಾತಾಡಿಸಲು ಸಾಧ್ಯವಾಗಲಿಲ್ಲ ಎಂಬ ಬೇಸರವಿದೆ.

ಹಿರಿಯರೊಡನೆ ಒಂದಿಷ್ಟು ಸಮಯವನ್ನು ಕಳೆಯುತ್ತೇನೆ ಎಂಬುವವರಿಗೆ ನಗುವಿಗೆ ಕೊರತೆಯಿಲ್ಲ. ಇಂತಹ ಬಹುತೇಕರಲ್ಲಿ ಆರೋಗ್ಯದ ಗುಟ್ಟು ಕೇಳಿದರೆ ನಗುವೆಂದೇ ಹೇಳುತ್ತಾರೆ. ಹಾಸ್ಯಪ್ರಜ್ಞೆಯಿಂದಲೇ ಬದುಕನ್ನು ಚೈತನ್ಯವಾಗಿರಿಸಿಕೊಂಡ ಹಿರಿಯರಿಗೆಲ್ಲ ಶರಣು.

ಸಿನೆಮಾ ಒಂದೇ ಅಲ್ಲಾ, ಮನೆಯಲ್ಲಿ ಹಿರಿಯರು ಧಾರಾವಾಹಿ ನೋಡುತ್ತಿದ್ದರೆ ಪಕ್ಕ ಕೂತ ನೆನಪುಗಳು ಹಲವರಿಗಿದೆ. ಕೆಲ ಹಿರಿಯರು ಅದರಲ್ಲಿ ಮುಳುಗಿ, ಕಳೆದುಹೋಗಿರುವುದಿದೆ. ತೆರೆಯ ಮೇಲೆ ನಡೆಯುತ್ತಿರುವುದೆಲ್ಲ ಸುಳ್ಳು ಎಂಬ ನಮ್ಮಂತಹವರ ಸಾಕ್ಷಿ ಈ ಹಿರಿಯರ ನ್ಯಾಯಾಲಯಕ್ಕೆ ಬೇಕಾಗಿಲ್ಲ. ಪ್ರತೀ ಪಾತ್ರಗಳ ಜೊತೆಗೆ ಮುಖಾಮುಖಿ ನಡೆಸಿ, ಭಾವನೆಗಳಿಗೆ ಅವರು ಸ್ಪಂದಿಸುವ ರೀತಿಯೇ ಭಿನ್ನ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

8 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

11 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

11 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

11 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

12 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

13 hours ago