ಸಂಪಾದಕೀಯ

ಇಡಿ ಅಧಿಕಾರಿಗಳಿಂದ ಮುಡಾ ಹಗರಣ ಮುಕ್ತ ಅಭಿಯಾನ ನಡೆಯಲಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಕಚೇರಿ ಮೇಲೆ ದಾಳಿ ಮಾಡಿದ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಎರಡು ದಿನಗಳ ಕಾಲ ಸತತವಾಗಿ ಕಡತಗಳನ್ನು ಪರಿಶೀಲಿಸಿದ್ದಾರೆ. ಮೈಸೂರು ತಾಲ್ಲೂಕು ಕಚೇರಿ ಮೇಲೆ ಕೂಡ ಅದೇ ಸಮಯದಲ್ಲಿ ಇಡಿ ದಾಳಿ ನಡೆದಿದೆ. ಮುಡಾದಿಂದ ಶೇ. 50:50 ಅನುಪಾತದಲ್ಲಿ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆಎಂಬ ಆರೋಪದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದರು. ಆದರೆ, ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರನ್ನು ಆರೋಪಿಗಳು ಎನ್ನಲಾಗಿರುವ 14 ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣವೇ ಇಡಿ ಅಧಿಕಾರಿಗಳಿಗೆ ಪ್ರಮುಖವಾಗಿದೆ. ಹಾಗಾಗಿಯೇ ಅವರು ಪಾರ್ವತಿ ಅವರಿಂದ ಭೂಮಿ ಸ್ವಾಧೀನಪಡಿಸಿಕೊಂಡಿರುವುದು, ನಿವೇಶನಗಳನ್ನು ಹಂಚಿಕೆ ಮಾಡಿರುವುದು ಮತ್ತಿತರ ದಾಖಲೆಗಳ ಬಗ್ಗೆ ಮುಡಾ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ದೇಶದ ಸಂವಿಧಾನಾತ್ಮಕವಾದ ಕಾನೂನುಗಳನ್ನು ಉಲ್ಲಂಘಿಸಿದವರು ಯಾರೇ ಆಗಿದ್ದರೂ ಶಿಕ್ಷಿಸಬೇಕಾದದ್ದು ಸರ್ಕಾರದ ಕರ್ತವ್ಯ. ಸಾಮಾಜಿಕ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಆಧಾರದಲ್ಲಿ ಇಡಿ ಅಧಿಕಾರಿಗಳು ಮುಡಾಗೆ ದಾಂಗುಡಿ ಇಟ್ಟಿದ್ದರು. ಹಿಂದಿನ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಮುಡಾ ಅವ್ಯವಹಾರ ಕುರಿತು ಬರೆದಿದ್ದ ಪತ್ರವನ್ನೂ ತಂದಿದ್ದರು ಎನ್ನಲಾಗಿದೆ. ಇಲ್ಲಿ ಪ್ರಮುಖ ಪ್ರಶ್ನೆಯೆಂದರೆ ಒಂದೇ ಒಂದು ಪ್ರಕರಣವನ್ನು ಮುಂದಿಟ್ಟುಕೊಂಡು ಇಡಿ ಅಧಿಕಾರಿಗಳು ಮುಡಾ ಮೇಲೆ ಮುಗಿಬಿದ್ದಿರುವುದೇಕೆ? ಅವರು ಪರಿಶೀಲನೆ ನಡೆಸಿದ ವೇಳೆಯಲ್ಲಿ ಅಧಿಕಾರಿಗಳಿಂದ ಉತ್ತರ ಪಡೆಯಲು ಬಯಸಿರುವ ಪ್ರಶ್ನೆಗಳು ಕೇವಲ ಪಾರ್ವತಿ ಅವರ ಪ್ರಕರಣವನ್ನು ಮಾತ್ರವೇ ಗುರಿ ಮಾಡಿದ್ದಂತೆ ಇವೆ. ಈ ಪ್ರಕರಣವನ್ನು ಆಮೂಲಾಗ್ರವಾಗಿ ತನಿಖೆ ನಡೆಸುವ ಇಡಿ ಅಧಿಕಾರಿಗಳ ಇರಾದೆ ಸ್ವಾಗತಾರ್ಹ. ಆದರೆ, ಒಂದೇ ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಮುಡಾದಲ್ಲಿ ಅಪರಿಮಿತ ಭ್ರಷ್ಟಾಚಾರ ನಡೆದಿದೆ ನೀಡಿರುವ ವ್ಯಕ್ತಿಯೇ ಎಂಬ ಆರೋಪಗಳು ಹಿಂದಿನಿಂದಲೂ ಕೇಳಿ ಮುಡಾದಲ್ಲಿ ಬರುತ್ತಿವೆ. ಈ ಹಿನ್ನೆಲೆಯಲ್ಲಿಯೇ ನಿರ್ಗಮಿತ ಮುಡಾ ಅಧ್ಯಕ್ಷರು ಕೂಡ ಆರೋಪ ಮಾಡಿದ್ದರು. ಆದರೆ, ಅದು ಅವರಿಗೇ ಮುಳುವಾಯಿತು. ಅಲ್ಲದೆ, ಸಿದ್ದರಾಮಯ್ಯ ಮತ್ತು ಅವರ ಪತ್ನಿ ಅವರನ್ನು ಸುತ್ತುವರಿಯಿತು. ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದರೂ, ಇಡಿ ಅಧಿಕಾರಿಗಳು ಮುಡಾದ ಮೇಲೆ ದಾಳಿ ನಡೆಸಿದ್ದು ಕುತೂಹಲಕಾರಿಯಾಗಿದೆ. ಅವರಿಗೆ ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ತನಿಖೆ ಬಗ್ಗೆ ನಂಬಿಕೆ ಇಲ್ಲ ಅನಿಸುತ್ತದೆ.

ವಾಸ್ತವವಾಗಿ ಮುಡಾದಲ್ಲಿ ನಡೆದಿವೆ ಎನ್ನಲಾದ ಎಲ್ಲ ಹಗರಣಗಳನ್ನೂ ಬಯಲು ಮಾಡುವ ನಿಟ್ಟಿನಲ್ಲಿ ಇಡಿ ತನಿಖೆ ಸಾಗಬೇಕು. ಪ್ರಸ್ತುತ ಅಂತಹ ಬೆಳವಣಿಗೆಗಳು ಕಾಣುತ್ತಿಲ್ಲ. ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿರುವ ವ್ಯಕ್ತಿಯೇ ಮುಡಾದಲ್ಲಿ ನಡೆದಿರುವ ಎಲ್ಲ ಹಗರಣಗಳನ್ನೂ ತನಿಖೆ ಮಾಡಬೇಕು ಎಂದು ಹೇಳಿದ್ದಾರೆ. ಆದರೆ, ಸದ್ಯಕ್ಕೆ ಇಡಿ ನಡೆಯಲ್ಲಿ ಅಂತಹ ಯಾವುದೇ ಹೆಜ್ಜೆ ಕಾಣುತ್ತಿಲ್ಲ.

ಮುಡಾವನ್ನು ಸ್ವಚ್ಛಗೊಳಿಸುವ ಅಭಿಯಾನದ ರೀತಿಯಲ್ಲೇ ಇಡಿತನಿಖೆ ನಡೆಯಬೇಕು. ಒಂದೇ ಒಂದು ಪ್ರಕರಣವನ್ನು ಬಹು ಚರ್ಚೆಯಾಗುವಂತೆ ತನಿಖೆ ನಡೆಸುವ ಮೂಲಕ ಜನರ ಗಮನವನ್ನು ಅದರತ್ತಲೇ ಕೇಂದ್ರೀಕರಿಸುವಂತೆ ಮಾಡುವುದು ಸಮಾಜಕ್ಕೆ ಹಿತಕರವಲ್ಲ. ಮುಡಾದಪ್ರತಿಯೊಂದು ಹಗರಣವನ್ನೂತಾರ್ಕಿಕ ಅಂತ್ಯಕ್ಕೆಕೊಂಡೊಯ್ಯುವ ನಿಟ್ಟಿನಲ್ಲಿ ಇಡಿ ಹೆಜ್ಜೆಗಳಿದ್ದರೆ ಜನಸಾಮಾನ್ಯರಲ್ಲಿ ಕೂಡ ನಂಬಿಕೆ ಮೂಡುತ್ತದೆ. ಅಲ್ಲದೆ, ಮುಂದೆ ಯಾವುದೇ ಕಾರಣಕ್ಕೂ ಮುಡಾದಲ್ಲಿ ಹಗರಣಗಳು ನಡೆಯದಂತೆ ಎಚ್ಚರಿಕೆಯ ಘಂಟೆ ಬಾರಿಸಿದಂತೆ ಆಗುತ್ತದೆ. ಹಾಗಾದಾಗ ಸ್ವಂತ ಸೂರಿಗಾಗಿ ಪರಿತಪಿಸುತ್ತಿರುವ ಕಡುಬಡವರಿಗೂ ಮುಡಾದಿಂದ ನಿವೇಶನ ಅಥವಾ ಮನೆ ದೊರೆಯುವ ಕಾಲ ಬರಬಹುದು. ಅದೂ ಕೈಗೆಟುಕುವ ದರದಲ್ಲಿ. ಇದನ್ನು ಸಾಕಾರಗೊಳಿಸುವ ಮಹತ್ವದ ಜವಾಬ್ದಾರಿ ಇಡಿ ಮೇಲೆ ಇದೆ. ಹಾಗಾದಾಗ ಇಡಿ ಅಕ್ಷರಶಃ ಜನಸ್ನೇಹಿಯೂ ಆಗುತ್ತದೆ. ಲೋಕಾಯುಕ್ತ ಕೂಡ ಇದೇ ಹಾದಿಯಲ್ಲಿ ಮುನ್ನಡೆಯಬೇಕು. ಆಗ ಮಾತ್ರ ಪ್ರಜಾತಂತ್ರ ವ್ಯವಸ್ಥೆಗೆ ನೈಜ ಅರ್ಥ ದೊರೆಯುತ್ತದೆ.

ವಾಸ್ತವವಾಗಿ ಮುಡಾದಲ್ಲಿ ನಡೆದಿವೆ ಎನ್ನಲಾದ ಎಲ್ಲ ಹಗರಣಗಳನ್ನೂ ಬಯಲು ಮಾಡುವ ನಿಟ್ಟಿನಲ್ಲಿ ಇಡಿ ತನಿಖೆ ಸಾಗಬೇಕು. ಪ್ರಸ್ತುತ ಅಂತಹ ಬೆಳವಣಿಗೆಗಳು ಕಾಣುತ್ತಿಲ್ಲ. ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿರುವ ವ್ಯಕ್ತಿಯೇ ಮುಡಾದಲ್ಲಿ ನಡೆದಿರುವ ಎಲ್ಲಾ ಹಗರಣಗಳನ್ನು ತನಿಖೆ ಮಾಡಬೇಕು ಎಂದು ಹೇಳಿದ್ದಾರೆ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

40 mins ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

2 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

6 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

7 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

8 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

9 hours ago