ಸಂಪಾದಕೀಯ

ಇಡಿ ಅಧಿಕಾರಿಗಳಿಂದ ಮುಡಾ ಹಗರಣ ಮುಕ್ತ ಅಭಿಯಾನ ನಡೆಯಲಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಕಚೇರಿ ಮೇಲೆ ದಾಳಿ ಮಾಡಿದ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಎರಡು ದಿನಗಳ ಕಾಲ ಸತತವಾಗಿ ಕಡತಗಳನ್ನು ಪರಿಶೀಲಿಸಿದ್ದಾರೆ. ಮೈಸೂರು ತಾಲ್ಲೂಕು ಕಚೇರಿ ಮೇಲೆ ಕೂಡ ಅದೇ ಸಮಯದಲ್ಲಿ ಇಡಿ ದಾಳಿ ನಡೆದಿದೆ. ಮುಡಾದಿಂದ ಶೇ. 50:50 ಅನುಪಾತದಲ್ಲಿ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆಎಂಬ ಆರೋಪದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದರು. ಆದರೆ, ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರನ್ನು ಆರೋಪಿಗಳು ಎನ್ನಲಾಗಿರುವ 14 ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣವೇ ಇಡಿ ಅಧಿಕಾರಿಗಳಿಗೆ ಪ್ರಮುಖವಾಗಿದೆ. ಹಾಗಾಗಿಯೇ ಅವರು ಪಾರ್ವತಿ ಅವರಿಂದ ಭೂಮಿ ಸ್ವಾಧೀನಪಡಿಸಿಕೊಂಡಿರುವುದು, ನಿವೇಶನಗಳನ್ನು ಹಂಚಿಕೆ ಮಾಡಿರುವುದು ಮತ್ತಿತರ ದಾಖಲೆಗಳ ಬಗ್ಗೆ ಮುಡಾ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ದೇಶದ ಸಂವಿಧಾನಾತ್ಮಕವಾದ ಕಾನೂನುಗಳನ್ನು ಉಲ್ಲಂಘಿಸಿದವರು ಯಾರೇ ಆಗಿದ್ದರೂ ಶಿಕ್ಷಿಸಬೇಕಾದದ್ದು ಸರ್ಕಾರದ ಕರ್ತವ್ಯ. ಸಾಮಾಜಿಕ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಆಧಾರದಲ್ಲಿ ಇಡಿ ಅಧಿಕಾರಿಗಳು ಮುಡಾಗೆ ದಾಂಗುಡಿ ಇಟ್ಟಿದ್ದರು. ಹಿಂದಿನ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಮುಡಾ ಅವ್ಯವಹಾರ ಕುರಿತು ಬರೆದಿದ್ದ ಪತ್ರವನ್ನೂ ತಂದಿದ್ದರು ಎನ್ನಲಾಗಿದೆ. ಇಲ್ಲಿ ಪ್ರಮುಖ ಪ್ರಶ್ನೆಯೆಂದರೆ ಒಂದೇ ಒಂದು ಪ್ರಕರಣವನ್ನು ಮುಂದಿಟ್ಟುಕೊಂಡು ಇಡಿ ಅಧಿಕಾರಿಗಳು ಮುಡಾ ಮೇಲೆ ಮುಗಿಬಿದ್ದಿರುವುದೇಕೆ? ಅವರು ಪರಿಶೀಲನೆ ನಡೆಸಿದ ವೇಳೆಯಲ್ಲಿ ಅಧಿಕಾರಿಗಳಿಂದ ಉತ್ತರ ಪಡೆಯಲು ಬಯಸಿರುವ ಪ್ರಶ್ನೆಗಳು ಕೇವಲ ಪಾರ್ವತಿ ಅವರ ಪ್ರಕರಣವನ್ನು ಮಾತ್ರವೇ ಗುರಿ ಮಾಡಿದ್ದಂತೆ ಇವೆ. ಈ ಪ್ರಕರಣವನ್ನು ಆಮೂಲಾಗ್ರವಾಗಿ ತನಿಖೆ ನಡೆಸುವ ಇಡಿ ಅಧಿಕಾರಿಗಳ ಇರಾದೆ ಸ್ವಾಗತಾರ್ಹ. ಆದರೆ, ಒಂದೇ ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಮುಡಾದಲ್ಲಿ ಅಪರಿಮಿತ ಭ್ರಷ್ಟಾಚಾರ ನಡೆದಿದೆ ನೀಡಿರುವ ವ್ಯಕ್ತಿಯೇ ಎಂಬ ಆರೋಪಗಳು ಹಿಂದಿನಿಂದಲೂ ಕೇಳಿ ಮುಡಾದಲ್ಲಿ ಬರುತ್ತಿವೆ. ಈ ಹಿನ್ನೆಲೆಯಲ್ಲಿಯೇ ನಿರ್ಗಮಿತ ಮುಡಾ ಅಧ್ಯಕ್ಷರು ಕೂಡ ಆರೋಪ ಮಾಡಿದ್ದರು. ಆದರೆ, ಅದು ಅವರಿಗೇ ಮುಳುವಾಯಿತು. ಅಲ್ಲದೆ, ಸಿದ್ದರಾಮಯ್ಯ ಮತ್ತು ಅವರ ಪತ್ನಿ ಅವರನ್ನು ಸುತ್ತುವರಿಯಿತು. ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದರೂ, ಇಡಿ ಅಧಿಕಾರಿಗಳು ಮುಡಾದ ಮೇಲೆ ದಾಳಿ ನಡೆಸಿದ್ದು ಕುತೂಹಲಕಾರಿಯಾಗಿದೆ. ಅವರಿಗೆ ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ತನಿಖೆ ಬಗ್ಗೆ ನಂಬಿಕೆ ಇಲ್ಲ ಅನಿಸುತ್ತದೆ.

ವಾಸ್ತವವಾಗಿ ಮುಡಾದಲ್ಲಿ ನಡೆದಿವೆ ಎನ್ನಲಾದ ಎಲ್ಲ ಹಗರಣಗಳನ್ನೂ ಬಯಲು ಮಾಡುವ ನಿಟ್ಟಿನಲ್ಲಿ ಇಡಿ ತನಿಖೆ ಸಾಗಬೇಕು. ಪ್ರಸ್ತುತ ಅಂತಹ ಬೆಳವಣಿಗೆಗಳು ಕಾಣುತ್ತಿಲ್ಲ. ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿರುವ ವ್ಯಕ್ತಿಯೇ ಮುಡಾದಲ್ಲಿ ನಡೆದಿರುವ ಎಲ್ಲ ಹಗರಣಗಳನ್ನೂ ತನಿಖೆ ಮಾಡಬೇಕು ಎಂದು ಹೇಳಿದ್ದಾರೆ. ಆದರೆ, ಸದ್ಯಕ್ಕೆ ಇಡಿ ನಡೆಯಲ್ಲಿ ಅಂತಹ ಯಾವುದೇ ಹೆಜ್ಜೆ ಕಾಣುತ್ತಿಲ್ಲ.

ಮುಡಾವನ್ನು ಸ್ವಚ್ಛಗೊಳಿಸುವ ಅಭಿಯಾನದ ರೀತಿಯಲ್ಲೇ ಇಡಿತನಿಖೆ ನಡೆಯಬೇಕು. ಒಂದೇ ಒಂದು ಪ್ರಕರಣವನ್ನು ಬಹು ಚರ್ಚೆಯಾಗುವಂತೆ ತನಿಖೆ ನಡೆಸುವ ಮೂಲಕ ಜನರ ಗಮನವನ್ನು ಅದರತ್ತಲೇ ಕೇಂದ್ರೀಕರಿಸುವಂತೆ ಮಾಡುವುದು ಸಮಾಜಕ್ಕೆ ಹಿತಕರವಲ್ಲ. ಮುಡಾದಪ್ರತಿಯೊಂದು ಹಗರಣವನ್ನೂತಾರ್ಕಿಕ ಅಂತ್ಯಕ್ಕೆಕೊಂಡೊಯ್ಯುವ ನಿಟ್ಟಿನಲ್ಲಿ ಇಡಿ ಹೆಜ್ಜೆಗಳಿದ್ದರೆ ಜನಸಾಮಾನ್ಯರಲ್ಲಿ ಕೂಡ ನಂಬಿಕೆ ಮೂಡುತ್ತದೆ. ಅಲ್ಲದೆ, ಮುಂದೆ ಯಾವುದೇ ಕಾರಣಕ್ಕೂ ಮುಡಾದಲ್ಲಿ ಹಗರಣಗಳು ನಡೆಯದಂತೆ ಎಚ್ಚರಿಕೆಯ ಘಂಟೆ ಬಾರಿಸಿದಂತೆ ಆಗುತ್ತದೆ. ಹಾಗಾದಾಗ ಸ್ವಂತ ಸೂರಿಗಾಗಿ ಪರಿತಪಿಸುತ್ತಿರುವ ಕಡುಬಡವರಿಗೂ ಮುಡಾದಿಂದ ನಿವೇಶನ ಅಥವಾ ಮನೆ ದೊರೆಯುವ ಕಾಲ ಬರಬಹುದು. ಅದೂ ಕೈಗೆಟುಕುವ ದರದಲ್ಲಿ. ಇದನ್ನು ಸಾಕಾರಗೊಳಿಸುವ ಮಹತ್ವದ ಜವಾಬ್ದಾರಿ ಇಡಿ ಮೇಲೆ ಇದೆ. ಹಾಗಾದಾಗ ಇಡಿ ಅಕ್ಷರಶಃ ಜನಸ್ನೇಹಿಯೂ ಆಗುತ್ತದೆ. ಲೋಕಾಯುಕ್ತ ಕೂಡ ಇದೇ ಹಾದಿಯಲ್ಲಿ ಮುನ್ನಡೆಯಬೇಕು. ಆಗ ಮಾತ್ರ ಪ್ರಜಾತಂತ್ರ ವ್ಯವಸ್ಥೆಗೆ ನೈಜ ಅರ್ಥ ದೊರೆಯುತ್ತದೆ.

ವಾಸ್ತವವಾಗಿ ಮುಡಾದಲ್ಲಿ ನಡೆದಿವೆ ಎನ್ನಲಾದ ಎಲ್ಲ ಹಗರಣಗಳನ್ನೂ ಬಯಲು ಮಾಡುವ ನಿಟ್ಟಿನಲ್ಲಿ ಇಡಿ ತನಿಖೆ ಸಾಗಬೇಕು. ಪ್ರಸ್ತುತ ಅಂತಹ ಬೆಳವಣಿಗೆಗಳು ಕಾಣುತ್ತಿಲ್ಲ. ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿರುವ ವ್ಯಕ್ತಿಯೇ ಮುಡಾದಲ್ಲಿ ನಡೆದಿರುವ ಎಲ್ಲಾ ಹಗರಣಗಳನ್ನು ತನಿಖೆ ಮಾಡಬೇಕು ಎಂದು ಹೇಳಿದ್ದಾರೆ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

20 hours ago