ಸಂಪಾದಕೀಯ

ಸರ್ಕಾರಿ ಶಾಲೆಗಳ ಪುನಾರಂಭ: ಸುಧಾರಣಾ ಕ್ರಮಗಳೂ ಶುರುವಾಗಲಿ

ಮಳೆಗಾಲದ ಜೊತೆಗೆ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಪುನಾರಂಭವಾಗಿವೆ. ಹಲವೆಡೆ ಮಕ್ಕಳಿಗೆ ಹೂವು, ಸಿಹಿ ನೀಡಿ ಶಾಲೆಗಳಿಗೆ ಸ್ವಾಗತಿಸಲಾಗಿದೆ. ಶಿಕ್ಷಕರು, ಸಿಬ್ಬಂದಿ ಕೂಡ ಹುರುಪಿನಿಂದಲೇ ಕರ್ತವ್ಯಕ್ಕೆ ಮರಳಿದ್ದಾರೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ದಾಖಲಾತಿಗಾಗಿ ಶಿಕ್ಷಕರು ಹಳ್ಳಿಗಳಲ್ಲಿ ಜಾಥಾ ನಡೆಸುವುದು ರೂಢಿಗತವಾಗಿದೆ. ಇದರಿಂದ ನಿರೀಕ್ಷಿತ ಫಲ ಲಭಿಸಿಲ್ಲ ಎನ್ನಬಹುದು. ರಾಜ್ಯ ಸರ್ಕಾರವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೂಲಕ ಶಾಲೆಗಳಿಗೆ, ವಿದ್ಯಾರ್ಥಿಗಳಿಗೆ ಸೌಲಭ್ಯ ಒದಗಿಸಲು ಪ್ರಯತ್ನ ಮಾಡುತ್ತಿದೆ.

ಆದರೆ, ಸಮರ್ಪಕವಾಗಿ ಆ ಕೆಲಸ ನಡೆಯುತ್ತಿಲ್ಲ ಎಂಬುದು ಹಿಂದಿನ ಕೆಲ ವರ್ಷಗಳನ್ನು ಗಮನಿಸಿದರೆ ಅರಿವಾಗುತ್ತದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವಂತೆ ಪೋಷಕರ ಮನವೊಲಿಸುವುದೇ ದೊಡ್ಡ ಸವಾಲು. ಖಾಸಗಿ ವಿದ್ಯಾಸಂಸ್ಥೆಗಳ ಅಬ್ಬರದಲ್ಲಿ ಸರ್ಕಾರಿ ಶಾಲೆಗಳ ಧ್ವನಿ ಅಡಗಿಹೋಗುತ್ತಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆಗಳಲ್ಲಿ ಈಗಿರುವ ಸೌಲಭ್ಯಗಳನ್ನು ವಿಸ್ತರಿಸುವ ಅಥವಾ ಪೋಷಕರನ್ನು ಆಕರ್ಷಿಸುವ ಯೋಜನೆಗಳನ್ನು ಜಾರಿಗೊಳಿಸುವುದು ಅತ್ಯಗತ್ಯ. ಮುಖ್ಯವಾಗಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಕಿಂಚಿತ್ತೂ ಇರದಂತೆ ಇಲಾಖೆ ಜಾಗ್ರತೆ ವಹಿಸಬೇಕು. ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ, ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ , ಪಠ್ಯ ಪುಸ್ತಕ ವಿತರಣೆ ಇತ್ಯಾದಿಗಳನ್ನು ಸಕಾಲದಲ್ಲಿ ಆದ್ಯತೆ ಮೇರೆಗೆ ಒದಗಿಸಬೇಕಾಗಿದೆ.

ಇದಕ್ಕಿಂತ ಮುಖ್ಯವಾಗಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟಾಗದಂತೆ ಸರ್ಕಾರ ಕ್ರಮಕೈಗೊಳ್ಳಬೇಕು. ಬಹುತೇಕ ಶಾಲೆಗಳಲ್ಲಿ ಖಾಯಂ ಶಿಕ್ಷಕರ ಅಭಾವ ಇದೆ. ಗುತ್ತಿಗೆ ಆಧಾರದ ಶಿಕ್ಷಕರ ನೇಮಕಾತಿಗೆ ಆದ್ಯತೆ ನೀಡಲಾಗುತ್ತಿದೆ ಎಂಬ ಆರೋಪ ಇದೆ. ಗುತ್ತಿಗೆ ಶಿಕ್ಷಕರಿಗೇ ವೇತನ ಮತ್ತಿತರ ಸೌಲಭ್ಯ ಒದಗಿಸಿದರೆ ಅವರು ಹೆಚ್ಚು ಉತ್ಸಾಹದಿಂದ ಕರ್ತವ್ಯ ನಿರ್ವಹಿಸಲು ಮುಂದಾಗುತ್ತಾರೆ. ‘ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ’ ಎಂಬಂತೆ ಗುತ್ತಿಗೆ ಆಧಾರದ ಶಿಕ್ಷಕರಿಗೆ ಗೌರವಧನದ ಹೆಸರಲ್ಲಿ ಕೆಲ ಸಾವಿರ ರೂ.ಗಳನ್ನು ನೀಡುವುದು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಪರೋಕ್ಷವಾಗಿ ಪರಿಣಾಮ ಉಂಟು ಮಾಡುತ್ತದೆ.

ಶಿಕ್ಷಕರ ಕಾರ್ಯ ಒತ್ತಡವಂತೂ ಹೇಳ ತೀರದಷ್ಟಿದೆ. ಶಾಲೆಯ ಬಿಸಿಯೂಟ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ಒಬ್ಬರಿಗೆ ವಹಿಸುವುದು ಅಗತ್ಯ ಅನಿಸುತ್ತದೆ. ಇದು ಸವಾಲಿನ ಕೆಲಸವೂ ಹೌದು. ಏಕೆಂದರೆ ಶಾಲೆಯಲ್ಲಿ ಶಿಕ್ಷಕರಿಗಿರುವಷ್ಟು ಜವಾಬ್ದಾರಿ ಹೊರಗಿನವರಿಗೆ ಇರುವುದಿಲ್ಲ. ಹಾಗಾಗಿ ಅವರು ಪರಿಪೂರ್ಣವಾಗಿ ಕೆಲಸ ನಿರ್ವಹಿಸುವುದು ಕಷ್ಟಸಾಧ್ಯ. ಆದರೆ, ಸರ್ಕಾರ ಅದಕ್ಕೆ ತಕ್ಕ ಕಠಿಣ ನಿಯಮಾವಳಿಗಳನ್ನು ರೂಪಿಸಬೇಕಾಗುತ್ತದೆ. ಚುನಾವಣೆಗಳಾದರೆ ಬೇಸಿಗೆ ರಜೆ ಸಂದರ್ಭದಲ್ಲಿ ನಿಗದಿಯಾಗುತ್ತವೆ. ಅದರಿಂದ ಮಕ್ಕಳ ಅಭ್ಯಾಸಕ್ಕೆ ತೊಂದರೆಯಾಗುವುದಿಲ್ಲ. ಆದರೆ, ಸಮೀಕ್ಷೆಗಳು, ಜಾಗೃತಿ ಕಾರ್ಯಕ್ರಮಗಳಿಗೆ ಶಿಕ್ಷಕರನ್ನು ಬಳಸುವುದು ಅವರ ಮೇಲಿನ ಒತ್ತಡವನ್ನು ಅಧಿಕಗೊಳಿಸುತ್ತದೆ. ಬಹುಶಃ ಅದು ಮಕ್ಕಳಿಗೆ ಪಾಠ ಮಾಡುವ ಹುರುಪಿಗೆ ತಣ್ಣೀರು ಎರಚುತ್ತದೆ. ಮಕ್ಕಳ ಬದುಕಿಗೆ ಪ್ರಾಥಮಿಕ ಶಿಕ್ಷಣ ತಳಪಾಯ ಆಗಿರುತ್ತದೆ. ಹಾಗಾಗಿ ಶಿಕ್ಷಕರಿಗೆ ಅನ್ಯ ಕಾರ್ಯಗಳ ಹೊರೆ ಕಡಿಮೆಯಾದಷ್ಟೂ ಒಳಿತು.

ಶಾಲೆಗಳ ಕಟ್ಟಡದ ದುಸ್ಥಿತಿ ಬಗ್ಗೆಯೂ ಸಾಕಷ್ಟು ದೂರುಗಳು ಇವೆ. ಅನೇಕ ಶಾಲೆಗಳಲ್ಲಿ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ. ಮಳೆಗಾಲದಲ್ಲಿ ಸೋರುವ ಚಾವಣಿ ಅಡಿಯಲ್ಲಿ ಮಕ್ಕಳು ಪಾಠ ಕೇಳಬೇಕಾದ ಸ್ಥಿತಿಯೂ ಇದೆ ಎಂಬ ಮಾಹಿತಿ ಇದೆ. ಇಂತಹ ಶಾಲೆಗೆ ಪೋಷಕರು ಮಕ್ಕಳನ್ನು ಸೇರಿಸಲು ಹಿಂದೇಟು ಹಾಕವುದು ಸಹಜ. ಅಲ್ಲದೆ, ಖಾಸಗಿ ಶಾಲೆಗಳು ಇದೇ ವಿಷಯವನ್ನು ಬಂಡವಾಳ ಮಾಡಿಕೊಂಡು ಪೋಷಕ ರನ್ನು ತಮ್ಮತ್ತ ಸೆಳೆಯುವುದಕ್ಕೂ ಅವಕಾಶ ಇದೆ.

ಸರ್ಕಾರಿ ಪ್ರೌಢಶಾಲೆಗಳ ೧೦ನೇ ತರಗತಿಯ ಫಲಿತಾಂಶವನ್ನು ಉತ್ತಮ ಪಡಿಸಲು ಶಿಕ್ಷಣ ತಜ್ಞರೊಡನೆ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಾಲೆಗಳ ಮುಖ್ಯ ಶಿಕ್ಷಕರನ್ನು ಮುಖಾಮುಖಿ ಮಾಡಿಸುವಂತಹ ಕಾರ್ಯಕ್ರಮಗಳನ್ನೂ ರೂಪಿಸುವುದು ಅಗತ್ಯ. ಶಾಲೆಗಳು ಪುನಾರಂಭವಾಗಿರುವ ಈ ಹೊತ್ತಿನಲ್ಲೇ ಸರ್ಕಾರ ಈ ಬಗ್ಗೆ ಗಂಭೀರ ಕ್ರಮಕೈಗೊಂಡರೆ ಮಕ್ಕಳ ಶೈಕ್ಷಣಿಕ ಜೀವನ ಉತ್ತಮವಾಗಿ ರೂಪಿತ ವಾಗುತ್ತದೆ.

” ಶಿಕ್ಷಕರ ಕಾರ್ಯ ಒತ್ತಡವಂತೂ ಹೇಳತೀರದಷ್ಟಿದೆ. ಶಾಲೆಯ ಬಿಸಿಯೂಟ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ಒಬ್ಬರಿಗೆ ವಹಿಸುವುದು ಅಗತ್ಯ ಅನಿಸುತ್ತದೆ. ಇದು ಸವಾಲಿನ ಕೆಲಸವೂ ಹೌದು. ಏಕೆಂದರೆ ಶಾಲೆಯಲ್ಲಿ ಶಿಕ್ಷಕರಿಗಿರುವಷ್ಟು ಜವಾಬ್ದಾರಿ ಹೊರಗಿನವರಿಗೆ ಇರುವುದಿಲ್ಲ. ಹಾಗಾಗಿ ಅವರು ಪರಿಪೂರ್ಣವಾಗಿ ಕೆಲಸ ನಿರ್ವಹಿಸುವುದು ಕಷ್ಟಸಾಧ್ಯ. ಆದರೆ, ಸರ್ಕಾರ ಅದಕ್ಕೆ ತಕ್ಕ ಕಠಿಣ ನಿಯಮಾವಳಿಗಳನ್ನು ರೂಪಿಸಬೇಕಾಗುತ್ತದೆ.”

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಜನರು ಹೆಚ್ಚು ಹೆಚ್ಚು ಗ್ಯಾಸ್‌ ಬುಕ್‌ ಮಾಡಬೇಡಿ: ಸಚಿವ ಕೆ.ಎಚ್.ಮುನಿಯಪ್ಪ ಮನವಿ

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…

9 mins ago

ಯುದ್ಧದ ನಡುವೆಯೇ ಭಾರತಕ್ಕೆ ಗುಡ್‌ನ್ಯೂಸ್: 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತು ತಂದ ಹಡಗು

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…

35 mins ago

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

1 hour ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

2 hours ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

2 hours ago

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

6 hours ago