ಸಂಪಾದಕೀಯ

ಸರ್ಕಾರಿ ಶಾಲೆಗಳ ಪುನಾರಂಭ: ಸುಧಾರಣಾ ಕ್ರಮಗಳೂ ಶುರುವಾಗಲಿ

ಮಳೆಗಾಲದ ಜೊತೆಗೆ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಪುನಾರಂಭವಾಗಿವೆ. ಹಲವೆಡೆ ಮಕ್ಕಳಿಗೆ ಹೂವು, ಸಿಹಿ ನೀಡಿ ಶಾಲೆಗಳಿಗೆ ಸ್ವಾಗತಿಸಲಾಗಿದೆ. ಶಿಕ್ಷಕರು, ಸಿಬ್ಬಂದಿ ಕೂಡ ಹುರುಪಿನಿಂದಲೇ ಕರ್ತವ್ಯಕ್ಕೆ ಮರಳಿದ್ದಾರೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ದಾಖಲಾತಿಗಾಗಿ ಶಿಕ್ಷಕರು ಹಳ್ಳಿಗಳಲ್ಲಿ ಜಾಥಾ ನಡೆಸುವುದು ರೂಢಿಗತವಾಗಿದೆ. ಇದರಿಂದ ನಿರೀಕ್ಷಿತ ಫಲ ಲಭಿಸಿಲ್ಲ ಎನ್ನಬಹುದು. ರಾಜ್ಯ ಸರ್ಕಾರವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೂಲಕ ಶಾಲೆಗಳಿಗೆ, ವಿದ್ಯಾರ್ಥಿಗಳಿಗೆ ಸೌಲಭ್ಯ ಒದಗಿಸಲು ಪ್ರಯತ್ನ ಮಾಡುತ್ತಿದೆ.

ಆದರೆ, ಸಮರ್ಪಕವಾಗಿ ಆ ಕೆಲಸ ನಡೆಯುತ್ತಿಲ್ಲ ಎಂಬುದು ಹಿಂದಿನ ಕೆಲ ವರ್ಷಗಳನ್ನು ಗಮನಿಸಿದರೆ ಅರಿವಾಗುತ್ತದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವಂತೆ ಪೋಷಕರ ಮನವೊಲಿಸುವುದೇ ದೊಡ್ಡ ಸವಾಲು. ಖಾಸಗಿ ವಿದ್ಯಾಸಂಸ್ಥೆಗಳ ಅಬ್ಬರದಲ್ಲಿ ಸರ್ಕಾರಿ ಶಾಲೆಗಳ ಧ್ವನಿ ಅಡಗಿಹೋಗುತ್ತಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆಗಳಲ್ಲಿ ಈಗಿರುವ ಸೌಲಭ್ಯಗಳನ್ನು ವಿಸ್ತರಿಸುವ ಅಥವಾ ಪೋಷಕರನ್ನು ಆಕರ್ಷಿಸುವ ಯೋಜನೆಗಳನ್ನು ಜಾರಿಗೊಳಿಸುವುದು ಅತ್ಯಗತ್ಯ. ಮುಖ್ಯವಾಗಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಕಿಂಚಿತ್ತೂ ಇರದಂತೆ ಇಲಾಖೆ ಜಾಗ್ರತೆ ವಹಿಸಬೇಕು. ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ, ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ , ಪಠ್ಯ ಪುಸ್ತಕ ವಿತರಣೆ ಇತ್ಯಾದಿಗಳನ್ನು ಸಕಾಲದಲ್ಲಿ ಆದ್ಯತೆ ಮೇರೆಗೆ ಒದಗಿಸಬೇಕಾಗಿದೆ.

ಇದಕ್ಕಿಂತ ಮುಖ್ಯವಾಗಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟಾಗದಂತೆ ಸರ್ಕಾರ ಕ್ರಮಕೈಗೊಳ್ಳಬೇಕು. ಬಹುತೇಕ ಶಾಲೆಗಳಲ್ಲಿ ಖಾಯಂ ಶಿಕ್ಷಕರ ಅಭಾವ ಇದೆ. ಗುತ್ತಿಗೆ ಆಧಾರದ ಶಿಕ್ಷಕರ ನೇಮಕಾತಿಗೆ ಆದ್ಯತೆ ನೀಡಲಾಗುತ್ತಿದೆ ಎಂಬ ಆರೋಪ ಇದೆ. ಗುತ್ತಿಗೆ ಶಿಕ್ಷಕರಿಗೇ ವೇತನ ಮತ್ತಿತರ ಸೌಲಭ್ಯ ಒದಗಿಸಿದರೆ ಅವರು ಹೆಚ್ಚು ಉತ್ಸಾಹದಿಂದ ಕರ್ತವ್ಯ ನಿರ್ವಹಿಸಲು ಮುಂದಾಗುತ್ತಾರೆ. ‘ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ’ ಎಂಬಂತೆ ಗುತ್ತಿಗೆ ಆಧಾರದ ಶಿಕ್ಷಕರಿಗೆ ಗೌರವಧನದ ಹೆಸರಲ್ಲಿ ಕೆಲ ಸಾವಿರ ರೂ.ಗಳನ್ನು ನೀಡುವುದು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಪರೋಕ್ಷವಾಗಿ ಪರಿಣಾಮ ಉಂಟು ಮಾಡುತ್ತದೆ.

ಶಿಕ್ಷಕರ ಕಾರ್ಯ ಒತ್ತಡವಂತೂ ಹೇಳ ತೀರದಷ್ಟಿದೆ. ಶಾಲೆಯ ಬಿಸಿಯೂಟ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ಒಬ್ಬರಿಗೆ ವಹಿಸುವುದು ಅಗತ್ಯ ಅನಿಸುತ್ತದೆ. ಇದು ಸವಾಲಿನ ಕೆಲಸವೂ ಹೌದು. ಏಕೆಂದರೆ ಶಾಲೆಯಲ್ಲಿ ಶಿಕ್ಷಕರಿಗಿರುವಷ್ಟು ಜವಾಬ್ದಾರಿ ಹೊರಗಿನವರಿಗೆ ಇರುವುದಿಲ್ಲ. ಹಾಗಾಗಿ ಅವರು ಪರಿಪೂರ್ಣವಾಗಿ ಕೆಲಸ ನಿರ್ವಹಿಸುವುದು ಕಷ್ಟಸಾಧ್ಯ. ಆದರೆ, ಸರ್ಕಾರ ಅದಕ್ಕೆ ತಕ್ಕ ಕಠಿಣ ನಿಯಮಾವಳಿಗಳನ್ನು ರೂಪಿಸಬೇಕಾಗುತ್ತದೆ. ಚುನಾವಣೆಗಳಾದರೆ ಬೇಸಿಗೆ ರಜೆ ಸಂದರ್ಭದಲ್ಲಿ ನಿಗದಿಯಾಗುತ್ತವೆ. ಅದರಿಂದ ಮಕ್ಕಳ ಅಭ್ಯಾಸಕ್ಕೆ ತೊಂದರೆಯಾಗುವುದಿಲ್ಲ. ಆದರೆ, ಸಮೀಕ್ಷೆಗಳು, ಜಾಗೃತಿ ಕಾರ್ಯಕ್ರಮಗಳಿಗೆ ಶಿಕ್ಷಕರನ್ನು ಬಳಸುವುದು ಅವರ ಮೇಲಿನ ಒತ್ತಡವನ್ನು ಅಧಿಕಗೊಳಿಸುತ್ತದೆ. ಬಹುಶಃ ಅದು ಮಕ್ಕಳಿಗೆ ಪಾಠ ಮಾಡುವ ಹುರುಪಿಗೆ ತಣ್ಣೀರು ಎರಚುತ್ತದೆ. ಮಕ್ಕಳ ಬದುಕಿಗೆ ಪ್ರಾಥಮಿಕ ಶಿಕ್ಷಣ ತಳಪಾಯ ಆಗಿರುತ್ತದೆ. ಹಾಗಾಗಿ ಶಿಕ್ಷಕರಿಗೆ ಅನ್ಯ ಕಾರ್ಯಗಳ ಹೊರೆ ಕಡಿಮೆಯಾದಷ್ಟೂ ಒಳಿತು.

ಶಾಲೆಗಳ ಕಟ್ಟಡದ ದುಸ್ಥಿತಿ ಬಗ್ಗೆಯೂ ಸಾಕಷ್ಟು ದೂರುಗಳು ಇವೆ. ಅನೇಕ ಶಾಲೆಗಳಲ್ಲಿ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ. ಮಳೆಗಾಲದಲ್ಲಿ ಸೋರುವ ಚಾವಣಿ ಅಡಿಯಲ್ಲಿ ಮಕ್ಕಳು ಪಾಠ ಕೇಳಬೇಕಾದ ಸ್ಥಿತಿಯೂ ಇದೆ ಎಂಬ ಮಾಹಿತಿ ಇದೆ. ಇಂತಹ ಶಾಲೆಗೆ ಪೋಷಕರು ಮಕ್ಕಳನ್ನು ಸೇರಿಸಲು ಹಿಂದೇಟು ಹಾಕವುದು ಸಹಜ. ಅಲ್ಲದೆ, ಖಾಸಗಿ ಶಾಲೆಗಳು ಇದೇ ವಿಷಯವನ್ನು ಬಂಡವಾಳ ಮಾಡಿಕೊಂಡು ಪೋಷಕ ರನ್ನು ತಮ್ಮತ್ತ ಸೆಳೆಯುವುದಕ್ಕೂ ಅವಕಾಶ ಇದೆ.

ಸರ್ಕಾರಿ ಪ್ರೌಢಶಾಲೆಗಳ ೧೦ನೇ ತರಗತಿಯ ಫಲಿತಾಂಶವನ್ನು ಉತ್ತಮ ಪಡಿಸಲು ಶಿಕ್ಷಣ ತಜ್ಞರೊಡನೆ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಾಲೆಗಳ ಮುಖ್ಯ ಶಿಕ್ಷಕರನ್ನು ಮುಖಾಮುಖಿ ಮಾಡಿಸುವಂತಹ ಕಾರ್ಯಕ್ರಮಗಳನ್ನೂ ರೂಪಿಸುವುದು ಅಗತ್ಯ. ಶಾಲೆಗಳು ಪುನಾರಂಭವಾಗಿರುವ ಈ ಹೊತ್ತಿನಲ್ಲೇ ಸರ್ಕಾರ ಈ ಬಗ್ಗೆ ಗಂಭೀರ ಕ್ರಮಕೈಗೊಂಡರೆ ಮಕ್ಕಳ ಶೈಕ್ಷಣಿಕ ಜೀವನ ಉತ್ತಮವಾಗಿ ರೂಪಿತ ವಾಗುತ್ತದೆ.

” ಶಿಕ್ಷಕರ ಕಾರ್ಯ ಒತ್ತಡವಂತೂ ಹೇಳತೀರದಷ್ಟಿದೆ. ಶಾಲೆಯ ಬಿಸಿಯೂಟ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ಒಬ್ಬರಿಗೆ ವಹಿಸುವುದು ಅಗತ್ಯ ಅನಿಸುತ್ತದೆ. ಇದು ಸವಾಲಿನ ಕೆಲಸವೂ ಹೌದು. ಏಕೆಂದರೆ ಶಾಲೆಯಲ್ಲಿ ಶಿಕ್ಷಕರಿಗಿರುವಷ್ಟು ಜವಾಬ್ದಾರಿ ಹೊರಗಿನವರಿಗೆ ಇರುವುದಿಲ್ಲ. ಹಾಗಾಗಿ ಅವರು ಪರಿಪೂರ್ಣವಾಗಿ ಕೆಲಸ ನಿರ್ವಹಿಸುವುದು ಕಷ್ಟಸಾಧ್ಯ. ಆದರೆ, ಸರ್ಕಾರ ಅದಕ್ಕೆ ತಕ್ಕ ಕಠಿಣ ನಿಯಮಾವಳಿಗಳನ್ನು ರೂಪಿಸಬೇಕಾಗುತ್ತದೆ.”

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

8 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

8 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

10 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

10 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

11 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

11 hours ago