ಸಂಪಾದಕೀಯ

ಗುದ್ದಾಡಿದ್ದವರೀಗ ದೋಸ್ತಿಗಳು

ದಸರಾ ಗಜಪಡೆಯ ಎರಡು ಆನೆಗಳ ಸಾಮರಸ್ಯದ ಕತೆ

ಮೈಸೂರು: ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಯಲ್ಲಿರುವ ಆನೆಗಳ ಪೈಕಿ ಎರಡು ಆನೆಗಳು ಇತ್ತೀಚೆಗೆ ಜಗಳ ಆಡಿಕೊಂಡಿದ್ದನ್ನು ಜನತೆಯೇ ಗಮನಿಸಿದ್ದಾರೆ. ಇದೀಗ ಆ ಎರಡೂ ಗಜಗಳು ಮತ್ತೆ ಸ್ನೇಹಿತರಾಗಿ ಒಡನಾಟ ಮುಂದುವರಿಸಿದ್ದು, ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಕ್ಷಣಗಳಿಗಾಗಿ ಎದುರು ನೋಡುತ್ತಿರುವುದು ವಿಶೇಷವೇ ಆಗಿದೆ. ಕಂಜನ್ ಪಟ್ಟದ ಆನೆಯಾಗಿದ್ದು, ಅದಕ್ಕೆ ಧನಂಜಯಗಿಂತ ಹೆಚ್ಚು ಜವಾಬ್ದಾರಿ ಇರುತ್ತದೆ.

ದ್ವೇಷ, ಅಸೂಯೆಗಳಿಂದ ದೂರಾಗುವ ಮನುಷ್ಯರು ಮತ್ತೆ ಒಂದು ಗೂಡುವುದು ಬಹಳ ಅಪರೂಪ. ಆದರೆ, ಈ ವನ್ಯಜೀವಿಗಳು ಮತ್ತರ ಮರೆತು ಒಂದಾಗಿರುವುದು ಒಂದು ರೀತಿಯಲ್ಲಿ ಮನುಷ್ಯರಿಗೂ ಮಾದರಿ ಎನ್ನಬಹುದು.

ಹೌದು, ದಸರಾ ಗಜಪಡೆಯಲ್ಲಿರುವ ಕಂಜನ್ ಮತ್ತು ಧನಂಜಯ ಆನೆಗಳ ನಡುವೆ ಇತ್ತೀಚೆಗೆ ಜಯಮಾರ್ತಾಂಡ ವಿಶೇಷ ದ್ವಾರದ ಬಳಿ ರಸ್ತೆಯಲ್ಲೇ ಕಾಳಗ ನಡೆದಿತ್ತು. ಮಾವುತರ ಸಮಯಪ್ರಜ್ಞೆಯಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತ್ತು. ಆದರೆ ಈ ಘಟನೆಯಿಂದ ಸಾರ್ವಜನಿಕರಲ್ಲಿ ಭೀತಿ ಉಂಟಾಗಿತ್ತು. ಈ ಆಘಾತಕಾರಿ ಘರ್ಷಣೆಯ ಕೆಲವೇ ದಿನಗಳಲ್ಲಿ, ಕಂಜನ್ ಮತ್ತು ಧನಂಜಯ ಆನೆಗಳು ಆಶ್ಚರ್ಯಕರ ರೀತಿಯಲ್ಲಿ ತಮ್ಮ ಪ್ರತಿಷ್ಠೆಯನ್ನು ಬದಿಗಿಟ್ಟು ಸೌಹಾರ್ದತೆಯಿಂದ ಅರಮನೆ ಅಂಗಳದಲ್ಲಿ ಸೌಮ್ಯವಾಗಿ ಸೊಂಡಿಲನ್ನು ಆಡಿಸುತ್ತಾ, ‘ಕಚ್ಚಾಡುವವರನು ಕೂಡಿಸಿ ಒಲಿಸು’ ಎಂಬ ಕುವೆಂಪು ಅವರ ಕವಿತೆಯ ಸಾಲನ್ನು ನೆನಪು ಮಾಡುವಂತೆ ತಾಲೀಮು, ಜಳಕವನ್ನು ಆಸ್ವಾದಿಸುತ್ತಾ, ಸುಗ್ರಾಸ ಭೋಜನವನ್ನು ಸವಿಯುತ್ತಾ ದಿನ ಕಳೆಯುತ್ತಿವೆ. ಇದರಿಂದ ಅರಣ್ಯಾಧಿಕಾರಿಗಳು, ಜನಸಾಮಾನ್ಯರು ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಆನೆಗಳು ಆಕ್ರಮಣಕಾರಿ ನಡವಳಿಕೆಯನ್ನು ಪ್ರದರ್ಶಿಸುವುದು ಅಸಹಜವೇನಲ್ಲ. ವಿಶೇಷವಾಗಿ ಮಿಥುನ ಸಮಯದಲ್ಲಿ ಅಥವಾ ಪ್ರಾಬಲ್ಯಕ್ಕಾಗಿ ಸ್ಪರ್ಧಿಸುವಾಗ ಕೆರಳುವುದು, ಮೊಂಡಾಟಕ್ಕೆ ಇಳಿಯುವುದು ನಿರೀಕ್ಷಿತವಾಗಿದೆ. ಆದರೆ, ಅವುಗಳನ್ನು ಸೂಕ್ತ ಕಾಳಜಿಯಿಂದ ಆರೈಕೆ ಮಾಡಬೇಕು. ಆಗ ಎಲ್ಲ ರೊಚ್ಚು ಕೆಚ್ಚುಗಳನ್ನು ತೊರೆದು, ಹೇಳಿದ್ದನ್ನು ಮಾತ್ರ ಮಾಡುವ ‘ಕೋಲೆ ಬಸವ’ನಂತೆ ಆಗುತ್ತವೆ. ಆದರೆ, ಇದು ಮಾತಿನಲ್ಲಿ ಹೇಳಿದಷ್ಟು ಸುಲಭ ಅಲ್ಲ. ಇದರಲ್ಲಿ ಮಾವುತರು, ಕಾವಾಡಿಗಳು, ಅರಣ್ಯ ಇಲಾಖೆ ಅಧಿಕಾರಿಗಳ ಶ್ರಮ ಅಪಾರವಾಗಿರುತ್ತದೆ. ಕಂಜನ್ ಮತ್ತು ಧನಂಜಯ ಆನೆಗಳ ಹೊಂದಾಣಿಕೆಯು ಸಾಮರಸ್ಯ ಮತ್ತು ಕ್ಷಮಾಗುಣವನ್ನು ಸಂಕೇತಿಸುತ್ತದೆ. ಕಡು ವೈರಿಗಳೂ ಸ್ನೇಹಿತರಾಗಬಹುದು ಎಂಬುದಕ್ಕೆ ಕಂಜನ್ ಹಾಗೂ ಧನಂಜಯ ಸ್ನೇಹ ಸಾಕ್ಷಿಯಾಗಿದೆ.

ಜಂಬೂಸವಾರಿ ಮೆರವಣಿಗೆಯಲ್ಲಿ ಧನಂಜಯ ಮತ್ತು ಕಂಜನ್ 750 ಕೆಜಿ ತೂಕದ ಅಂಬಾರಿಯನ್ನು ಹೊರಲಿರುವ ಅಭಿಮನ್ಯುವಿನ ನೇತೃತ್ವ ದಲ್ಲಿ ಹೆಜ್ಜೆ ಹಾಕಲಿರುವ ಇತರ ಆನೆಗಳೊಂದಿಗೆ ಭಾಗವಹಿಸಲಿವೆ. ಹಾಗಾಗಿ ಧನಂಜಯ್ ಮತ್ತು ಕಂಜನ್ ಆನೆಗಳ ನಡುವಿನ ಕಚ್ಚಾಟ ಎಲ್ಲರನ್ನೂ ಆತಂಕಕ್ಕೆ ಎಡೆಮಾಡಿತ್ತು. ಆದರೆ, ಅನುಭವಿ ಮಾವುತ ದೇವರಾಜ್ ಆನೆಗಳ ನಡುವೆ ಸಾಮರಸ್ಯವನ್ನು ಕಾಪಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಅವರು ಮೊದಲು ಆನೆಗಳನ್ನು ತಾತ್ಕಾಲಿಕವಾಗಿ ಪ್ರತ್ಯೇಕಿಸಿದರು. ಅವುಗಳ ತರಬೇತಿ ಅವಧಿಯನ್ನು ಕಡಿಮೆ ಮಾಡಲಾಯಿತು. ದೇವರಾಜ್ ಅವರ ಪರಿಣತಿಯ ಕಾರಣದಿಂದಾಗಿ ಈ ಎರಡೂ ಆನೆಗಳ ಯೋಗಕ್ಷೇಮವನ್ನು ಖಾತ್ರಿಗೊಳಿಸಲಾಯಿತು. ‘ಈಗ ಎರಡೂ ಆನೆಗಳು ತಮ್ಮ ಹಿಂದಿನ ಭಿನ್ನಾಭಿಪ್ರಾಯಗಳನ್ನು ಮರೆತಿವೆ’ ಎನ್ನುತ್ತಾರೆ ವರ್ಷಗಳಿಂದ ಆನೆಗಳ ಆರೈಕೆ ಮಾಡುತ್ತಿರುವ ದೇವರಾಜ್.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ದರೋಡೆ ಮಾಡಲು ಬಂದವನಿಂದ ವ್ಯಕ್ತಿಯ ಬರ್ಬರ ಹತ್ಯೆ

ಮಂಡ್ಯ: ಪಾರ್ಸೆಲ್‌ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್‌…

7 hours ago

ನಿವೃತ್ತ ಸಾರಿಗೆ ನೌಕರರಿಗೆ ಸಿಹಿಸುದ್ದಿ ನೀಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…

8 hours ago

ಸಾಹಿತ್ಯ ಸಮ್ಮೇಳನ ವೇದಿಕೆಯಲ್ಲಿ ಸಿಎಂ ರಾಜಕೀಯ ಭಾಷಣ ಮಾಡಿದ್ದಾರೆ: ಬಿಜೆಪಿ ಕಿಡಿ

ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…

9 hours ago

ನನ್ನ ವಿರುದ್ಧದ ಆರೋಪಗಳು ಅವಮಾನಕರ: ನಟ ಅಲ್ಲು ಅರ್ಜುನ್‌ ಬೇಸರ

ಹೈದರಾಬಾದ್:‌ ಡಿಸೆಂಬರ್.‌4ರಂದು ಸಂಧ್ಯಾ ಥಿಯೇಟರ್‌ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್‌ ಬೇಸರ…

9 hours ago

ನೆಲಮಂಗಲದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ದುರ್ಮರಣ

ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್‌ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…

9 hours ago

ವಕ್ಫ್ ಭೂ ಕಬಳಿಕೆ ವಿರುದ್ಧದ ಹೋರಾಟಕ್ಕೆ ಜಯ ಸಿಕ್ಕಿದೆ: ಪ್ರತಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…

10 hours ago