ಸಂಪಾದಕೀಯ

ಪಡುವಾರಹಳ್ಳಿಯ ತರಕಾರಿ ರಾಮು

ಪಡುವಾರಹಳ್ಳಿಯಲ್ಲಿ ತಮ್ಮ 18ನೇ ವಯಸ್ಸಿನಿಂದ ತರಕಾರಿ ವ್ಯಾಪಾರ ಮಾಡುತ್ತಿರುವ ಇವರ ಹೆಸರು ಬಿ. ರಾಮು ಬೆಳಿಗ್ಗೆ ಎಂಟು ಗಂಟೆಯ ಹೊತ್ತಿಗೆ ಅಂಗಡಿಯ ಕದ ತೆರೆದರೆ, ಮುಚ್ಚುವುದು ರಾತ್ರಿ ಹತ್ತರ ಹೊತ್ತಿಗೆ ಹಬ್ಬ-ಹರಕೆಯ ದಿನಗಳಲ್ಲಿ ಒಮ್ಮೊಮ್ಮೆ ಬೆಳಿಗ್ಗೆ ಆರೂವರೆಗೆ ಅಂಗಡಿ ತೆರೆಯುತ್ತಾರೆ. 18ನೆಯ ವಯಸ್ಸಿನಲ್ಲಿ ತರಕಾರಿ ಅಂಗಡಿಯನ್ನು ತೆರೆದ ರಾಮು
ಅವರಿಗೆ ಈಗ ವಯಸ್ಸು 67. ಆಕಾಶವಾಣಿಯನ್ನು ಕೇಳುತ್ತಾ ತಮ್ಮ ಕಾಯಕದೊಂದಿಗೆ ದಿನಕಳೆಯುತ್ತಾರೆ. ಹಳೆಯ ಹಾಡುಗಳ ಪ್ರಸಾರ ಆದಾಗಲಂತೂ, ಬಂದ ಗ್ರಾಹಕರೊಡನೆ ಹಾಡು ಗುನುಗುವಿಕೆಯಲ್ಲಿ ಇವರ ವ್ಯವಹಾರ ಸಾಗುವುದು.

ಮೊದಲೆಲ್ಲಾ ಪಡುವಾರಹಳ್ಳಿಯಲ್ಲಿ ಇದ್ದದ್ದು ಇವರದ್ದೊಂದೇ ಅಂಗಡಿ, ಹಾಗಾಗಿ ಮಾಡಿದ ವ್ಯಾಪಾರ ಕೈಗೆಟುಕಿ, ಲಾಭ ನೀಡುತ್ತಿತ್ತು. ಈಗ ಎಲ್ಲೆಡೆ ತರಕಾರಿ ತಳ್ಳುಗಾಡಿ ಬಂದಿರುವುದರಿಂದ ವ್ಯಾಪಾರ ಕಡಿಮೆಯಾಗಿದೆಯೇ ಹೊರತು, ಬದುಕು ನಡೆಸುವುದಕ್ಕೇನೂ ಕೊರತೆಯಾಗಿಲ್ಲ ಎನ್ನುತ್ತಾ ಸಂತೃಪ್ತಿಯ ನಗು ಬೀರುತ್ತಾರೆ. ಅಂಗಡಿಯಲ್ಲೇ ತರಕಾರಿ ರೀದಿಸಬೇಕೆಂಬ ಜನರಿದ್ದಾರೆ. ತಂದೆಯಿಂದ ಕಲಿತ ಪಾಠವನ್ನು ಇವತ್ತಿಗೂ ಜೀವನಸೂತ್ರದಂತೆ ಪಾಲಿಸುತ್ತಿದ್ದಾರೆ. ಸುಮ್ಮನೆ ಕೂರುವುದೂ ಒಂದು ಕೆಲಸ. ಆದರೆ ಅದರಲ್ಲಿ ನೆಮ್ಮದಿ ಇಲ್ಲ. ಮಾಡುವ ಕೆಲಸದಲ್ಲಿ ನೆಮ್ಮದಿ ಮತ್ತು ಖುಷಿ ಸಿಗಬೇಕು ಎಂಬುದು ಇವರ ಅಭಿಪ್ರಾಯ.

 

 

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

2 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

5 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

7 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

7 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

7 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

7 hours ago