ಸಂಪಾದಕೀಯ

ಪಡುವಾರಹಳ್ಳಿಯ ತರಕಾರಿ ರಾಮು

ಪಡುವಾರಹಳ್ಳಿಯಲ್ಲಿ ತಮ್ಮ 18ನೇ ವಯಸ್ಸಿನಿಂದ ತರಕಾರಿ ವ್ಯಾಪಾರ ಮಾಡುತ್ತಿರುವ ಇವರ ಹೆಸರು ಬಿ. ರಾಮು ಬೆಳಿಗ್ಗೆ ಎಂಟು ಗಂಟೆಯ ಹೊತ್ತಿಗೆ ಅಂಗಡಿಯ ಕದ ತೆರೆದರೆ, ಮುಚ್ಚುವುದು ರಾತ್ರಿ ಹತ್ತರ ಹೊತ್ತಿಗೆ ಹಬ್ಬ-ಹರಕೆಯ ದಿನಗಳಲ್ಲಿ ಒಮ್ಮೊಮ್ಮೆ ಬೆಳಿಗ್ಗೆ ಆರೂವರೆಗೆ ಅಂಗಡಿ ತೆರೆಯುತ್ತಾರೆ. 18ನೆಯ ವಯಸ್ಸಿನಲ್ಲಿ ತರಕಾರಿ ಅಂಗಡಿಯನ್ನು ತೆರೆದ ರಾಮು
ಅವರಿಗೆ ಈಗ ವಯಸ್ಸು 67. ಆಕಾಶವಾಣಿಯನ್ನು ಕೇಳುತ್ತಾ ತಮ್ಮ ಕಾಯಕದೊಂದಿಗೆ ದಿನಕಳೆಯುತ್ತಾರೆ. ಹಳೆಯ ಹಾಡುಗಳ ಪ್ರಸಾರ ಆದಾಗಲಂತೂ, ಬಂದ ಗ್ರಾಹಕರೊಡನೆ ಹಾಡು ಗುನುಗುವಿಕೆಯಲ್ಲಿ ಇವರ ವ್ಯವಹಾರ ಸಾಗುವುದು.

ಮೊದಲೆಲ್ಲಾ ಪಡುವಾರಹಳ್ಳಿಯಲ್ಲಿ ಇದ್ದದ್ದು ಇವರದ್ದೊಂದೇ ಅಂಗಡಿ, ಹಾಗಾಗಿ ಮಾಡಿದ ವ್ಯಾಪಾರ ಕೈಗೆಟುಕಿ, ಲಾಭ ನೀಡುತ್ತಿತ್ತು. ಈಗ ಎಲ್ಲೆಡೆ ತರಕಾರಿ ತಳ್ಳುಗಾಡಿ ಬಂದಿರುವುದರಿಂದ ವ್ಯಾಪಾರ ಕಡಿಮೆಯಾಗಿದೆಯೇ ಹೊರತು, ಬದುಕು ನಡೆಸುವುದಕ್ಕೇನೂ ಕೊರತೆಯಾಗಿಲ್ಲ ಎನ್ನುತ್ತಾ ಸಂತೃಪ್ತಿಯ ನಗು ಬೀರುತ್ತಾರೆ. ಅಂಗಡಿಯಲ್ಲೇ ತರಕಾರಿ ರೀದಿಸಬೇಕೆಂಬ ಜನರಿದ್ದಾರೆ. ತಂದೆಯಿಂದ ಕಲಿತ ಪಾಠವನ್ನು ಇವತ್ತಿಗೂ ಜೀವನಸೂತ್ರದಂತೆ ಪಾಲಿಸುತ್ತಿದ್ದಾರೆ. ಸುಮ್ಮನೆ ಕೂರುವುದೂ ಒಂದು ಕೆಲಸ. ಆದರೆ ಅದರಲ್ಲಿ ನೆಮ್ಮದಿ ಇಲ್ಲ. ಮಾಡುವ ಕೆಲಸದಲ್ಲಿ ನೆಮ್ಮದಿ ಮತ್ತು ಖುಷಿ ಸಿಗಬೇಕು ಎಂಬುದು ಇವರ ಅಭಿಪ್ರಾಯ.

 

 

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

2 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

2 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

2 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago