ದಲಿತರು, ಶೋಷಿತರು, ಸಾಮಾಜಿಕವಾಗಿ ತುಳಿಯಲ್ಪಟ್ಟವರನ್ನು ಆರ್ಥಿಕವಾಗಿ ಮೇಲೆತ್ತುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಕಷ್ಟು ಅನುದಾನವನ್ನು ಸಮಾಜ ಕಲ್ಯಾಣ ಇಲಾಖೆಯಡಿ ಮೀಸಲಿಟ್ಟಿದೆ. ಅಲ್ಲದೆ, ಆಯಾ ವರ್ಷದ ಅನುದಾನವನ್ನು ಆಯಾ ವರ್ಷವೇ ವೆಚ್ಚ ಮಾಡಬೇಕು. ತಪ್ಪಿದರೆ ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತದೆ ಎಂಬ ಕಟ್ಟುನಿಟ್ಟಿನ ಸೂಚನೆಯನ್ನೂ ಸರ್ಕಾರ ನೀಡಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿಪರಿಶಿಷ್ಟ ಜಾತಿ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ೯೦೦ ಕೋಟಿ ರೂ. ವೆಚ್ಚವಾಗದೆ ಹಾಗೇ ಉಳಿದಿದೆ! ಮಾರ್ಚ್ ಅಂತ್ಯದೊಳಗೆ ಇಷ್ಟು ದೊಡ್ಡ ಮೊತ್ತವನ್ನು ಖರ್ಚು ಮಾಡಬೇಕಿದೆ. ಇದು ಸಾಧ್ಯವೇ? ಒಂದು ವೇಳೆ ಹಾಗೆ ವ್ಯಯಿಸಿದರೆ, ಹತ್ತಾರು ಅನುಮಾನಗಳು ಹುಟ್ಟಿಕೊಳ್ಳುತ್ತವೆ. ಇನ್ನು ಕರ್ನಾಟಕ ಬೋವಿ ಅಭಿವೃದ್ಧಿ ನಿಗಮದಲ್ಲಿ ಕೂಡ ೧೦೭ ಕೋಟಿ ರೂ. ಅನುದಾನ ಖರ್ಚಾಗದೆ ಉಳಿದಿದೆ. ಇತ್ತೀಚೆಗೆ ಸಮಾಜ ಕಲ್ಯಾಣ ಇಲಾಖೆ ಅಽಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಈ ಉದಾಸೀನತೆಗೆ ಚಾಟಿ ಬೀಸಿದ್ದಾರೆ.
೨೦೨೪-೨೫ನೇ ಸಾಲಿನ ಆಯವ್ಯಯದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ೫,೩೭೭ ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಅದರಲ್ಲಿ ೩,೬೩೧ ಕೋಟಿ ರೂ. ಬಿಡುಗಡೆಯಾಗಿದೆ. ಅಂಬೇಡ್ಕರ್ ನಿಗಮ ಮತ್ತು ಬೋವಿ ನಿಗಮಗಳೆರಡಲ್ಲಿ ಒಟ್ಟಾರೆ ೧,೦೦೭ ಕೋಟಿ ರೂ. ಖರ್ಚಾಗದೆ ಉಳಿದಿದೆ. ಸಿದ್ದರಾಮಯ್ಯ ಅವರೇ ಹೇಳಿರುವಂತೆ ಅನುದಾನವನ್ನು ಹಣಕಾಸು ವರ್ಷದ ಕೊನೆಯ ತಿಂಗಳಿನವರೆಗೂ ಇಟ್ಟುಕೊಂಡಿದ್ದು, ನಂತರ ತರಾತುರಿಯಲ್ಲಿ ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಆದರೆ, ಇದಕ್ಕಾಗಿ ಫಲಾನುಭವಿಗಳು ವರ್ಷಪೂರ್ತಿ ಕಾಯುತ್ತಿರುತ್ತಾರೆ. ಸ್ವಯಂ ಉದ್ಯೋಗದ ಆಶಯದಿಂದ ನಿಗಮಗಳಿಗೆ ಅರ್ಹರು ಸಾಲ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿರುತ್ತಾರೆ. ಅಂಗಡಿ, ಹೈನುಗಾರಿಕೆ, ತರಕಾರಿ ಮಾರಾಟ ಇತ್ಯಾದಿ ಉದ್ಯೋಗದ ಮೂಲಕ ಸ್ವಾವಲಂಬಿಗಳಾಗುವ ಕನಸನ್ನು ಹೊತ್ತಿರುತ್ತಾರೆ. ನಿಗಮಕ್ಕೆ ಒದಗಿಸಬೇಕಿರುವ ದಾಖಲೆಗಳನ್ನು ಪಡೆದುಕೊಳ್ಳುವುದೂ ಸಾಹಸವೇ ಆಗಿರುತ್ತದೆ. ಎಲ್ಲ ದಾಖಲೆಗಳನ್ನೂ ಒದಗಿಸಿದರೂ ಅಂತಿಮವಾಗಿ ಅದು ಬ್ಯಾಂಕ್ನಲ್ಲಿ ಬಂದು ನಿಲ್ಲುತ್ತದೆ. ಬ್ಯಾಂಕ್ನಲ್ಲಿ ಅಷ್ಟು ಸುಲಭವಾಗಿ ಸಾಲ ಕೊಡುವುದಿಲ್ಲ. ಸರ್ಕಾರದಿಂದ ಸಾಕಷ್ಟು ರಿಯಾಯಿತಿ (ಸಬ್ಸಿಡಿ) ನೀಡಲಾಗಿರುತ್ತದೆ. ಅಂದರೆ ೧ ಲಕ್ಷ ರೂ. ಸಾಲ ಪಡೆದರೆ ಅಥವಾ ಆ ಮೌಲ್ಯದ ವಸ್ತು ಪಡೆದರೆ, ಶೇ.೪೦, ೬೦… ಹೀಗೆ ರಿಯಾಯಿತಿ ಇರುತ್ತದೆ. ಉಳಿದ ಹಣವನ್ನು ಫಲಾನುಭವಿ ಬ್ಯಾಂಕ್ಗೆ ವಾಪಸ್ ಮರುಪಾವತಿಸಬೇಕಾಗುತ್ತದೆ. ಕಂತಿನ ರೂಪದಲ್ಲಿ ಮರುಪಾವತಿಗೆ ಅವಕಾಶ ಇರುತ್ತದೆ. ಆದರೆ, ಬ್ಯಾಂಕ್ನಲ್ಲಿ ಅಷ್ಟು ಸುಲಭವಾಗಿ ಸಾಲ ಕೊಡುವುದಕ್ಕೆ ಒಪ್ಪುವುದಿಲ್ಲ. ಇಲಾಖೆಯ ಅಧಿಕಾರಿಗಳೂ ಈ ಸಂಬಂಧ ತಲೆಕೆಡಿಸಿಕೊಳ್ಳುವುದಿಲ್ಲ. ಹಾಗಾಗಿ ಅನುದಾನ ನಿಷ್ಪ್ರಯೋಜಕವಾಗುತ್ತದೆ.
ಆದರೆ, ಆರ್ಥಿಕ ವರ್ಷ ಕೊನೆಯಾಗುವ ವೇಳೆಗೆ ಅದು ಹೇಗೋ ಅಡ್ಜಸ್ಟ್ಮೆಂಟ್ ಮಾಡಿ, ಒಂದಷ್ಟು ಫಲಾನುಭವಿಗಳಿಗೆ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಆದರೆ, ಸಾಕಷ್ಟು ಅನುದಾನ ಉಳಿದುಕೊಳ್ಳುತ್ತದೆ. ಹಾಗಂತ ಅರ್ಜಿ ಸಲ್ಲಿಸಿದ ಎಲ್ಲ ಅರ್ಹ ಫಲಾನುಭವಿಗಳಿಗೂ ಸೌಲಭ್ಯ ದೊರೆತಿರುವುದಿಲ್ಲ. ಅಲ್ಲದೆ, ರಾಜಕೀಯ ನಾಯಕರ ಪ್ರಭಾವ ಬಳಸುವವರಿಗೆ, ಅಧಿಕಾರಿ ವರ್ಗದ ಕೃಪಾಕಟಾಕ್ಷ ಹೊಂದಿರುವವರಿಗೆ ಮಾತ್ರವೇ ಈ ಸಾಲ ಸೌಲಭ್ಯ ದೊರೆಯುತ್ತವೆ ಎನ್ನುವ ಆರೋಪಗಳೂ ಇವೆ. ಇದಕ್ಕೆ ವರ್ಷದ ಕೊನೆಯಲ್ಲಿ ಅನುದಾನ ಖರ್ಚು ಮಾಡುವ ಪರಿಪಾಠ ಇಂಬು ನೀಡುತ್ತದೆ.
ಸರ್ಕಾರದ ಈ ನಡೆಯಿಂದ ಜನರಿಗೆ ಅಸಮಾಧಾನ ಮೂಡಬಹುದು. ಇದಕ್ಕೆ ಪರಿಹಾರ ಎಂದರೆ, ಸರ್ಕಾರ ಅಥವಾ ಸಮಾಜ ಕಲ್ಯಾಣ ಇಲಾಖೆ ಮಾಸಿಕವಾರು ಅನುದಾನ ವೆಚ್ಚವನ್ನು ವಿಂಗಡಿಸಬೇಕು. ವರ್ಷಕ್ಕೆ ಅಂದಾಜು ೩,೦೦೦ ಕೋಟಿ ರೂ. ಅನುದಾನ ಖರ್ಚು ಮಾಡಬೇಕಿದ್ದರೆ, ಅದನ್ನು ೧೨ ತಿಂಗಳಿಗೆ ಹಂಚಿಕೆ ಮಾಡಿ, ಪಾರದರ್ಶಕವಾಗಿ ಫಲಾನುಭವಿಗಳಿಗೆ ತಲುಪುವಂತೆ ಮಾಡಬೇಕಿದೆ. ಅಲ್ಲದೆ, ಬ್ಯಾಂಕ್ ಅಧಿಕಾರಿಗಳಿಗೂ ಇದನ್ನು ಅರ್ಥಮಾಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯೋಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ.
” ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಅಭಿವೃದ್ಧಿಗಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿಪರಿಶಿಷ್ಟ ಜಾತಿ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ೯೦೦ ಕೋಟಿ ರೂ. ವೆಚ್ಚವಾಗದೆ ಉಳಿದಿದೆ! ಮಾರ್ಚ್ ಅಂತ್ಯದೊಳಗೆ ಇಷ್ಟು ದೊಡ್ಡ ಮೊತ್ತವನ್ನು ಖರ್ಚು ಮಾಡಬೇಕಿದೆ. ಇದು ಸಾಧ್ಯವೆ? ಒಂದು ವೇಳೆ ಹಾಗೆ ವ್ಯಯಿಸಿದರೆ, ಹತ್ತಾರು ಅನುಮಾನಗಳು ಹುಟ್ಟಿಕೊಳ್ಳುತ್ತವೆ.”
ನವೀನ್ ಡಿಸೋಜ ೪ ತಿಂಗಳಿನಿಂದ ಬಂದ್ ಆಗಿದ್ದ ಮುಗಿಲುಪೇಟೆ ಖ್ಯಾತಿಯ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ತವರಿನವರೇ ಮುಖ್ಯಮಂತ್ರಿಯಾಗಿದ್ದಾಗ ಹತ್ತಾರು ಯೋಜನೆಗಳು ಮಂಜೂರಾಗಿದ್ದರೆ, ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ…
ಕೆ.ಪಿ.ಮದನ್ ಮೈಸೂರು: ಹಲವೆಡೆ ಬೀದಿ ನಾಯಿಗಳು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ವರದಿಗಳು ಪ್ರಕಟವಾಗುತ್ತಿವೆ. ಇತ್ತ ನಗರದ ಆಸುಪಾಸಿನಲ್ಲಿರುವ ಕೆಲ ಬಡಾವಣೆಗಳ…
ಎಸ್.ಎಸ್.ಭಟ್ ಬೇಳೆ, ಎಣ್ಣೆಗೆ ಶಿಕ್ಷಣ ಇಲಾಖೆ ವಿಧಿಸಿರುವ ದರವೇ ಶಿಕ್ಷಕರಿಗೆ ಹೊರೆ ನಂಜನಗೂಡು: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಬಿಸಿಯೂಟ…
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…