ಎಡಿಟೋರಿಯಲ್

ನುಡಿದಂತೆ ನಡೆದ, ಬರೆದಂತೆ ಬದುಕಿದ ಶಿವರಾಮು ಕಾಡನಕುಪ್ಪೆ

ಪದ್ಮಾ ಶ್ರೀರಾಮ್

ಶಿವರಾಮ ಕಾಡನಕುಪ್ಪೆ ಸಂಸ್ಮರಣ ಗ್ರಂಥ ಬಿಡುಗಡೆ ಸಮಾರಂಭ ನವೆಂಬರ್‌ ೨೭ ರಂದು ಬೆಳಿಗ್ಗೆ ೧೦.೩೦ಕ್ಕೆ ವಿಜಯನಗರ ೧ನೇ ಹಂತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಏರ್ಪಾಡಾಗಿದೆ. ಹಿರಿಯಪತ್ರಕರ್ತ ಜಿ.ಪಿ. ಬಸವರಾಜು ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ. ಮಡ್ಡೀಕೆರೆ ಗೋಪಾಲ್, ಪ್ರೊ. ಜಿ.ಚಂದ್ರಶೇರ್ಖ, ಡಾ.ಕೆ.ಕಾಳಚನ್ನೇಗೌಡ ನುಡಿನಮನ ಸಲ್ಲಿಸಲಿದ್ದಾರೆ. ಪ. ಮಲ್ಲೇಶ್ ಅಧ್ಯಕ್ಷತೆ ಸಮಾರಂಭದ ವಹಿಸಲಿದ್ದಾರೆ. ಡಾ.ರಾಗೌ ಪ್ರಧಾನ ಸಂಪಾದಕತ್ವದಲ್ಲಿ ಡಾ.ಬೋರೇಗೌಡ ಚಿಕ್ಕಮರಳಿ, ಡಾ.ಮ. ರಾಮಕೃಷ್ಣ ಅವರು ಶಿವರಾಮ ಕಾಡನಕುಪ್ಪೆ ಸಂಸ್ಮರಣ ಗ್ರಂಥವನ್ನು ಸಂಪಾದಿಸಿದ್ದಾರೆ.
ಕಳೆದ ಶತಮಾನದ ೭೦ ಮತ್ತು ೮೦ನೇ ದಶಕಗಳಲ್ಲಿ ಅನೇಕ ಗ್ರಾಮೀಣ ಪ್ರತಿಭೆಗಳು ವಿಶ್ವವಿದ್ಯಾನಿಲಯದ ವ್ಯಾಸಂಗಕ್ಕಾಗಿ ನಗರಗಳತ್ತ ಚಲಿಸಿದವು. ಈ ಚಲನಶೀಲ ಕ್ರಿಯೆಯ ಫಲವಾಗಿ ಶ್ರೀ ಶಿವರಾಮು ಕಾಡನಕುಪ್ಪೆಯವರು ತಮ್ಮ ವಿದ್ಯಾಭ್ಯಾಸಕ್ಕಾಗಿ ರಾಮನಗರದಿಂದ ಮೈಸೂರಿನ ಕಡೆಗೆ ಬಂದರು.
ಸಹಜವಾಗಿಯೇ ಅತ್ಯುತ್ತಮ ವಿದ್ಯಾರ್ಥಿಯಾಗಿ ಒಳ್ಳೆಯ ವಿದ್ಯಾಭ್ಯಾಸವನ್ನು ಪಡೆದು ಮಹಾರಾಜ ಕಾಲೇಜು, ಹೀಗೆ ಕೆಲವು ಕಾಲೇಜುಗಳಲ್ಲಿ ಉಪಾಧ್ಯಾಯರಾಗಿ ಸೇವೆ ಸಲ್ಲಿಸಿ ಅಂತಿಮವಾಗಿ ವಿದ್ಯಾವರ್ಧಕ ಕಾಲೇಜಿನಲ್ಲಿ ನೆಲೆಯೂರಿದರು.

ತಮ್ಮ ವಿದ್ಯಾರ್ಥಿದೆಸೆಯಿಂದಲೇ ಸಮಾಜವಾದಿ ಆಂದೋಲನಗಳಲ್ಲಿ ಭಾಗವಹಿಸಿ ಜಾತಿ ವ್ಯವಸ್ಥೆ, ಇಂಗ್ಲೀಷ್ ಹೇರಿಕೆ ಇತ್ಯಾದಿಗಳ ಬಗ್ಗೆ ಬದಲಾವಣೆಯನ್ನು ಬಯಸುವ ಎಲ್ಲರಂತೆ ಶಿವರಾಮು ಸಹ ಎಲ್ಲ ಆಂದೋಲನಗಳಲ್ಲಿ ಭಾಗವಹಿಸಿದ್ದರು.
ನುಡಿದಂತೆ ನಡೆಯಬೇಕು, ಬರೆದಂತೆ ಬದುಕಬೇಕು ಎನ್ನುವ ಆಶಯದಂತೆ ತಮ್ಮ ವೃತ್ತಿಜೀವನದಲ್ಲಿ ಸತತವಾಗಿ ಆ ಆಶಯವನ್ನು ಪಾಲಿಸಲು ಹೋರಾಡುತ್ತಲೇ ಬಂದಿದ್ದಾರೆ.

ಜಾತಿ ಕಟ್ಟಳೆಗಳನ್ನು ನಿರ್ಮೂಲನ ಮಾಡುವ ದಿಶೆಯಲ್ಲಿ ಅನೇಕ ಅಂತರ್ಜಾತೀಯ ಮದುವೆಗಳನ್ನು ಪ್ರೋತ್ಸಾಹಿಸಿ, ಕೆಲವು ಸಂಘಟಣೆಗಳ ಮೂಲಕ ಇದಕ್ಕಾಗಿ ಹೋರಾಡಿದ್ದಲ್ಲದೆ ಸ್ವತಃ ತಾವೂ ಅಂತರ್ಜಾತೀಯ ಮದುವೆ ಆದರು.
ಇದೇ ರೀತಿಯ ‘ಲಿಬರಲ್’ ವಾತಾವರಣವನ್ನು ತಮ್ಮ ಮಕ್ಕಳಿಗೂ ಕಲ್ಪಿಸಿದರು.

ಶ್ರೀ ಶಿವರಾಮು ಅವರು ಎಂತಹ ಕಷ್ಟ ಪರಿಸ್ಥಿತಿಯಲ್ಲೂ ಧೃತಿಗೆಡದೆ ಗಟ್ಟಿತನವನ್ನು ಪ್ರದರ್ಶಿಸಿದರು. ಇದಕ್ಕೆ ಇವರನ್ನು ಕಾಡಿದ ಕಾಯಿಲೆಗಳು, ಅಪಘಾತಗಳೇ ಕಾರಣ. ಸತತವಾಗಿ ಶಿವರಾಮು ಅವರನ್ನು ಕಾಡಿದ ಅನಾರೋಗ್ಯವನ್ನು ಧೈರ್ಯದಿಂದ ಎದುರಿಸಿ, ಆ ಸಂಕಷ್ಟಗಳನ್ನೆಲ್ಲಾ ಮಿತ್ರರಿಗೆ ವಿವರಿಸಿ ತಮ್ಮ ನೋವನ್ನು ಕಡಿಮೆ ಮಾಡಿಕೊಂಡರು.
ರೋಗ ರಟ್ಟಾಗಬೇಕೆಂಬ ಗಾದೆಯಂತೆ ತಮ್ಮ ಯಾವ ಬಾಧೆಗಳನ್ನೂ ಮುಚ್ಚಿಡದೆ ವೈದ್ಯರು, ಮಿತ್ರರ ಜೊತೆಯಲ್ಲಿ ಚರ್ಚಿಸಿ ಸದಾ ಯಾರಾದರೊಬ್ಬ ಧನ್ವಂತರಿಗೆ ಛಾಲೆಂಜಾಗಿ ಪರಿಣಮಿಸುತ್ತಿದ್ದರು.

ಈ ಎಲ್ಲ ಕೋಟಲೆಗಳ ನಡುವೆ ತಮ್ಮ ಬರಹಗಳನ್ನೇನೂ ಕಡೆಗಣಿಸಿರಲಿಲ್ಲ. ಕತೆ, ಕಾದಂಬರಿ, ಕವನ, ವಿಮರ್ಶೆ ಈ ಪ್ರಾಕಾರಗಳಲ್ಲಿ ಸಮರ್ಥವಾಗಿಯೇ ತಮ್ಮನ್ನು ತೊಡಗಿಸಿಕೊಂಡರು. ವಿಮರ್ಶಕರಾಗಿಯೂ ಕನ್ನಡ ಸಾಹಿತ್ಯದಲ್ಲಿ ಗಮನಾರ್ಹ ಕೆಲಸಗಳನ್ನು ಮಾಡಿದ್ದಾರೆ. ಶಿವರಾಮು ಅವರು ಅನೇಕ ವರ್ಷಗಳು ಕುಕ್ಕರಹಳ್ಳಿಯಲ್ಲಿ ದಲಿತರೊಡನೆ ಜೀವಿಸಿದ ಜೀವನಾನುಭವವನ್ನು ಕುಕ್ಕರಹಳ್ಳಿ ಎಂಬ ಕೃತಿಯಲ್ಲಿ ತುಂಬಾ ಮನೋಜ್ಞವಾಗಿ ದಾಖಲಿಸಿದ್ದಾರೆ. ಎಲ್ಲ ಸಾಹಿತ್ಯಪ್ರಿಯರು ಓದಲೇಬೇಕಾದ ಈ ಕೃತಿ, ನನ್ನ ಅಚ್ಚುಮೆಚ್ಚು.

ಸರ್ಕಾರಿ ಮಟ್ಟದಲ್ಲಿ ಅನೇಕ ಅಕಾಡೆಮಿಗಳು, ಯೂನಿವರ್ಸಿಟಿ ಮಟ್ಟದಲ್ಲಿ ಅನೇಕ ಆಡಳಿತಾತ್ಮಕ ಮಂಡಳಿಗಳ ಸದಸ್ಯರಾಗಿ ಎಲ್ಲರೂ ಮೆಚ್ಚುವಂತಹ ನಿಷ್ಪಕ್ಷಪಾತ ಧೋರಣೆಯನ್ನು ಶಿವರಾಮು ಪ್ರದರ್ಶಿಸಿದ್ದಾರೆ. ಇವೆಲ್ಲಕ್ಕೂ ಕಿರೀಟ ಪ್ರಾಯವಾಗಿ ರಾಮನಗರದಲ್ಲಿ ನಡೆದ ಬೆಂಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು.
ಪ್ರಿಯ ಸ್ನೇಹಿತ ಶಿವರಾಮು ಕಾಡನಕುಪ್ಪೆಯವರ ನಿರ್ಗಮನದಿಂದ ನಮ್ಮ ಮನಸ್ಸಿನ ಒಂದು ಭಾಗವನ್ನು ಕಳೆದುಕೊಂಡಂತಾಗಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago