ಎಡಿಟೋರಿಯಲ್

ಹೆಣ್ಣು ಹುಟ್ಟಿದರೆ ಸಂಭ್ರಮಿಸುವ ಬೇಡಿಯಾ ಜನಾಂಗ; ಆದರೆ, ಕಾರಣ ಬೇರೆ!

ಪುರುಷ ಪ್ರಧಾನ ಭಾರತೀಯ ಕುಟುಂಬಗಳಲ್ಲಿ ಹೆಣ್ಣು ಮಗು ಹುಟ್ಟಿದರೆ ಮೂಗು ಮುರಿಯುವುದು ಒಂದು ಸಾಮಾನ್ಯ ಸಂಗತಿಹೆಣ್ಣು ಭ್ರೂಣ ಹತ್ಯೆಯೂ ಅಷ್ಟೇ ಸಾಮಾನ್ಯವೆಂಬಂತೆ ಅವ್ಯಾಹತವಾಗಿ ನಡೆಯುತ್ತದೆಮುಖ್ಯವಾಗಿಉತ್ತರ ಭಾರತದ ರಾಜ್ಯಗಳಲ್ಲಿಆದರೆಮಧ್ಯಪ್ರದೇಶದ ಬೇಡಿಯಾ ಬುಡಕಟ್ಟು ಜನಾಂಗ ಇದಕ್ಕೊಂದು ಅಪವಾದಈ ಜನಾಂಗದಲ್ಲಿ ಹೆಣ್ಣು ಮಕ್ಕಳು ಹುಟ್ಟಿದರೆ ಕುಟುಂಬಗಳು ಸಂಭ್ರಮಿಸುತ್ತವೆಅಷ್ಟೇ ಅಲ್ಲಹೆಣ್ಣೊಬ್ಬಳು ಗರ್ಭಧರಿಸಿದಾಗ ಹುಟ್ಟುವ ಮಗು ಗಂಡಾಗದೆ ಹೆಣ್ಣಾಗಲಿ ಎಂದು ಬೇಡಿಯಾ ಜನ ಹಾರೈಸುತ್ತಾರೆಆದರೆಬೇಡಿಯಾ ಜನಾಂಗ ಹೆಣ್ಣು ಸಂತಾನ ಹುಟ್ಟಿದಾಗ ಹೀಗೆ ಸಂತೋಷಿಸುವುದಕ್ಕೆ ಕಾರಣ ಬೇರೆಯದೇ ಆಗಿದೆ.

ಬೇಡಿಯಾ ಜನಾಂಗದಲ್ಲಿ ವೇಶ್ಯವಾಟಿಕೆ ಒಂದು ಕುಲ ಕಸುಬುಬಹುತೇಕ ಬೇಡಿಯಾ ಕುಟುಂಬಗಳ ಸಂಪಾದನೆಯ ದಾರಿ ಇದೊಂದೇಈ ಜನಾಂಗದಲ್ಲಿ ಹೆಣ್ಣು ಮೈನೆರೆದು ಯೌವನಕ್ಕೆ ಕಾಲಿಡುತ್ತಿದ್ದಂತೆ ಅವಳ ಮುಂದಿರುವ ಆಯ್ಕೆಗಳು ಎರಡೇಚಿಕ್ಕ ಪ್ರಾಯಕ್ಕೆ ಮದುವೆಯಾಗುವುದು ಅಥವಾ ತಲೆತಲೆ ಮಾರುಗಳಿಂದ ತನ್ನ ಜನಾಂಗ ಸಾಂಪ್ರದಾಯಿಕವಾಗಿ ಅನುಸರಿಸಿಕೊಂಡು ಬಂದ ‘ಉದ್ಯೋಗ’ಕ್ಕೆ ತಯಾರಾಗುವುದು. ‘ಕುಲ ಕಸುಬು’ ಮಾಡಲು ಶುರು ಮಾಡುವ ಹೆಣ್ಣೇ ಕುಟುಂಬದ ವರಮಾನ ತರುವ ಏಕಮೇವ ಸದಸ್ಯೆಯಾಗುತ್ತಾಳೆತಂದೆಅಣ್ಣತಮ್ಮ ಮೊದಲಾದ ಮನೆಯ ಪುರುಷ ಸದಸ್ಯರು ಒಂದೋ ಮನೆಯಲ್ಲಿದ್ದು ಅವಳ ಗಳಿಕೆಯಲ್ಲಿ ಕಾಲ ಕಳೆಯುತ್ತಾರೆ ಅಥವಾ ಅವಳಿಗೆ ಗಿರಾಕಿಗಳನ್ನು ಹುಡುಕಿ ತರುವ ತಲೆ ಹಿಡುಕರಾಗುತ್ತಾರೆಹಾಗಾಗಿಬೇಡಿಯಾ ಜನಾಂಗದಲ್ಲಿ ಹೆಣ್ಣುಗಳು ಬಿಡಿಗಂಡುಗಳೂ ಶಿಕ್ಷಣಕ್ಕಾಗಿ ಶಾಲೆಗೆ ಹೋಗುವುದು ತೀರಾ ಅಪರೂಪಹೋದರೂ ಅರ್ಧದಲ್ಲೇ ಬಿಡುತ್ತಾರೆ.

ಬ್ರಿಟಿಷ್ ಸರ್ಕಾರದಲ್ಲಿ ‘ಅಪರಾಧಿ ಜನಾಂಗ (ಕ್ರಿಮಿನಲ್ ಟ್ರೈಬ್)’ ಎಂದು ಹೆಸರಿಸಲ್ಪಟ್ಟು ಈಗ ‘ಅಲೆಮಾರಿ ಜನಾಂಗ (ನೊಮಾಡಿಕ್ ಟ್ರೈಬ್)’ ಎಂದು ಪರಿಗಣಿಸಲ್ಪಟ್ಟಿರುವ ಬೇಡಿಯಾ ಜನಾಂಗವು ಕಟ್ಟುಪಾಡುಗಳ ವಿಚಾರದಲ್ಲಿ ಅತ್ಯಂತ ಬಿಗಿಯಾಗಿ ಹೆಣೆಯಲ್ಪಟ್ಟ ಒಂದು ಜನಾಂಗಇಂತಹ ಜನಾಂಗಗಳಲ್ಲಿ ಸುಧಾರಣೆ ತರುವುದು ಹೆಚ್ಚೂ ಕಡಿಮೆ ಅಸಾಧ್ಯದ ಮಾತುಯಾರಾದರೂ ಜನಾಂಗದ ಸಂಪ್ರದಾಯಕ್ಕೆ ವಿರೋಧ ವ್ಯಕ್ತಪಡಿಸಿದರೆ ಇಡೀ ಜನಾಂಗ ಒಂದಾಗಿ ಅಂತಹ ವಿರೋಧವನ್ನು ವ್ಯವಸ್ಥಿತವಾಗಿ ನಿವಾರಿಸುತ್ತದೆಇಂತಹ ಬೇಡಿಯಾ ಜನಾಂಗದಲ್ಲೂ ಈಗ ಬದಲಾವಣೆಯ ಗಾಳಿ ಬೀಸತೊಡಗಿದೆಇದಕ್ಕೆ ಕಾರಣ ವೀರೇಂದ್ರ ಮಿಶ್ರಾ ಎಂಬೊಬ್ಬ ಐಪಿಎಸ್ ಅಧಿಕಾರಿ.

53 ವರ್ಷ ಪ್ರಾಯದ ವೀರೇಂದ್ರ ಮಿಶ್ರಾ ಈಗ ಭೋಪಾಲದಲ್ಲಿ ‘ಮಧ್ಯಪ್ರದೇಶ ರಾಜ್ಯ ಇಂಡಸ್ಟ್ರಿಯಲ್ ಫೋರ್ಸ್’ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆಇದಕ್ಕೂ ಮೊದಲು ಅವರು ಯುವಜನ ಸೇವಾ ಇಲಾಖೆ ಮತ್ತು ಸೋಷಿಯಲ್ ಜಸ್ಟಿಸ್ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದರುಕೆಲವು ವರ್ಷಗಳ ಹಿಂದೆ ವೀರೇಂದ್ರ ಮಿಶ್ರಾ ರಾಜಗಢದ ನರಸಿಂಹಗಢ ಎಂಬಲ್ಲಿ ಕರ್ತವ್ಯಕ್ಕೆ ನಿಯುಕ್ತಿಗೊಂಡಾಗ ಅವರಿಗೆ ಬೇಡಿಯಾ ಜನಾಂಗದ ವೇಶ್ಯಾವಾಟಿಕೆಯ ಸಂಪ್ರದಾಯದ ಬಗ್ಗೆ ತಿಳಿವಳಿಕೆ ಸಿಕ್ಕಿತುಶಿಕ್ಷಣ ಮತ್ತು ಪರ್ಯಾಯ ಉದ್ಯೋಗ ಇವೆರಡರಿಂದಷ್ಟೇ ಈ ನಿಕೃಷ್ಟ ಸಂಪ್ರದಾಯವನ್ನು ಹೋಗಲಾಡಿಸಬಹುದು ಎಂದು ತೀರ್ಮಾನಿಸಿದ ವೀರೇಂದ್ರ ಮಿಶ್ರಾ ಅದಕ್ಕಾಗಿ 2002ರಲ್ಲಿ ‘ಸಂವೇದನಾ’ ಎಂಬ ಒಂದು ಸಾಮಾಜಿಕ ಸಂಸ್ಥೆಯನ್ನು ಹುಟ್ಟು ಹಾಕಿದರು.

ಬೇಡಿಯಾ ಜನಾಂಗದ ಕೆಲವು ಮಕ್ಕಳು ಶಾಲೆಗೆ ಹೋಗುತ್ತಿದ್ದರೂ ಅವರ ಮನೆಯ ಹೆಂಗಸರ ‘ಉದ್ಯೋಗ’ದ ಬಗ್ಗೆ ತಿಳಿದ ಇತರ ಸಮುದಾಯದ ಮಕ್ಕಳು ಮಾಡುವ ಅವಮಾನದಿಂದಾಗಿ ಅರ್ಧದಲ್ಲೇ ಶಾಲೆ ಬಿಡುತ್ತಿದ್ದರುಆ ಅವಮಾನದಿಂದ ತಪ್ಪಿಸಿಕೊಳ್ಳಲು ಕೆಲವು ಬೇಡಿಯಾ ಮಕ್ಕಳು ತಮ್ಮ ಜಾತಿಯ ಹೆಸರು ಹೇಳದೆ ಬೇರೆ ಜಾತಿಯ ಹೆಸರು ಹೇಳುತ್ತಿದ್ದರುಇದನ್ನೆಲ್ಲ ತಿಳಿದುಕೊಂಡ ವೀರೇಂದ್ರ ಮಿಶ್ರಾಬೇಡಿಯಾ ಜನಾಂಗದ ಹಲವು ಮಕ್ಕಳನ್ನುಅವರ ಹೆತ್ತವರನ್ನು ಒಪ್ಪಿಸಿಬೇರೆ ಮಕ್ಕಳಿಂದ ಅವಮಾನಕ್ಕೀಡಾಗುವುದನ್ನು ತಪ್ಪಿಸಲು ಅವರ ಹುಟ್ಟೂರಿನಿಂದ ದೂರವಿರುವ ಭೂಪಾಲಕ್ಕೆ ತಂದು ಅಲ್ಲಿನ ಸರ್ಕಾರಿ ಶಾಲೆಗೆ ಸೇರಿಸಿದರುಆದರೆಅಲ್ಲಿ ಬೇರೊಂದು ಸಮಸ್ಯೆ ಎದುರಾಯಿತುಹೆಚ್ಚಿನ ಬೇಡಿಯಾ ಮಕ್ಕಳಿಗೆ ತಮ್ಮ ಅಪ್ಪನ ಹೆಸರು ಗೊತ್ತಿರುವುದು ಬಿಡಿಅವರಿಗೆ ತಮ್ಮ ಅಪ್ಪ ಯಾರೆಂಬುದೇ ಗೊತ್ತಿರುವುದಿಲ್ಲವೀರೇಂದ್ರ ಮಿಶ್ರಾ ಶಾಲಾ ಆಡಳಿತ ಮಂಡಳಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟುಆ ಮಕ್ಕಳಿಗೆ ತಂದೆಯ ಹೆಸರಿನ ಬದಲು ಅವರುಗಳ ತಾಯಂದಿರ ಹೆಸರು ಉಪಯೋಗಿಸಿ ಪ್ರವೇಶ ಕೊಡಿಸಿದರುಆ ಮಕ್ಕಳ ದಿನನಿತ್ಯದ ಶಿಕ್ಷಣದ ಮೇಲ್ವಿಚಾರಣೆಯಿಂದ ಹಿಡಿದುಶಿಕ್ಷಣ ಮುಗಿಸಿ ಉದ್ಯೋಗ ಪಡೆಯುವವರೆಗೂ ಅವರ ಜವಾಬ್ದಾರಿ ಹೊತ್ತರುಅದರ ಪರಿಣಾಮವಾಗಿ ಬೇಡಿಯಾ ಜನಾಂಗ ನಿಧಾನವಾಗಿ ಬದಲಾವಣೆಗೆ ತೆರೆದುಕೊಂಡಿತು.

ಸಂವೇದನಾ ಸಂಸ್ಥೆ ಸತತ ಪರಿಶ್ರಮದ ಮೂಲಕ ಆರು ಜಿಲ್ಲೆಗಳ 60 ಹಳ್ಳಿಗಳ ಸುಮಾರು 5000 ಬೇಡಿಯಾ ಮಕ್ಕಳನ್ನು ಶಾಲೆಗೆ ಕಳಿಸುವಲ್ಲಿ ಯಶಸ್ವಿಯಾಗಿದೆಹೊರ ಜಗತ್ತಿನ ಸಂಪರ್ಕಕ್ಕೆ ಬಂದ ಈ ಮಕ್ಕಳಲ್ಲಿ ಕೆಲವರು ಮುಂದೆ ವೀರೇಂದ್ರ ಮಿಶ್ರಾರಂತೆ ತಾವೂ ಪೊಲೀಸ್ ಅಧಿಕಾರಿಗಳಾಗಲು ಬಯಸಿದರೆಉಳಿದವರು ವೈದ್ಯರುಎಂಜಿನಿಯರ್ಐಎಎಸ್ ಅಧಿಕಾರಿಗಳುಲಾಯರ್‌ಗಳಾಗುವ ಗುರಿ ಹಾಕಿಕೊಂಡಿದ್ದಾರೆಉದಾಹರಣೆಗೆರಾಗಿಣಿ ಎಂಬ ಹುಡುಗಿ ಹಳ್ಳಿಯಿಂದ ಹೊರ ಹೋಗಿ ಕಾಲೇಜು ಶಿಕ್ಷಣ ಪಡೆಯುತ್ತಿರುವ ಪ್ರಪ್ರಥಮ ಬೇಡಿಯಾ ಹೆಣ್ಣುಅವಳು ಈಗ ಮೂರನೇ ವರ್ಷದ ಎಂಜಿನಿಯರಿಂಗ್ ಕೋರ್ಸ್ ಮಾಡುತ್ತಿದ್ದಾಳೆ ಮತ್ತು ಮುಂದೆ ತಾನೊಬ್ಬ ಐಎಎಸ್ ಅಧಿಕಾರಿಯಾಗಲು ಸಿದ್ಧತೆ ನಡೆಸಿದ್ದಾಳೆಕಾಂಚನ ಎಂಬ ಇನ್ನೊಬ್ಬ ಬೇಡಿಯಾ ಹುಡುಗಿ ಭೋಪಾಲ ವಿಶ್ವ ವಿದ್ಯಾನಿಲಯದಲ್ಲಿ ಕಾನೂನು ವ್ಯಾಸಂಗ ಮಾಡುತ್ತಿದ್ದಾಳೆಹಳ್ಳಿಯಲ್ಲಿ ವೇಶ್ಯ ವಾಟಿಕೆ ನಡೆಸುತ್ತಿರುವ ಅವಳ ತಾಯಿ ತನ್ನ ಇಬ್ಬರು ಹೆಣ್ಣು ಮಕ್ಕಳು ತನ್ನಂತಾಗದೆ ಗೌರವಯುತ ಬದುಕು ನಡೆಸಲು ಅವರ ಶಿಕ್ಷಣಕ್ಕೆ ನೆರವಾಗುತ್ತಿದ್ದಾಳೆಕಾಂಚನ ಮುಂದೆ ತಾನೊಬ್ಬಳು ಲಾಯರ್ ಆಗಿ ತನ್ನ ಜನಾಂಗದ ಏಳಿಗೆಗೆ ಶ್ರಮಿಸುತ್ತೇನೆ ಎಂದು ಹೇಳುತ್ತಾಳೆಮುಂದಿನ ವರ್ಷ ಹಳ್ಳಿಯಲ್ಲಿರುವ ತನ್ನ ತಂಗಿಯನ್ನೂ ವಿದ್ಯಾಭ್ಯಾಸಕ್ಕಾಗಿ ಭೂಪಾಲಕ್ಕೆ ಕರೆತರುವ ಆಲೋಚನೆಯಲ್ಲಿದ್ದಾಳೆ.

 

ಬೇಡಿಯಾ ಜನಾಂಗದಲ್ಲಿ ಶಿಕ್ಷಣದ ಪ್ರಾಮುಖ್ಯತೆಯ ಬಗ್ಗೆ ಅರಿವನ್ನು ಹುಟ್ಟು ಹಾಕಿದ ನಂತರ ವೀರೇಂದ್ರ ಮಿಶ್ರಾ ಅವರಿಗೆ ಪರ್ಯಾಯ ಉದ್ಯೋಗ ಸೃಷ್ಟಿಸಲು ಯೋಜನೆಗಳನ್ನೂ ರೂಪಿಸುತ್ತಿದ್ದಾರೆಬೇಡಿಯಾ ಕುಟುಂಬಗಳಿಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿಗಳನ್ನು ನೀಡಿ ಅವುಗಳ ಪ್ರಯೋಜನಗಳನ್ನು ಪಡೆಯಲು ನೆರವಾಗುತ್ತಿದ್ದಾರೆ. ‘ಅವಕಾಶಗಳನ್ನು ಕಲ್ಪಿಸಿಕೊಟ್ಟಾಗ ಇಂತಹ ಜನವರ್ಗಗಳಲ್ಲಿ ಆಶಾವಾದ ಮೂಡುತ್ತದೆಈ ಆಶಾವಾದವೇ ವ್ಯಕ್ತಿ ತನ್ನ ಮಿತಿಯನ್ನು ಮೀರಿ ಬೆಳೆಯಲು ಬೆಂಬಲಿಸುತ್ತದೆ’ ಎಂದು ಹೇಳುವ ವೀರೇಂದ್ರ ಮಿಶ್ರಾಬೇಡಿಯಾ ಜನಾಂಗದ ಹೊಸತಲೆಮಾರುಗಳ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿ ಕೊಡುತ್ತಿದ್ದಾರೆಶಿಕ್ಷಣ ಮಾತ್ರವಲ್ಲದೆಕ್ರೌಡ್ ಫಂಡಿಂಗ್ ಮೂಲಕ ಮತ್ತು ಕ್ರೈ ಎಂಬ ಸಮಾಜ ಸೇವಾ ಸಂಸ್ಥೆಯ ಸಹಕಾರದಿಂದ ಆರ್ಥಿಕವಾಗಿಯೂ ಅವರಿಗೆ ನೆರವಾಗುತ್ತಿದ್ದಾರೆ ಮತ್ತುಬೇಡಿಯಾ ಜನಾಂಗದ ಮಹಿಳೆಯರ ಆರೋಗ್ಯ ತಪಾಸಣೆಗಾಗಿ ಆಗಾಗ್ಗೆ ವೈದ್ಯಕೀಯ ಶಿಬಿರಗಳನ್ನೂ ನಡೆಸುತ್ತಾರೆ.  

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

6 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

6 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

9 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago