ಎಡಿಟೋರಿಯಲ್

ಪುಟ್ಟ ಕಂದಮ್ಮಗಳ ಒಡನಾಟದ ಚಂದ

ಬದಲಾದ ಜೀವನ ಶೈಲಿಯಿಂದಾಗಿ ಹೆಚ್ಚುತ್ತಿರುವ ವಿಭಕ್ತ ಕುಟುಂಬಗಳವರು ಗಡಿಯಾರದ ಮುಳ್ಳಿನಂತೆ ಪ್ರತಿಯೊಂದಕ್ಕೂ ಓಡು… ಓಡು…ಓಡು… ಎನ್ನುವ ಒತ್ತಡದಲ್ಲಿ ಸಮಯದ ಗೊಂಬೆಯಂತೆ ವರ್ತಿಸುತ್ತಿದ್ದಾರೆ. ಇಂದಿನ ನಗರ ಜೀವನದಲ್ಲಿ ಬದುಕಿನ ಬಂಡಿ ಎಳೆಯಲು ಗಂಡ-ಹೆಂಡತಿ ಇಬ್ಬರೂ ಹೊರಗೆ ದುಡಿಯಲು ಹೋಗುವುದು ಅನಿವಾರ್ಯ ಎಂಬಂತಾ ಗಿರುವುದರಿಂದ ತಿಂಡಿ-ಊಟ-ನಿದ್ರೆ ಹೀಗೆ ನಿತ್ಯ ಜೀವನದ ಪ್ರತಿಯೊಂದನ್ನೂ ಗಡಿಯಾರದ ಮುಳ್ಳು ನೋಡಿಯೇ ನಿರ್ಧರಿಸುವ ಧಾವಂತದಲ್ಲಿ ಸಿಲುಕಿದ್ದು, ಬೆಳಿಗ್ಗೆ ೬ಕ್ಕೆ ಎದ್ದರೆ ಬೆಡ್ ಕಾಫಿ, ನಿತ್ಯಕರ್ಮ ಮುಗಿಸಿ ಸ್ನಾನ, ತಿಂಡಿ ತಿಂದು ಆಫೀಸ್‌ಗೋ ಮತ್ತೆಲ್ಲಿಗೋ ಕೆಲಸದ ಸ್ಥಳಕ್ಕೆ ಓಡಿದರೆ, ಗೃಹಿಣಿಯೂ ತನ್ನ ದಿನಚರಿಯನ್ನು ಮುಗಿಸಿಕೊಂಡು ಗಂಡ-ಮಕ್ಕಳನ್ನು ಸಂಭಾಳಿಸಿ ಶಾಲೆ, ಆಫೀಸ್‌ಗೆ ಕಳುಹಿಸಿ ತಾನೂ ದುಡಿಯಲು ಹೊರಟರೆ, ಸಂಜೆ ಮನೆಗೆ ಬರುವ ವೇಳೆಗೆ ಆಯಾಸದಲ್ಲಿ ಅಡುಗೆ ಮಾಡಲೂ ಮನಸ್ಸಾಗದೆ ಹೊರಗಿನ ಊಟ ತರಿಸಿಕೊಂಡು ತಿಂದು ಮಲಗುವ ಮುಂಚೆ ನಾಳಿನ ದಿನಚರಿಗೆ ಸಮಯ ಹೊಂದಿಸಿಕೊಳ್ಳುವ ಲೆಕ್ಕಾಚಾರದಲ್ಲೇ ಈಗಿನವರ ಬದುಕು ಕಳೆದುಹೋಗುತ್ತಿದೆ. ಹೀಗಾಗಿಯೇ ಇಂದಿನ ಪೀಳಿಗೆಯವರಿಗೆ ದಿನದ ೨೪ ಗಂಟೆಯೂ ಸಾಕಾಗುತ್ತಿಲ್ಲ. ಹೀಗಾಗಿ ಮನೆಯಲ್ಲಿನ ಸಣ್ಣ ಮಕ್ಕಳಿಗೆ ಅಪ್ಪ-ಅಮ್ಮ ಇದ್ದರೂ ಇಲ್ಲದಂತಹ ಅನಾಥ ಪ್ರಜ್ಞೆ ಕಾಡಲು ಶುರುವಾಗುತ್ತಿದೆ. ಮಕ್ಕಳಿಗೊ ಶಾಲೆಯಲ್ಲಿನ ಸಣ್ಣಪುಟ್ಟ ಸಂಗತಿಗಳನ್ನು ಹಂಚಿಕೊಳ್ಳಲು ಅಪ್ಪ- ಅಮ್ಮ ಸಮಯ ಕೊಡುತ್ತಿಲ್ಲ. ದೊಡ್ಡ ದೊಡ್ಡ ನಗರ ಗಳಲ್ಲಂತೂ ಮಕ್ಕಳನ್ನು ನೋಡಿಕೊಳ್ಳಲೆಂದೇ ನೇಮಿಸಿ ಕೊಳ್ಳುವ ಕೆಲಸಗಾರರೇ ಮಕ್ಕಳ ಆಪ್ತರಾಗಿ ಬಿಡುತ್ತಾರೆ. ಮಕ್ಕಳು ಕೂಡ ಶಾಲೆ, ಟ್ಯೂಷನ್, ಮೊಬೈಲ್ ಗೇಮಿಂಗ್‌ನಲ್ಲಿಯೇ ಸಮಯ ಕಳೆದುಬಿಡುತ್ತಾರೆ. ಆದರೆ, ಕೇವಲ ಹತ್ತು-ಇಪ್ಪತ್ತು ವರ್ಷಗಳ ಹಿಂದೆ ಪರಿಸ್ಥಿತಿ ಈ ರೀತಿ ಇರಲಿಲ್ಲ. ಪುಟ್ಟ ಸಂಸಾರವಾದರೂ ಮನೆಯಲ್ಲಿ ಇರುತ್ತಿದ್ದ ಅಜ್ಜ-ಅಜ್ಜಿ ಮೊಮ್ಮಕ್ಕಳ ಮುತುವರ್ಜಿ ಮಾಡುತ್ತಿದ್ದರು.

ನಗರ ಜೀವನ ಹೆಚ್ಚಿದಂತೆಲ್ಲ ಯುವ ಜನರು ನಗರಗಳಿಗೆ ವಲಸೆ ಬರುತ್ತಾ, ಹಳ್ಳಿಗಳು ವೃದ್ಧಾಶ್ರಮವನ್ನಾಗಿಸುತ್ತಿದ್ದಾರೆ. ಮಕ್ಕಳು ಹಿರಿಯರೊಂದಿಗೆ ಬೆರೆತಷ್ಟು ಅದರಿಂದಾಗುವ ಪ್ರಯೋಜನಗಳು ಹೆಚ್ಚು. ಹೀಗಾಗಿ ಹೆತ್ತವರು ತಮ್ಮ ಮುದ್ದಿನ ಮಕ್ಕಳನ್ನು ಅಜ್ಜ-ಅಜ್ಜಿಯೊಂದಿಗೆ ಬೆರೆಯುವಂತೆ ನೋಡಿಕೊಳ್ಳಬೇಕು.

ಮಕ್ಕಳು ಎಳವೆಯಲ್ಲೇ ಹಿರಿಯರೊಂದಿಗೆ ಬೆರೆಯುವುದರಿಂದ ಉತ್ತಮ ಸಂಸ್ಕಾರವನ್ನು ಕಲಿಯುತ್ತಾರೆ. ಹಿರಿಯರ ಬಗ್ಗೆ ಗೌರವ ಭಾವನೆ ಮಕ್ಕಳಲ್ಲಿ ಬೆಳೆಯುತ್ತದೆ. ಮಕ್ಕಳು ಅಜ್ಜ-ಅಜ್ಜಿಯೊಂದಿಗೆ ಸಮಯ ಕಳೆಯುವುದರಿಂದ ಕೌಟುಂಬಿಕ ಸಂಬಂಧ ಬಲಗೊಳ್ಳುವುದಷ್ಟೇ ಅಲ್ಲದೇ ಹಿರಿಯರೊಂದಿಗೆ ಹೇಗೆ ಮಾತನಾಡಬೇಕು? ಹಿರಿಯರನ್ನು ಕಂಡಾಗ ಹೇಗೆ ನಡೆದುಕೊಳ್ಳಬೇಕು? ಹಿರಿಯರಿಗೆ ಯಾವ ರೀತಿ ಗೌರವ ಕೊಡಬೇಕು? ಹಿರಿಯರನ್ನು ಏಕೆ ಗೌರವಿಸಬೇಕು ಎಂಬ ಜೀವನ ಪಾಠವನ್ನು ಕಲಿಯುತ್ತಾರೆ. ಅಜ್ಜ-ಅಜ್ಜಿ ಜೊತೆಗಿನ ತುಂಟಾಟಗಳು, ಮಾಡು ಮಗಾ ನಿನ್ನಿಂದಾಗುತ್ತೆ ಎನ್ನುವ ಸಕಾರಾತ್ಮಕ ಮಾತುಗಳು ಮಕ್ಕಳಲ್ಲಿ ಆತ್ಮ ವಿಶ್ವಾಸವನ್ನು ಹೆಚ್ಚಿಸುವುದಲ್ಲದೇ, ಮಕ್ಕಳ ಮನೋಸ್ಥೈರ್ಯವನ್ನೂ ಹೆಚ್ಚಿಸುತ್ತದೆ. ಇದರಿಂದ ಆ ಮಕ್ಕಳು ಓದಿನಲ್ಲಷ್ಟೇ ಅಲ್ಲ, ಆಟೋಟಗಳಲ್ಲಿ ಸಾಮಾಜಿಕ ವಲಯದಲ್ಲಿ ಉತ್ತಮ ರೆನಿಸಿಕೊಳ್ಳುತ್ತಾರೆ. ಅಜ್ಜ-ಅಜ್ಜಿಯ ಪ್ರೋತ್ಸಾಹದ ನುಡಿಗಳು ಮುಂದೆ ಜೀವನವನ್ನು ಧೈರ್ಯದಿಂದ ಎದುರಿಸಿ ಗಟ್ಟಿಯಾಗಿ ನಿಲ್ಲುವುದನ್ನು ಕಲಿಸುತ್ತವೆ. ಮಕ್ಕಳಲ್ಲಿ ಮೌಲ್ಯಗಳು ಬೆಳೆದಾಗ ಏಕ ವಚನ ಪ್ರಯೋಗಕ್ಕೆ ಬದಲಾಗಿ ಎಲ್ಲರೊಂದಿಗೆ ಬಹುವಚನದ ಮಾತುಕತೆ ಪ್ರಾರಂಭವಾಗುತ್ತದೆ.

ಪ್ರತಿಯೊಂದು ಹಂತದಲ್ಲೂ ಅಜ್ಜ-ಅಜ್ಜಿಯ ಬೆಂಬಲ ದೊರೆಯುವುದರಿಂದ ಅಜ್ಜ-ಅಜ್ಜಿಯೊಂದಿಗೆ ದಿನ ಕಳೆಯುವ ಮಕ್ಕಳು ಭಾವನಾತ್ಮಕವಾಗಿಯೂ ಬಲಶಾಲಿಗಳಾಗಿರುತ್ತಾರೆ. ಇಂತಹ ಮಕ್ಕಳಲ್ಲಿ ಅಪ್ಪಿತಪ್ಪಿಯೂ ನಕಾರಾತ್ಮಕ ಭಾವನೆಗಳು ಸುಳಿಯದೆ ಸದಾ ಕಾಲ ಉತ್ಸಾಹದಿಂದ ಇರುತ್ತಾರೆ. ಸಮಸ್ಯೆಗಳನ್ನು ಎದುರಿಸುವುದನ್ನು ಕಲಿಯುತ್ತಾರೆ. ಅಜ್ಜ-ಅಜ್ಜಿ ಹೇಳುವ ನೀತಿ ಕತೆಗಳು, ಪೌರಾಣಿಕ ಕತೆಗಳಿಂದ ಮತ್ತು ಅವರು ಕಲಿಸುವ ಜೀವನ ಪಾಠಗಳಿಂದ ಮಕ್ಕಳಲ್ಲಿ ಮೌಲ್ಯಗಳು ಬೆಳೆಯುತ್ತವೆ. ಜೀವನ ಮೌಲ್ಯಗಳನ್ನು ಕಲಿಸಿಕೊಡುವಲ್ಲಿ ಅಜ್ಜ-ಅಜ್ಜಿಯ ಪಾತ್ರ ಮಹತ್ತರವಾದದ್ದು.

ಒತ್ತಡ ನಿವಾರಣೆ:  ಇಂದಿನ ಒತ್ತಡದ ಬದುಕಿನಲ್ಲಿ ಗಂಡ-ಹೆಂಡತಿ ಇಬ್ಬರೂ ದುಡಿಯಲು ಹೊರಗೆ ಹೋಗುವುದರಿಂದ ಮಕ್ಕಳಿಗೆ ಕಾಡುವ ಒಂಟಿತನ ಮನೆಯಲ್ಲಿ ಅಜ್ಜ-ಅಜ್ಜಿ ಇದ್ದಾಗ ಕಾಡುವುದಿಲ್ಲ. ಇದರಿಂದ ಮಕ್ಕಳು ಅನುಭವಿಸುವ ಒತ್ತಡ ಕೂಡ ಕಡಿಮೆಯಾಗುತ್ತದೆ. ಮಕ್ಕಳು ಅಜ್ಜಿ-ಅಜ್ಜನ ಜೊತೆಗೆ ಕಾಲ ಕಳೆಯುವುದರಿಂದ ಒತ್ತಡ ನಿವಾರಣೆ ಸಾಧ್ಯ, ಮಕ್ಕಳಿಗೆ ಕುಟುಂಬ ಜೀವನ ಅರ್ಥವಾಗಲಿದೆ. ಅವರ ಮೂಲಕ ಹಿರಿಯರು ಆಚರಿಸಿಕೊಂಡು ಬಂದ ಪದ್ಧತಿ, ಆಚರಣೆಗಳನ್ನು ತಿಳಿದುಕೊಳ್ಳುತ್ತಾರೆ. ಬಹುಮುಖ್ಯವಾಗಿ ಅಜ್ಜ-ಅಜ್ಜಿಯ ಜೊತೆಗೆ ಒಡನಾಡಿದ ಮಕ್ಕಳು ಹಾದಿ ತಪ್ಪುವುದಿಲ್ಲ. ಬದಲಿಗೆ ಬದುಕಿನ ಹಾದಿಯಲ್ಲಿ ಎಚ್ಚರ ತಪ್ಪಿದಾಗೆಲ್ಲ ಅಜ್ಜ-ಅಜ್ಜಿಯ ಕಿವಿಮಾತುಗಳು ನೆನಪಾಗಿ ಸರಿದಾರಿಗೆ ಹೊರಳಲು ಪ್ರೇರಣೆಯಾಗುತ್ತದೆ. ಅದಕ್ಕಾಗಿಯೇ ಮಕ್ಕಳು ಅಜ್ಜ-ಅಜ್ಜಿಯೊಂದಿಗೆ ಬೆಳೆಯಬೇಕು.

ಆಂದೋಲನ ಡೆಸ್ಕ್

Recent Posts

ಹನೂರು| ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ: ಮಕ್ಕಳ ರಕ್ಷಣಾ ಘಟಕದವರಿಂದ ಬಾಲಮಂದಿರಕ್ಕೆ ಸೇರ್ಪಡೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…

3 mins ago

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…

55 mins ago

ಹನೂರು: ಮಹದೇಶ್ವರ ಸ್ವಾಮಿಗೆ ನೆರವೇರಿದ ಮಹಾರುದ್ರಾಭಿಷೇಕ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…

1 hour ago

ಭೂಗತ ಕೇಬಲ್‌ ಕಾಮಗಾರಿ ; ಯೋಜನೆಯ ಪ್ರಗತಿ ಕುರಿತು ಮಾಹಿತಿ ಪಡೆದ ಸಿಎಂ

ಸೆಸ್ಕ್‌ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…

2 hours ago

ಕೇರಳಂ | ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…

3 hours ago

ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು : ಸಿಎಂ ಸಿದ್ದರಾಮಯ್ಯ

ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…

3 hours ago