ಎಡಿಟೋರಿಯಲ್

ಆಂದೋಲನ ಓದುಗರಿಗೆ ಓಗೊಟ್ಟವರು

ಶೀಘ್ರವೇ ಕಸ ವಿಲೇವಾರಿಗೆ ಕ್ರಮ

ಮೈಸೂರಿನ ಜೆ.ಪಿ.ನಗರದ ಹೊರ ವರ್ತುಲ ರಸ್ತೆಯಲ್ಲಿ ತ್ಯಾಜ್ಯ ಬೀಸಾಡುವವರಿಗೆ ದಂಡ ವಿಧಿಸಲಾಗಿದೆ. ಆದರೂ ಕೂಡ ಜನರು ನಾಗರಿಕರಂತೆ ವರ್ತಿಸುತ್ತಿಲ್ಲ ಎಂದು ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ಹೇಳಿದ್ದಾರೆ. ‘ಆಂದೋಲನ’ ದಿನ ಪತ್ರಿಕೆಯ ಓದುಗರ ಪತ್ರ ವಿಭಾಗದಲ್ಲಿ ಡಿ.22ರಂದು ‘ರಸ್ತೆ ಬದಿಯಲ್ಲಿ ಅನೈರ್ಮಲ್ಯ’ ಶೀರ್ಷಿಕೆಯಡಿ ಪ್ರಕಟವಾಗಿರುವ ಪತ್ರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಹೊರ ವರ್ತುಲ ರಸ್ತೆಯಲ್ಲಿ ಕಸ ಹಾಕುತ್ತಿರುವವರ ವಿರುದ್ಧ ಹಲವು ಬಾರಿ ದಂಡ ವಿಧಿಸಿ ಕ್ರಮಕೈಗೊಂಡು ಕಸ ವಿಲೇವಾರಿ ಮಾಡಿ ಸಲಾಗಿದೆ. ಜೊತೆಗೆ ಕಸ ಹಾಕದಂತೆ ಸಾರ್ವಜನಿಕರಿಗೆ ಮನವಿ ಮಾಡಿ ನೈರ್ಮಲ್ಯದ ಅರಿವು ಮೂಡಿಸಲಾಗಿದೆ. ಇಷ್ಟಾದರೂ ಕೆಲವರು ಮುಂಜಾನೆ ಮತ್ತು ರಾತ್ರಿ ಸಮಯದಲ್ಲಿ ಕಸ ತಂದು ಸುರಿಯುತ್ತಿದ್ದಾರೆ. ಜನರು ನಾಗರಿಕರಂತೆ ವರ್ತಿಸಿದರೆ ಈ ಸಮಸ್ಯೆ ಉದ್ಭವಿಸದು. ಶೀಘ್ರವೇ ರಾಶಿಬಿದ್ದಿರುವ ಕಸವನ್ನು ವಿಲೇವಾರಿ ಮಾಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


ಬಸ್ ತಂಗುದಾಣದಲ್ಲಿ ಆಸನ ವ್ಯವಸ್ಥೆಗೆ ಕ್ರಮ

ಮೈಸೂರಿನ ಆರ್‌ಟಿಒ ವೃತ್ತದ ಬಳಿಯಿರುವ ಬಸ್ ತಂಗುದಾಣದಲ್ಲಿ ಆಸನಗಳಿಲ್ಲದ ಬಗ್ಗೆ ನಗರಪಾಲಿಕೆ ಆಯುಕ್ತರ ಗಮನಕ್ಕೆ ತರಲಾಗಿದ್ದು, ಸಮಸ್ಯೆ ಬಗೆಹರಿಸಲಾಗುವುದು ಎಂದು ಪಾಲಿಕೆ ಸದಸ್ಯ ಲೋಕೇಶ್ (ಪಿಯಾ) ಹೇಳಿದ್ದಾರೆ. ‘ಆಂದೋಲನ’ ದಿನ ಪತ್ರಿಕೆಯಲ್ಲಿ ಡಿ.೨೨ರಂದು ಓದುಗರ ಪತ್ರಗಳು ವಿಭಾಗದಲ್ಲಿ ‘ಕುಳಿತುಕೊಳ್ಳಲು ಆಸನವೇ ಇಲ್ಲದ ಬಸ್ ನಿಲ್ದಾಣ’ ಶೀರ್ಷಿಕೆಯಡಿ ಪ್ರಕಟವಾಗಿರುವ ಪತ್ರಕ್ಕೆ ಪ್ರತಿಕ್ರಿಯಿಸಿರುವ ಅವರು, ಬಸ್ ತಂಗುದಾಣದಲ್ಲಿ ಹಲವು ತಿಂಗಳಿಂದ ಆಸನ ವ್ಯವಸ್ಥೆಯಿಲ್ಲದೆ ಇರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ನಗರಪಾಲಿಕೆ ಆಯುಕ್ತರ ಗಮನಕ್ಕೆ ತರಲಾಗಿದ್ದು, ಶೀಘ್ರವೇ ಆಸನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

andolanait

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

3 hours ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

5 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

5 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

6 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

6 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

7 hours ago