ಎಡಿಟೋರಿಯಲ್

ಆಂದೋಲನ ಓದುಗರಿಗೆ ಓಗೊಟ್ಟವರು

ಶೀಘ್ರವೇ ಕಸ ವಿಲೇವಾರಿಗೆ ಕ್ರಮ

ಮೈಸೂರಿನ ಜೆ.ಪಿ.ನಗರದ ಹೊರ ವರ್ತುಲ ರಸ್ತೆಯಲ್ಲಿ ತ್ಯಾಜ್ಯ ಬೀಸಾಡುವವರಿಗೆ ದಂಡ ವಿಧಿಸಲಾಗಿದೆ. ಆದರೂ ಕೂಡ ಜನರು ನಾಗರಿಕರಂತೆ ವರ್ತಿಸುತ್ತಿಲ್ಲ ಎಂದು ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ಹೇಳಿದ್ದಾರೆ. ‘ಆಂದೋಲನ’ ದಿನ ಪತ್ರಿಕೆಯ ಓದುಗರ ಪತ್ರ ವಿಭಾಗದಲ್ಲಿ ಡಿ.22ರಂದು ‘ರಸ್ತೆ ಬದಿಯಲ್ಲಿ ಅನೈರ್ಮಲ್ಯ’ ಶೀರ್ಷಿಕೆಯಡಿ ಪ್ರಕಟವಾಗಿರುವ ಪತ್ರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಹೊರ ವರ್ತುಲ ರಸ್ತೆಯಲ್ಲಿ ಕಸ ಹಾಕುತ್ತಿರುವವರ ವಿರುದ್ಧ ಹಲವು ಬಾರಿ ದಂಡ ವಿಧಿಸಿ ಕ್ರಮಕೈಗೊಂಡು ಕಸ ವಿಲೇವಾರಿ ಮಾಡಿ ಸಲಾಗಿದೆ. ಜೊತೆಗೆ ಕಸ ಹಾಕದಂತೆ ಸಾರ್ವಜನಿಕರಿಗೆ ಮನವಿ ಮಾಡಿ ನೈರ್ಮಲ್ಯದ ಅರಿವು ಮೂಡಿಸಲಾಗಿದೆ. ಇಷ್ಟಾದರೂ ಕೆಲವರು ಮುಂಜಾನೆ ಮತ್ತು ರಾತ್ರಿ ಸಮಯದಲ್ಲಿ ಕಸ ತಂದು ಸುರಿಯುತ್ತಿದ್ದಾರೆ. ಜನರು ನಾಗರಿಕರಂತೆ ವರ್ತಿಸಿದರೆ ಈ ಸಮಸ್ಯೆ ಉದ್ಭವಿಸದು. ಶೀಘ್ರವೇ ರಾಶಿಬಿದ್ದಿರುವ ಕಸವನ್ನು ವಿಲೇವಾರಿ ಮಾಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


ಬಸ್ ತಂಗುದಾಣದಲ್ಲಿ ಆಸನ ವ್ಯವಸ್ಥೆಗೆ ಕ್ರಮ

ಮೈಸೂರಿನ ಆರ್‌ಟಿಒ ವೃತ್ತದ ಬಳಿಯಿರುವ ಬಸ್ ತಂಗುದಾಣದಲ್ಲಿ ಆಸನಗಳಿಲ್ಲದ ಬಗ್ಗೆ ನಗರಪಾಲಿಕೆ ಆಯುಕ್ತರ ಗಮನಕ್ಕೆ ತರಲಾಗಿದ್ದು, ಸಮಸ್ಯೆ ಬಗೆಹರಿಸಲಾಗುವುದು ಎಂದು ಪಾಲಿಕೆ ಸದಸ್ಯ ಲೋಕೇಶ್ (ಪಿಯಾ) ಹೇಳಿದ್ದಾರೆ. ‘ಆಂದೋಲನ’ ದಿನ ಪತ್ರಿಕೆಯಲ್ಲಿ ಡಿ.೨೨ರಂದು ಓದುಗರ ಪತ್ರಗಳು ವಿಭಾಗದಲ್ಲಿ ‘ಕುಳಿತುಕೊಳ್ಳಲು ಆಸನವೇ ಇಲ್ಲದ ಬಸ್ ನಿಲ್ದಾಣ’ ಶೀರ್ಷಿಕೆಯಡಿ ಪ್ರಕಟವಾಗಿರುವ ಪತ್ರಕ್ಕೆ ಪ್ರತಿಕ್ರಿಯಿಸಿರುವ ಅವರು, ಬಸ್ ತಂಗುದಾಣದಲ್ಲಿ ಹಲವು ತಿಂಗಳಿಂದ ಆಸನ ವ್ಯವಸ್ಥೆಯಿಲ್ಲದೆ ಇರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ನಗರಪಾಲಿಕೆ ಆಯುಕ್ತರ ಗಮನಕ್ಕೆ ತರಲಾಗಿದ್ದು, ಶೀಘ್ರವೇ ಆಸನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

andolanait

Recent Posts

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

5 hours ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

5 hours ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

12 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

12 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

12 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

12 hours ago