ಎಡಿಟೋರಿಯಲ್

ಆಂದೋಲನ ಓದುಗರಿಗೆ ಓಗೊಟ್ಟವರು

ಶೀಘ್ರವೇ ಕಸ ವಿಲೇವಾರಿಗೆ ಕ್ರಮ

ಮೈಸೂರಿನ ಜೆ.ಪಿ.ನಗರದ ಹೊರ ವರ್ತುಲ ರಸ್ತೆಯಲ್ಲಿ ತ್ಯಾಜ್ಯ ಬೀಸಾಡುವವರಿಗೆ ದಂಡ ವಿಧಿಸಲಾಗಿದೆ. ಆದರೂ ಕೂಡ ಜನರು ನಾಗರಿಕರಂತೆ ವರ್ತಿಸುತ್ತಿಲ್ಲ ಎಂದು ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ಹೇಳಿದ್ದಾರೆ. ‘ಆಂದೋಲನ’ ದಿನ ಪತ್ರಿಕೆಯ ಓದುಗರ ಪತ್ರ ವಿಭಾಗದಲ್ಲಿ ಡಿ.22ರಂದು ‘ರಸ್ತೆ ಬದಿಯಲ್ಲಿ ಅನೈರ್ಮಲ್ಯ’ ಶೀರ್ಷಿಕೆಯಡಿ ಪ್ರಕಟವಾಗಿರುವ ಪತ್ರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಹೊರ ವರ್ತುಲ ರಸ್ತೆಯಲ್ಲಿ ಕಸ ಹಾಕುತ್ತಿರುವವರ ವಿರುದ್ಧ ಹಲವು ಬಾರಿ ದಂಡ ವಿಧಿಸಿ ಕ್ರಮಕೈಗೊಂಡು ಕಸ ವಿಲೇವಾರಿ ಮಾಡಿ ಸಲಾಗಿದೆ. ಜೊತೆಗೆ ಕಸ ಹಾಕದಂತೆ ಸಾರ್ವಜನಿಕರಿಗೆ ಮನವಿ ಮಾಡಿ ನೈರ್ಮಲ್ಯದ ಅರಿವು ಮೂಡಿಸಲಾಗಿದೆ. ಇಷ್ಟಾದರೂ ಕೆಲವರು ಮುಂಜಾನೆ ಮತ್ತು ರಾತ್ರಿ ಸಮಯದಲ್ಲಿ ಕಸ ತಂದು ಸುರಿಯುತ್ತಿದ್ದಾರೆ. ಜನರು ನಾಗರಿಕರಂತೆ ವರ್ತಿಸಿದರೆ ಈ ಸಮಸ್ಯೆ ಉದ್ಭವಿಸದು. ಶೀಘ್ರವೇ ರಾಶಿಬಿದ್ದಿರುವ ಕಸವನ್ನು ವಿಲೇವಾರಿ ಮಾಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


ಬಸ್ ತಂಗುದಾಣದಲ್ಲಿ ಆಸನ ವ್ಯವಸ್ಥೆಗೆ ಕ್ರಮ

ಮೈಸೂರಿನ ಆರ್‌ಟಿಒ ವೃತ್ತದ ಬಳಿಯಿರುವ ಬಸ್ ತಂಗುದಾಣದಲ್ಲಿ ಆಸನಗಳಿಲ್ಲದ ಬಗ್ಗೆ ನಗರಪಾಲಿಕೆ ಆಯುಕ್ತರ ಗಮನಕ್ಕೆ ತರಲಾಗಿದ್ದು, ಸಮಸ್ಯೆ ಬಗೆಹರಿಸಲಾಗುವುದು ಎಂದು ಪಾಲಿಕೆ ಸದಸ್ಯ ಲೋಕೇಶ್ (ಪಿಯಾ) ಹೇಳಿದ್ದಾರೆ. ‘ಆಂದೋಲನ’ ದಿನ ಪತ್ರಿಕೆಯಲ್ಲಿ ಡಿ.೨೨ರಂದು ಓದುಗರ ಪತ್ರಗಳು ವಿಭಾಗದಲ್ಲಿ ‘ಕುಳಿತುಕೊಳ್ಳಲು ಆಸನವೇ ಇಲ್ಲದ ಬಸ್ ನಿಲ್ದಾಣ’ ಶೀರ್ಷಿಕೆಯಡಿ ಪ್ರಕಟವಾಗಿರುವ ಪತ್ರಕ್ಕೆ ಪ್ರತಿಕ್ರಿಯಿಸಿರುವ ಅವರು, ಬಸ್ ತಂಗುದಾಣದಲ್ಲಿ ಹಲವು ತಿಂಗಳಿಂದ ಆಸನ ವ್ಯವಸ್ಥೆಯಿಲ್ಲದೆ ಇರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ನಗರಪಾಲಿಕೆ ಆಯುಕ್ತರ ಗಮನಕ್ಕೆ ತರಲಾಗಿದ್ದು, ಶೀಘ್ರವೇ ಆಸನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

5 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

5 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

5 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

6 hours ago