ಎಡಿಟೋರಿಯಲ್

ಟಿಕೆಟ್ ಹಂಚಿಕೆಯ ಕಸರತ್ತಿನ ನಡುವೆ ಚುನಾವಣೆಯ ಲೆಕ್ಕಾಚಾರ

 

  ರಾಜ್ಯ ರಾಜಕೀಯ ದಿನದಿಂದ ದಿನಕ್ಕೆ ರಂಗೇರತೊಡಗಿದೆವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂರೂ ರಾಜಕೀಯ ಪಕ್ಷಗಳು ತಮ್ಮದೇ ಲೆಕ್ಕಾಚಾರದಲ್ಲಿವೆಆದರೆಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುತ್ತಿರುವ ರೀತಿ ಇಂತಹ ಲೆಕ್ಕಾಚಾರಗಳನ್ನು ಬದಲಿಸುವುದು ನಿಶ್ಚಿತ.

ಕರ್ನಾಟಕದ ರಾಜಕಾರಣ ದಿನ ದಿನಕ್ಕೂ ರಂಗೇರುತ್ತಿರುವಂತೆ ಕಾಣುತ್ತಿದ್ದರೆಅದಕ್ಕೆ ಇದೇ ಮುಖ್ಯ ಕಾರಣಅಂದ ಹಾಗೆ ಟಿಕೆಟ್ ಹಂಚಿಕೆಯ ವಿಷಯದಲ್ಲಿ ಕಸರತ್ತು ನಡೆಸುತ್ತಿರುವ ಮೂರೂ ರಾಜಕೀಯ ಪಕ್ಷಗಳು ದೊಡ್ಡ ಮಟ್ಟದಲ್ಲೇ ಪರದಾಡಿವೆಅಷ್ಟೇ ಅಲ್ಲಟಿಕೆಟ್ ಹಂಚಿಕೆಯ ನಂತರ ತಮ್ಮ ಪಕ್ಷದ ಅಂತರಂಗದಲ್ಲಿ ಮೂಡುವ ಬಿಕ್ಕಟ್ಟು ದೊಡ್ಡ ಮಟ್ಟದ ಧ್ರುವೀಕರಣಕ್ಕೆ ದಾರಿ ಮಾಡಿಕೊಡಲಿದೆ ಎಂಬುದು ಈ ಪಕ್ಷಗಳಿಗೆ ಗೊತ್ತಿದೆ.

ಅಂದ ಹಾಗೆ ಟಿಕೆಟ್ ಪಡೆಯಲು ವಿಫಲರಾದವರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಬಹುದುಮೊದಲನೆಯದಾಗಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಏಳಬಹುದುಒಂದು ವೇಳೆ ಬಂಡಾಯ ಏಳದಿದ್ದರೆ ಪಕ್ಷ ತೊರೆದು ಬೇರೆ ಪಕ್ಷಕ್ಕೂ ಹೋಗಬಹುದುಇವೆರಡು ಮಾರ್ಗಗಳೂ ಸರಿಯಲ್ಲ ಅನಿಸಿದರೆ ಒಳಗಿಂದೊಳಗೇ ಸಿಟ್ಟು ಕಾರುತ್ತಾ ಪಕ್ಷದ ಅಭ್ಯರ್ಥಿಯ ಸೋಲಿಗೆ ಕಾರಣವಾಗಬಹುದು.

ಅರ್ಥಾತ್ಇವೇ ಅಂಶಗಳು ರಾಜಕೀಯ ಧ್ರುವೀಕರಣಕ್ಕೆ ಮೂಲವಾಗಲಿವೆ ಮತ್ತು ಇಂತಹ ಧ್ರುವೀಕರಣ ಘಟಿಸಿದ ನಂತರವೇ ಎಲ್ಲ ರಾಜಕೀಯ ಪಕ್ಷಗಳ ನೈಜ ಬಲಾಬಲ ಏನು ಅನ್ನುವುದರ ಚಿತ್ರಣ ಸಿಗುತ್ತದೆ.

ಅಂದ ಹಾಗೆ ಇವತ್ತಿನ ಸ್ಥಿತಿಯಲ್ಲಿ ಎಲ್ಲ ರಾಜಕೀಯ ಪಕ್ಷಗಳೂ ತಮ್ಮದೇ ಕಲ್ಪನಾ ವಿಹಾರದಲ್ಲಿ ಮುಳುಗಿವೆಈ ಪೈಕಿ ರಾಜ್ಯ ಕಾಂಗ್ರೆಸ್ ಪಾಳೆಯವನ್ನು ಪ್ರವೇಶಿಸಿದರೆ ಅಪಾರ ಆತ್ಮವಿಶ್ವಾಸ ಕಾಣುತ್ತದೆಕಾಂಗ್ರೆಸ್ ನಾಯಕರ ಪ್ರಕಾರಈ ಬಾರಿಯ ಚುನಾವಣೆಯಲ್ಲಿ

ಪಕ್ಷ ನೂರಾ ಇಪ್ಪತ್ತರಿಂದ ನೂರಿಪ್ಪತ್ತೈದು ಕ್ಷೇತ್ರಗಳಲ್ಲಿ ಗೆಲುವು ಗಳಿಸಲಿದೆ.

ಅಂದರೆ ಸ್ವಯಂಬಲದ ಮೇಲೆ ಅಧಿಕಾರ ಹಿಡಿಯುವ ಶಕ್ತಿ ತಮ್ಮ ಪಕ್ಷಕ್ಕಿದೆ ಎಂಬುದು ಕಾಂಗ್ರೆಸ್ ನಾಯಕರ ನಂಬಿಕೆಅವರ ಈ ನಂಬಿಕೆಗೆ ಸನ್ನಿವೇಶದ ಸಾಕ್ಷ್ಯಾಧಾರಗಳೇ ಕಾರಣಉದಾಹರಣೆಗೆ ಹೇಳಬೇಕೆಂದರೆ ಆಡಳಿತ ವಿರೋಧಿ ಅಲೆ ಎದ್ದು ಕಾಣುತ್ತಿರುವುದು.

ಬೊಮ್ಮಾಯಿ ಸರ್ಕಾರ ನಲವತ್ತು ಪರ್ಸೆಂಟ್ ಕಮಿಷನ್ ಸರ್ಕಾರ ಎಂಬ ತನ್ನದೇ ಆರೋಪ ಏನಿದೆ ಇದು ಜನರ ಮನಸ್ಸನ್ನು ನಾಟಿದೆ ಎಂಬುದು ಕಾಂಗ್ರೆಸ್ಸಿನ ನಂಬಿಕೆಇವತ್ತು ಸರ್ಕಾರದ ಯಾವುದೇ ಕಚೇರಿಗಳಿಗೆ ಹೋಗಿ ನೋಡಿದರೂ ಅಲ್ಲಿ ಭ್ರಷ್ಟಾಚಾರದ ಉಪಸ್ಥಿತಿ ಇರುತ್ತದೆಹೀಗೆ ಪ್ರತಿಯೊಂದು ಕೆಲಸಕ್ಕೂ ಜನ ಲಂಚರುಷುವತ್ತು ನೀಡುವುದು ಅನಿವಾರ್ಯವಾದರೆ ಅದರರ್ಥ ಏನುಆಡಳಿತ ಯಂತ್ರದ ಮೇಲೆ ಸರ್ಕಾರಕ್ಕೆ ಹಿಡಿತ ಇಲ್ಲ ಅಂತಲ್ಲವೇ

ಅಂದ ಮೇಲೆ ಜನರಾದರೂ ಏಕೆ ಬಿಜೆಪಿಯನ್ನು ಮರಳಿ ಅಧಿಕಾರಕ್ಕೆ ತರುತ್ತಾರೆಹೀಗಾಗಿಯೇ ಬಿಜೆಪಿಗೆ ಪರ್ಯಾಯವಾಗಿ ತಾವು ಅಧಿಕಾರಕ್ಕೆ ಬರುವುದು ನಿಶ್ಚಿತ ಎಂಬುದು ಕಾಂಗ್ರೆಸ್ ನಾಯಕರ ವಿಶ್ವಾಸಈ ಮಧ್ಯೆ ಆಡಳಿತಾರೂಢ ಬಿಜೆಪಿಗೆ ಸ್ವಯಂಬಲದ ಮೇಲೆ ಅಧಿಕಾರ ಹಿಡಿಯುವ ಆತ್ಮವಿಶ್ವಾಸವಿಲ್ಲ.

ಕಮಲ ಪಾಳೆಯದ ಮೂಲಗಳ ಪ್ರಕಾರತಕ್ಷಣ ಚುನಾವಣೆ ನಡೆದರೆ ಬಿಜೆಪಿಗೆ ಎಂಬತ್ತರಿಂದ ಎಂಬತ್ತೈದು ಕ್ಷೇತ್ರಗಳಲ್ಲಿ ಗೆಲುವು ಸಿಗಬಹುದು.

ಇತ್ತೀಚೆಗೆ ಕರ್ನಾಟಕಕ್ಕೆ ಬಂದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಈ ಬಾರಿಯ ಚುನಾವಣೆಯಲ್ಲಿ ನಾವು ಕನಿಷ್ಠ ತೊಂಬತ್ತು ಸ್ಥಾನ ಗಳಿಸಬೇಕು ಎಂದು ಹೇಳಿದ್ದಾರಂತೆಅರ್ಥಾತ್ತಮಗೆ ಸ್ವಯಂಬಲದ ಮೇಲೆ ಅಽಕಾರ ದಕ್ಕದಿದ್ದರೂ ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ರಚನೆಯಾಗುವುದು ಗ್ಯಾರಂಟಿ ಎಂಬುದು ಬಿಜೆಪಿ ಲೆಕ್ಕಾಚಾರಹಾಗಾದಾಗ ಜಾತ್ಯತೀತ ಜನತಾದಳ ಜತೆಗೂಡಿ ಮೈತ್ರಿ ಸರ್ಕಾರ ರಚಿಸುವಂತಾಗಬೇಕು ಎಂಬುದು ಅದರ ಯೋಚನೆ.

ಈ ಮಧ್ಯೆ ದೇವೇಗೌಡಕುಮಾರಸ್ವಾಮಿ ನೇತೃತ್ವದ ಜಾ.ದಳ ಕೂಡ ತನ್ನದೇ ಲೆಕ್ಕಾಚಾರಗಳಲ್ಲಿ ಮುಳುಗಿದೆಯಲ್ಲದೆಕನಿಷ್ಠ ಐವತ್ತು ಕ್ಷೇತ್ರಗಳಲ್ಲಿ ತಾನು ಗೆಲುವು ಸಾಧಿಸುವುದು ಖಚಿತ ಎಂಬ ಲೆಕ್ಕಾಚಾರದಲ್ಲಿದೆಅಂದರೆ ಯಾರೇ ಸರ್ಕಾರ ರಚಿಸಲಿತನ್ನ ನೆರವು ಇಲ್ಲದೆ ಸರ್ಕಾರ ರಚನೆಯಾಗುವುದಿಲ್ಲ ಎಂಬುದು ಜಾ.ದಳ ಯೋಚನೆ.

 

ಹೀಗೆ ಮೂರೂ ರಾಜಕೀಯ ಪಕ್ಷಗಳು ತಮ್ಮದೇ ಲೆಕ್ಕಾಚಾರದಲ್ಲಿ ಮುಳುಗಿರುವುದೇನೋ ನಿಜಆದರೆ ಟಿಕೆಟ್ ಹಂಚಿಕೆಯ ನಂತರ ನಡೆಯುವ ರಾಜಕೀಯ ಧ್ರುವೀಕರಣ ಕರ್ನಾಟಕದ ರಾಜಕೀಯ ಚಿತ್ರವನ್ನು ಸ್ಪಷ್ಟಗೊಳಿಸುತ್ತದೆಇದಕ್ಕೆ ತುಂಬ ದಿನಗಳು ಕಾಯಬೇಕಿಲ್ಲ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

20 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

20 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

20 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

20 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

20 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

20 hours ago