ಎಡಿಟೋರಿಯಲ್

ಟಿಕೆಟ್ ಹಂಚಿಕೆಯ ಕಸರತ್ತಿನ ನಡುವೆ ಚುನಾವಣೆಯ ಲೆಕ್ಕಾಚಾರ

 

  ರಾಜ್ಯ ರಾಜಕೀಯ ದಿನದಿಂದ ದಿನಕ್ಕೆ ರಂಗೇರತೊಡಗಿದೆವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂರೂ ರಾಜಕೀಯ ಪಕ್ಷಗಳು ತಮ್ಮದೇ ಲೆಕ್ಕಾಚಾರದಲ್ಲಿವೆಆದರೆಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುತ್ತಿರುವ ರೀತಿ ಇಂತಹ ಲೆಕ್ಕಾಚಾರಗಳನ್ನು ಬದಲಿಸುವುದು ನಿಶ್ಚಿತ.

ಕರ್ನಾಟಕದ ರಾಜಕಾರಣ ದಿನ ದಿನಕ್ಕೂ ರಂಗೇರುತ್ತಿರುವಂತೆ ಕಾಣುತ್ತಿದ್ದರೆಅದಕ್ಕೆ ಇದೇ ಮುಖ್ಯ ಕಾರಣಅಂದ ಹಾಗೆ ಟಿಕೆಟ್ ಹಂಚಿಕೆಯ ವಿಷಯದಲ್ಲಿ ಕಸರತ್ತು ನಡೆಸುತ್ತಿರುವ ಮೂರೂ ರಾಜಕೀಯ ಪಕ್ಷಗಳು ದೊಡ್ಡ ಮಟ್ಟದಲ್ಲೇ ಪರದಾಡಿವೆಅಷ್ಟೇ ಅಲ್ಲಟಿಕೆಟ್ ಹಂಚಿಕೆಯ ನಂತರ ತಮ್ಮ ಪಕ್ಷದ ಅಂತರಂಗದಲ್ಲಿ ಮೂಡುವ ಬಿಕ್ಕಟ್ಟು ದೊಡ್ಡ ಮಟ್ಟದ ಧ್ರುವೀಕರಣಕ್ಕೆ ದಾರಿ ಮಾಡಿಕೊಡಲಿದೆ ಎಂಬುದು ಈ ಪಕ್ಷಗಳಿಗೆ ಗೊತ್ತಿದೆ.

ಅಂದ ಹಾಗೆ ಟಿಕೆಟ್ ಪಡೆಯಲು ವಿಫಲರಾದವರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಬಹುದುಮೊದಲನೆಯದಾಗಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಏಳಬಹುದುಒಂದು ವೇಳೆ ಬಂಡಾಯ ಏಳದಿದ್ದರೆ ಪಕ್ಷ ತೊರೆದು ಬೇರೆ ಪಕ್ಷಕ್ಕೂ ಹೋಗಬಹುದುಇವೆರಡು ಮಾರ್ಗಗಳೂ ಸರಿಯಲ್ಲ ಅನಿಸಿದರೆ ಒಳಗಿಂದೊಳಗೇ ಸಿಟ್ಟು ಕಾರುತ್ತಾ ಪಕ್ಷದ ಅಭ್ಯರ್ಥಿಯ ಸೋಲಿಗೆ ಕಾರಣವಾಗಬಹುದು.

ಅರ್ಥಾತ್ಇವೇ ಅಂಶಗಳು ರಾಜಕೀಯ ಧ್ರುವೀಕರಣಕ್ಕೆ ಮೂಲವಾಗಲಿವೆ ಮತ್ತು ಇಂತಹ ಧ್ರುವೀಕರಣ ಘಟಿಸಿದ ನಂತರವೇ ಎಲ್ಲ ರಾಜಕೀಯ ಪಕ್ಷಗಳ ನೈಜ ಬಲಾಬಲ ಏನು ಅನ್ನುವುದರ ಚಿತ್ರಣ ಸಿಗುತ್ತದೆ.

ಅಂದ ಹಾಗೆ ಇವತ್ತಿನ ಸ್ಥಿತಿಯಲ್ಲಿ ಎಲ್ಲ ರಾಜಕೀಯ ಪಕ್ಷಗಳೂ ತಮ್ಮದೇ ಕಲ್ಪನಾ ವಿಹಾರದಲ್ಲಿ ಮುಳುಗಿವೆಈ ಪೈಕಿ ರಾಜ್ಯ ಕಾಂಗ್ರೆಸ್ ಪಾಳೆಯವನ್ನು ಪ್ರವೇಶಿಸಿದರೆ ಅಪಾರ ಆತ್ಮವಿಶ್ವಾಸ ಕಾಣುತ್ತದೆಕಾಂಗ್ರೆಸ್ ನಾಯಕರ ಪ್ರಕಾರಈ ಬಾರಿಯ ಚುನಾವಣೆಯಲ್ಲಿ

ಪಕ್ಷ ನೂರಾ ಇಪ್ಪತ್ತರಿಂದ ನೂರಿಪ್ಪತ್ತೈದು ಕ್ಷೇತ್ರಗಳಲ್ಲಿ ಗೆಲುವು ಗಳಿಸಲಿದೆ.

ಅಂದರೆ ಸ್ವಯಂಬಲದ ಮೇಲೆ ಅಧಿಕಾರ ಹಿಡಿಯುವ ಶಕ್ತಿ ತಮ್ಮ ಪಕ್ಷಕ್ಕಿದೆ ಎಂಬುದು ಕಾಂಗ್ರೆಸ್ ನಾಯಕರ ನಂಬಿಕೆಅವರ ಈ ನಂಬಿಕೆಗೆ ಸನ್ನಿವೇಶದ ಸಾಕ್ಷ್ಯಾಧಾರಗಳೇ ಕಾರಣಉದಾಹರಣೆಗೆ ಹೇಳಬೇಕೆಂದರೆ ಆಡಳಿತ ವಿರೋಧಿ ಅಲೆ ಎದ್ದು ಕಾಣುತ್ತಿರುವುದು.

ಬೊಮ್ಮಾಯಿ ಸರ್ಕಾರ ನಲವತ್ತು ಪರ್ಸೆಂಟ್ ಕಮಿಷನ್ ಸರ್ಕಾರ ಎಂಬ ತನ್ನದೇ ಆರೋಪ ಏನಿದೆ ಇದು ಜನರ ಮನಸ್ಸನ್ನು ನಾಟಿದೆ ಎಂಬುದು ಕಾಂಗ್ರೆಸ್ಸಿನ ನಂಬಿಕೆಇವತ್ತು ಸರ್ಕಾರದ ಯಾವುದೇ ಕಚೇರಿಗಳಿಗೆ ಹೋಗಿ ನೋಡಿದರೂ ಅಲ್ಲಿ ಭ್ರಷ್ಟಾಚಾರದ ಉಪಸ್ಥಿತಿ ಇರುತ್ತದೆಹೀಗೆ ಪ್ರತಿಯೊಂದು ಕೆಲಸಕ್ಕೂ ಜನ ಲಂಚರುಷುವತ್ತು ನೀಡುವುದು ಅನಿವಾರ್ಯವಾದರೆ ಅದರರ್ಥ ಏನುಆಡಳಿತ ಯಂತ್ರದ ಮೇಲೆ ಸರ್ಕಾರಕ್ಕೆ ಹಿಡಿತ ಇಲ್ಲ ಅಂತಲ್ಲವೇ

ಅಂದ ಮೇಲೆ ಜನರಾದರೂ ಏಕೆ ಬಿಜೆಪಿಯನ್ನು ಮರಳಿ ಅಧಿಕಾರಕ್ಕೆ ತರುತ್ತಾರೆಹೀಗಾಗಿಯೇ ಬಿಜೆಪಿಗೆ ಪರ್ಯಾಯವಾಗಿ ತಾವು ಅಧಿಕಾರಕ್ಕೆ ಬರುವುದು ನಿಶ್ಚಿತ ಎಂಬುದು ಕಾಂಗ್ರೆಸ್ ನಾಯಕರ ವಿಶ್ವಾಸಈ ಮಧ್ಯೆ ಆಡಳಿತಾರೂಢ ಬಿಜೆಪಿಗೆ ಸ್ವಯಂಬಲದ ಮೇಲೆ ಅಧಿಕಾರ ಹಿಡಿಯುವ ಆತ್ಮವಿಶ್ವಾಸವಿಲ್ಲ.

ಕಮಲ ಪಾಳೆಯದ ಮೂಲಗಳ ಪ್ರಕಾರತಕ್ಷಣ ಚುನಾವಣೆ ನಡೆದರೆ ಬಿಜೆಪಿಗೆ ಎಂಬತ್ತರಿಂದ ಎಂಬತ್ತೈದು ಕ್ಷೇತ್ರಗಳಲ್ಲಿ ಗೆಲುವು ಸಿಗಬಹುದು.

ಇತ್ತೀಚೆಗೆ ಕರ್ನಾಟಕಕ್ಕೆ ಬಂದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಈ ಬಾರಿಯ ಚುನಾವಣೆಯಲ್ಲಿ ನಾವು ಕನಿಷ್ಠ ತೊಂಬತ್ತು ಸ್ಥಾನ ಗಳಿಸಬೇಕು ಎಂದು ಹೇಳಿದ್ದಾರಂತೆಅರ್ಥಾತ್ತಮಗೆ ಸ್ವಯಂಬಲದ ಮೇಲೆ ಅಽಕಾರ ದಕ್ಕದಿದ್ದರೂ ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ರಚನೆಯಾಗುವುದು ಗ್ಯಾರಂಟಿ ಎಂಬುದು ಬಿಜೆಪಿ ಲೆಕ್ಕಾಚಾರಹಾಗಾದಾಗ ಜಾತ್ಯತೀತ ಜನತಾದಳ ಜತೆಗೂಡಿ ಮೈತ್ರಿ ಸರ್ಕಾರ ರಚಿಸುವಂತಾಗಬೇಕು ಎಂಬುದು ಅದರ ಯೋಚನೆ.

ಈ ಮಧ್ಯೆ ದೇವೇಗೌಡಕುಮಾರಸ್ವಾಮಿ ನೇತೃತ್ವದ ಜಾ.ದಳ ಕೂಡ ತನ್ನದೇ ಲೆಕ್ಕಾಚಾರಗಳಲ್ಲಿ ಮುಳುಗಿದೆಯಲ್ಲದೆಕನಿಷ್ಠ ಐವತ್ತು ಕ್ಷೇತ್ರಗಳಲ್ಲಿ ತಾನು ಗೆಲುವು ಸಾಧಿಸುವುದು ಖಚಿತ ಎಂಬ ಲೆಕ್ಕಾಚಾರದಲ್ಲಿದೆಅಂದರೆ ಯಾರೇ ಸರ್ಕಾರ ರಚಿಸಲಿತನ್ನ ನೆರವು ಇಲ್ಲದೆ ಸರ್ಕಾರ ರಚನೆಯಾಗುವುದಿಲ್ಲ ಎಂಬುದು ಜಾ.ದಳ ಯೋಚನೆ.

 

ಹೀಗೆ ಮೂರೂ ರಾಜಕೀಯ ಪಕ್ಷಗಳು ತಮ್ಮದೇ ಲೆಕ್ಕಾಚಾರದಲ್ಲಿ ಮುಳುಗಿರುವುದೇನೋ ನಿಜಆದರೆ ಟಿಕೆಟ್ ಹಂಚಿಕೆಯ ನಂತರ ನಡೆಯುವ ರಾಜಕೀಯ ಧ್ರುವೀಕರಣ ಕರ್ನಾಟಕದ ರಾಜಕೀಯ ಚಿತ್ರವನ್ನು ಸ್ಪಷ್ಟಗೊಳಿಸುತ್ತದೆಇದಕ್ಕೆ ತುಂಬ ದಿನಗಳು ಕಾಯಬೇಕಿಲ್ಲ.

andolanait

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

6 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

6 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

6 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

7 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

8 hours ago