ಎಡಿಟೋರಿಯಲ್

ಮನೆಯಲ್ಲಿ ಹಿರಿಯರಿದ್ದರೆ ವಿಕಿಪೀಡಿಯ ಯಾಕೆ?

ಶ್ರಾವಣ ಬಂತು ಎಂದರೆ ಹಬ್ಬಗಳ ಸಾಲು. ಹೊಸ ಹೂಗಳ ಪರಿಮಳ, ಸಾಂಪ್ರದಾಯಿಕ ವಸ್ತ್ರಗಳ ಆಡಂಬರ . ಹೌದು, ಮನೆಯಲ್ಲಿ ಹಿರಿಯರೊಬ್ಬರಿದ್ದರೆ ಸಾಕು ನಮ್ಮ ಎಲ್ಲಾ ಹಬ್ಬ ಹುಣ್ಣಿಮೆಯ ವಿವರಣೆಯನ್ನು ಅವರು ಕೊಡುತ್ತಾರೆ . ಅಷ್ಟೇ ಅಲ್ಲದೆ ಸಾಂಪ್ರದಾಯಿಕವಾಗಿ ಹೇಗೆ ತಯಾರಾಗುವುದು ಎಂದೂ ನಮಗೆ ಹೇಳಿಕೊಡುತ್ತಾರೆ.

ಈಗಿನ ಯುವಜನತೆ ಗೂಗಲ್‌ನ ಮೊರೆ ಹೋಗುವ ಬದಲು ನಿಮ್ಮ ಮನೆಯಲ್ಲಿ ಇರುವ ಹಿರಿಯರ ಬಳಿ ಹೋಗಿ ಕುಳಿತು ಮಾತನಾಡಿ. ಕಾರಣ ನಿಮ್ಮ ಮನೆಯ ಪರಂಪರೆ ಹಾಗೂ ಸಂಪ್ರದಾಯ, ಶಾಸ್ತ್ರ ನಿಮಗೆ ತಿಳಿಯುತ್ತದೆ. ಅಷ್ಟೇ ಅಲ್ಲದೆ ಹಿರಿಯರಿಗೆ ಬರುವ ಎಷ್ಟೋ ಸಾಂಪ್ರದಾಯಿಕ ಹಾಡುಗಳು ನಿಮ್ಮ ಗೂಗಲ್‌ಗೆ ಬರುವುದಿಲ್ಲ. ಹಾಗಾಗಿ ಆ ಸಾಂಪ್ರದಾಯಿಕ ಹಾಡುಗಳು ಹಾಗೂ ಆಚರಣೆಗಳನ್ನು ನೀವು ಅವರ ಬಾಯಿಂದಲೇ ಕೇಳಿ ತಿಳಿಯಬೇಕು.

ಹಬ್ಬಗಳೆಂದರೆ ಪ್ರತಿಯೊಬ್ಬರ ಮನೆಯಲ್ಲೂ ಕೇಳಿ ಅವರದೇ ಆದ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳು ಇರುತ್ತವೆ. ಅವುಗಳನ್ನು ನೀವು ಅವರಿಂದ ತಿಳಿದು ಒಂದು ಕಡೆ ಬರೆದಿಟ್ಟುಕೊಳ್ಳಿ. ಅಷ್ಟೇ ಅಲ್ಲದೆ ಮದುವೆ ಹಾಗೂ ಕೆಲವು ಹಬ್ಬಗಳಿಗೆ ಅವರದೇ ಆದಂತಹ ಸಂಪ್ರದಾಯದ ರಂಗೋಲಿಗಳು ಸಹಇರುತ್ತದೆ ನೀವು ಅವನ್ನೂ ಅವರ ಬಳಿ ಕೇಳಿ ತಿಳಿದುಕೊಳ್ಳಬೇಕು.

ಮನೆಯಲ್ಲಿ ಹಿರಿಯರೊಬ್ಬರು ಇದ್ದರೆ ಅವರೊಂದು ವಿಕಿಪೀಡಿಯದ ಹಾಗೆ. ಅವರಿಗೆ ಎಲ್ಲ ವಿಷಯಗಳೂ ಸಾಕಷ್ಟು ಅವರ ಅನುಭವದಿಂದ ತಿಳಿದಿರುತ್ತದೆ. ಯಾವ ಅಂಗಡಿಯಲ್ಲಿ ಸಾಂಪ್ರದಾಯಿಕ ವಸ್ತುಗಳು ಸಿಗುತ್ತವೆ. ಎಲ್ಲಿ ನಿಮಗೆ ಉತ್ತಮವಾದ ರೇಷ್ಮೆ ಸಿಗುತ್ತದೆ ಎಂಬ ಮಾಹಿತಿ ತಿಳಿಯಲಿದೆ. ಅಷ್ಟೇ ಅಲ್ಲ ಸಾಂಪ್ರದಾಯಿಕ ಅಡುಗೆಯ ಭಂಡಾರ ನಮ್ಮ ಹಿರಿಯರು. ಅವರು ಹೇಳಿಕೊಡುವ ಕೆಲವು ಅಡುಗೆಯ ರುಚಿಯೇ ಬೇರೆ ಹಾಗಾಗಿ ಹೇಗಿದ್ದರೂ ಹಬ್ಬದ ಸಾಲುಗಳು ಆರಂಭವಾಗುತ್ತಿವೆ. ದಯಮಾಡಿ ಮನೆಯಲ್ಲಿನ ಹಿರಿಯರ ಬಳಿ ಕುಳಿತು ಅವರಲ್ಲಿ ಇರುವಂತಹ ಜ್ಞಾನವನ್ನು ಪಡೆದುಕೊಳ್ಳಿ.

ದೈಹಿಕವಾಗಿ ಅವರು ಬಳಲಿದ್ದರೂ ಮಾನಸಿಕವಾಗಿ ಅವರು ಸದೃಢರು. ಹಾಗಾಗಿ ಅವರ ಕೈಯಲ್ಲಿ ಕೆಲವು ಅಡುಗೆಗಳನ್ನು ಮಾಡಿಸಿ ಹಾಗೂ ಅವರ ಕೈ ರುಚಿಯನ್ನು ನೀವು ಸವಿಯಿರಿ, ಅಜ್ಜಿ ತಾತನ ಕೈ ರುಚಿ ಸವಿಯುವುದು ಎಲ್ಲರಿಗೂ ಸಾಧ್ಯವಿಲ್ಲ. ಕೆಲವರಿಗೆ ಮಾತ್ರ ಆ ಪುಣ್ಯ ಲಭ್ಯ. ನಿಮಗೆ ಆ ಅವಕಾಶವಿದ್ದರೆ ಹೇಗಿದ್ದರೂ ಹಬ್ಬದಲ್ಲಿ ರಜಾ ಇರುತ್ತದೆ, ಹಾಗಾಗಿ ಅವರ ಕೈ ರುಚಿ ಹಾಗೂ ಅವರ ರೀತಿಯಲ್ಲಿ ಪೂಜೆ, ಪುನಸ್ಕಾರಗಳನ್ನು ಮಾಡುವ ಬಗ್ಗೆ ತಿಳಿದು ಒಂದು ಬದಲಾವಣೆಯನ್ನು ನೀವು ಖಂಡಿತಾ ಮಾಡಿಕೊಳ್ಳಬಹುದು.

ಹೂ ಕಟ್ಟುವುದು, ಜಡೆ ಹಾಕುವುದು, ಪೂಜೆಗೆ ಅಣಿ ಮಾಡುವುದು, ಅಷ್ಟೇ ಅಲ್ಲ ಸಂಪ್ರದಾಯವಾಗಿ ಅವರು ಸೀರೆ , ಪಂಚೆಗಳನ್ನು ಉಡುವುದನ್ನು ಅವರಿಂದ ಕಲಿತುಕೊಳ್ಳಬಹುದು . ತಾತನ ಜೊತೆ ಮೊಮ್ಮಕ್ಕಳೂ ಒಂದೇ ರೀತಿ ಕಚ್ಚೆಯನ್ನು ಹಾಕಿ ಫೋಟೋ ತೆಗೆದು ನಿಮ್ಮ ಸ್ಟೇಟಸ್‌ಗೆ ಹಾಕಿಕೊಳ್ಳಿ. ಅಷ್ಟೇ ಅಲ್ಲ ಅಜ್ಜಿಯ ಹಾಗೆ ನೀವೂ ತಯಾರಾದರೆ ಅವರ ಮುಖದಲ್ಲಿ ಮೂಡುವ ನಗುವಿಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ನಾವು ಅವರಿಗಾಗಿ ಏನನ್ನು ಕೊಡಲೂ ಸಾಧ್ಯವಿಲ್ಲ.

ಕಾರಣ ಅವರಿಗೆ ಆಸೆ ಬಹಳ ಕಮ್ಮಿ. ಆದರೆ ಅವರ ಬಳಿ ನೀವು ಸಮಯ ಕಳೆದಾಗ ಅವರ ಮುಖದಲ್ಲಿ ಮೂಡುವ ಮಂದಹಾಸಕ್ಕೆ ಎಣೆಯಿಲ್ಲ. ಮುಂದೆ ಬರುವ ಹಬ್ಬಗಳಲ್ಲಿ ಹಾಗೆ ನಡೆದು ಹಿರಿಯರ ಮುಖದಲ್ಲಿ ನಗು ತರುವ ಕೆಲಸವನ್ನು ನಾವು ನೀವೆಲ್ಲರೂ ಮಾಡೋಣ.

-ಸೌಮ್ಯ ಕೋಠಿ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

17 mins ago

ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಹೇಳಿಕೆಗೆ ಕಿಚ್ಚ ಸುದೀಪ್‌ ಕೆಂಡಾಮಂಡಲ

ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…

39 mins ago

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾಕಷ್ಟು ಅಭ್ಯರ್ಥಿಗಳಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್‌ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…

56 mins ago

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್‌ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…

1 hour ago

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಬೆಂಕಿ: ಅದೃಷ್ಟವಶಾತ್‌ ಪಾರು

ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…

2 hours ago

ಓದುಗರ ಪತ್ರ: ಜಲಪುರಿ ಬಡಾವಣೆ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಜಲಪುರಿ ಬಡಾವಣೆಯ  ಪೊಲೀಸ್ ಆಸ್ಪತ್ರೆ ಮುಂಭಾಗದ  ರಸ್ತೆ ತೀರಾ ಹದಗೆಟ್ಟಿದೆ.  ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…

3 hours ago