ಎಡಿಟೋರಿಯಲ್

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-೨೦೨೫ವನ್ನು ಧ್ವನಿಮತದ ಆಧಾರದ ಮೇಲೆ ಅಂಗೀಕರಿಸಿದೆ.

ವಿಧೇಯಕ ಇದೀಗ ‘ಲೋಕಭವನ’ದ ಅಂಗಳ ತಲುಪಲಿದ್ದು, ರಾಜ್ಯಪಾಲರು ಅಂಕಿತ ಹಾಕಿದ ದಿನದಿಂದ ಮಸೂದೆಯಾಗುವ ಮೂಲಕ ಜಾತಿ, ಮತ, ಧರ್ಮ,ಲಿಂಗ, ಲಿಂಗತ್ವ, ಜನ್ಮ ಸ್ಥಳ, ಭಾಷೆ, ಪಂಗಡ, ರಾಜಕೀಯ ಕಾರಣಗಳಿಗಾಗಿ ಸಾರ್ವಜನಿಕ ವೇದಿಕೆಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷಕಾರುವವರಿಗೆ ಕಾನೂನಿನ ಮೂಲಕ ಮೂಗುದಾರ ಹಾಕುವ ಅಸವನ್ನು ಪೊಲೀಸರಿಗೆ ನೀಡಲಿದೆ.

ದ್ವೇಷ ಭಾಷಣ ಎಂಬುದು ಯಾವುದೇ ಪೂರ್ವಕಲ್ಪಿತ ಹಿತಾಸಕ್ತಿಯನ್ನು ಸಾಧಿಸಲು ಬದುಕಿರುವ ವ್ಯಕ್ತಿ ಅಥವಾ ಮೃತ ವ್ಯಕ್ತಿಗಳ ವರ್ಗ ಅಥವಾ ಗುಂಪು ಅಥವಾ ಸಮು ದಾಯದ ವಿರುದ್ಧ ಹಾನಿ, ಅಸಾಮರಸ್ಯ ಅಥವಾ ವೈರತ್ವದ ಅಥವಾ ದ್ವೇಷದ ಅಥವಾ ಕೆಡುಕಿನ ಭಾವನೆಗಳನ್ನು ಮೂಡಿಸುವ ಉದ್ದೇಶದೊಂದಿಗೆ ಸಾರ್ವಜನಿಕ ನೋಟದಲ್ಲಿ ಮೌಖಿಕವಾಗಿ ಅಥವಾ ಲಿಖಿತ ರೂಪದ ಪದಗಳಲ್ಲಿ ಅಥವಾ ಸಂಕೇತಗಳ ಮೂಲಕ ಅಥವಾ ದೃಶ್ಯ ರೂಪಕಗಳ ಮೂಲಕ ಅಥವಾ ವಿದ್ಯುನ್ಮಾನ ಸಂವಹನಗಳ ಮೂಲಕ ಅಥವಾ ಇನ್ನಾವುದೇ ರೀತಿಯಲ್ಲಿ ಮಾಡಲಾದ, ಪ್ರಕಟಿಸಲಾದ, ಪರಿಚಯಿಸಲಾದ ಯಾವುದೇ ಅಭಿವ್ಯಕ್ತಿಯನ್ನು ಒಳಗೊಳ್ಳುವುದು ಎಂದು ವಿಧೇಯಕದಲ್ಲಿ ಹೇಳಲಾಗಿದೆ.

ವ್ಯಕ್ತಿ, ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ, ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ, ದ್ವೇಷ ಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂಥ ಅಪರಾಧಗಳಿಗೆ ದಂಡನೆ ವಿಧಿಸುವ ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಶಾಸನವನ್ನು ಅಧಿನಿಯಮಿಸುವುದು ಅವಶ್ಯವೆಂದು ಪರಿಗಣಿಸಿ ಈ ವಿಧೇಯಕ ತರಲಾಗಿದೆ. ಬಹುತ್ವದ ಭಾರತದಲ್ಲಿ ಜಾತಿ, ಮತ, ಧರ್ಮಗಳ ನಡುವಿನ ವೈಮನಸ್ಯ, ಮತಾಂಧರಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಸೂದೆಯ ಅನುಷ್ಠಾನವಾಗಬೇಕು. ಆದರೆ, ಯಾವುದೇ ಒಂದು ಸಮಾಜ, ಸಮುದಾಯ, ವ್ಯಕ್ತಿ, ಸಂಸ್ಥೆಗಳನ್ನು ಹಣಿಯಲು ಆಳುವ ಸರ್ಕಾರಕ್ಕೆ ಈ ಮಸೂದೆ ಅಸವಾಗಬಾರದು.

ಇದನ್ನು ಓದಿ: ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಈ ವಿಧೇಯಕ ಕಾಯಿದೆಯಾಗಿ ಜಾರಿಯಾದರೆ ಸರ್ಕಾರದ ನೀತಿಗಳ ವಿರುದ್ಧದ ಟೀಕೆ, ಸಾಮಾಜಿಕ ಚರ್ಚೆ, ಹಾಸ್ಯ ಅಥವಾ ಸತ್ಯವನ್ನು ಪ್ರತಿಪಾದನೆ ಮಾಡುವುದು ಕೂಡ ದ್ವೇಷವೆಂದು ಪರಿಗಣಿಸುವ ಅಪಾಯವಿದೆ. ಇದು ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ಹಾನಿ ಮಾತ್ರವಲ್ಲ, ಸಂವಿಧಾನಬದ್ಧ ಅಭಿವ್ಯಕ್ತಿ ಸ್ವಾತಂತ್ರ್ಯದ ಆ ಮೂಲಕ ಪ್ರಜಾಪ್ರಭುತ್ವದ ಕತ್ತುಹಿಸುಕುವ ಯತ್ನ ಎಂದು ವಿಶ್ಲೇಷಿಸಲಾಗುತ್ತಿದೆ.

ವಿಧೇಯಕವು ಕಾಯಿದೆಯಾಗಿ ಜಾರಿಯಾದಲ್ಲಿ ಯಾವುದೇ ಸಮು ದಾಯದ ಮತಾಂಧರ ಬಾಯಿಗೆ ಕಡಿವಾಣ ಹಾಕುವ ಜತೆಗೆ ಪ್ರಗತಿಪರರ ಬಾಯಿಗೂ ಬೀಗಹಾಕಲಿದೆ. ಮೈಕು ಸಿಕ್ಕ ಕೂಡಲೇ ಇನ್ನೊಂದು ಸಾಮುದಾಯದವರನ್ನು ಹೊಡಿ, ಬಡಿ, ಕೊಲ್ಲು ಎಂದು ಪ್ರಚೋದಿಸುವವರ, ಆಳುವ ನಾಯಕರನ್ನು ಪರೋಕ್ಷವಾಗಿ, ವ್ಯಂಗ್ಯ ಮಾಡುವವರ ಪಾಲಿಗೂ ಮುಳ್ಳಾಗುವುದು ಸಹಜ. ವಿರೋಧಪಕ್ಷಗಳಾದ ಬಿಜೆಪಿ-ಜಾ.ದಳ ಶಾಸಕರು ವಿಧಾನ ಮಂಡಲದ ಒಳ- ಹೊರಗೆ ಈ ವಿಧೇಯಕದ ವಿರುದ್ಧ ಧ್ವನಿ ಎತ್ತಿದ್ದರೂ ಸರ್ಕಾರ ತನಗಿರುವ ಸಂಖ್ಯಾ ಬಲದ ಆಧಾರದ ಮೇಲೆ ವಿಧೇಯಕ ವನ್ನು ಅಂಗೀಕರಿಸಿದೆ. ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ಯಾವುದೇ ಕಾರಣಕ್ಕೂ ಈ ವಿಧೇಯಕ್ಕೆ ಅಂಕಿತ ಹಾಕದಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಬಿಜೆಪಿ-ಜಾ.ದಳ ನಾಯಕರು ಸೇರಿದಂತೆ ಬೇರೆ ಬೇರೆ ಸಂಘಟನೆಗಳವರೂ ಸರ್ಕಾರ ತರಲು ಹೊರಟಿರುವ ಈ ಮಸೂದೆಗೆ ಆಕ್ಷೇಪ ಎತ್ತಿದ್ದಾರೆ.

ಕರ್ನಾಟಕ ಸರ್ಕಾರವು ತರಲು ಹೊರಟಿರುವ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿ ಬಂಧಕ) ವಿಧೇಯಕ- ೨೦೨೫’ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಇದು ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲಿದೆ. ಈ ವಿಧೇಯಕವು ಕಾನೂನಾಗಿ ಜಾರಿಗೆ ಬಂದರೆ ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಲಿದೆ. ಭಾರತದ ಸಂವಿಧಾನದ ಅನುಚ್ಛೇದ ೧೯(೧) (ಎ)ಯಲ್ಲಿ ಮಾತನಾಡುವ ಹಕ್ಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಲಾಗಿದೆ.

ಇದನ್ನು ಓದಿ: ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಆದರೆ ಈ ವಿಧೇಯಕದಲ್ಲಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯೆಯೇ ಅಸ್ಪಷ್ಟವಾಗಿದ್ದು, ಸರ್ಕಾರದ ಉದ್ದೇಶವೇ ಅನುಮಾನ ಹುಟ್ಟಿಸುವಂತಿರುವುದರಿಂದ ಯಾವುದೇ ಕಾರಣಕ್ಕೂ ಈ ವಿಧೇಯಕ ಕಾನೂನಾಗಿ ಜಾರಿಯಾಗಬಾರದು, ಸರ್ಕಾರ ಕೂಡಲೇ ಈ ವಿಧೇಯಕವನ್ನು ಹಿಂಪಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಆಗ್ರಹಿಸಿದ್ದಾರೆ.

ಸಮಾಜದ ಆಗ್ರಹಗಳ ಹಿನ್ನೆಲೆಯಲ್ಲಿ ರಾಜ್ಯಪಾಲರು ವಿಧೇಯಕವನ್ನು ಮತ್ತೊಮ್ಮೆ ಪರಾಮರ್ಶಿಸುವಂತೆ ರಾಜ್ಯಸರ್ಕಾರಕ್ಕೆ ವಾಪಸ್ ಕಳಿಸಬಹುದು. ಇಲ್ಲವೇ ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ ತೀರ್ಪಿನಲ್ಲಿ ಸರ್ಕಾರಗಳು ಕಳುಹಿಸುವ ವಿಧೇಯಕಗಳಿಗೆ ಅಂಕಿತ ಹಾಕಲು ರಾಜ್ಯಪಾಲರುಗಳಿಗೆ ಕಾಲಮಿತಿ ಹೇರುವಂತಿಲ್ಲ ಎಂದು ಹೇಳಿರುವುದರಿಂದ ರಾಜ್ಯಪಾಲರು ಆ ಅಸವನ್ನು ಬಳಸಿಕೊಳ್ಳಬಹುದು, ಇಲ್ಲವೇ ರಾಷ್ಟ್ರಪತಿಗಳಿಗೆ ವಿಧೇಯಕವನ್ನು ಹೊತ್ತು ಹಾಕಿ ಕೂರಬಹುದು.

” ಅಸಾಮರಸ್ಯ ದ್ವೇಷವನ್ನುಂಟು ಮಾಡುವ, ದ್ವೇಷ ಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂಥ ಅಪರಾಧಗಳಿಗೆ ದಂಡನೆ ವಿಧಿಸುವ ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಶಾಸನವನ್ನು ಅಧಿನಿಯಮಿಸುವುದು ಅವಶ್ಯವೆಂದು ಪರಿಗಣಿಸಿ ಈ ವಿಧೇಯಕ ತರಲಾಗಿದೆ”

ಆಂದೋಲನ ಡೆಸ್ಕ್

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

3 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

3 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

4 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

4 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

4 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

4 hours ago