ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ 2022-23 ನೇ ಸಾಲಿನಿಂದ 5 ಮತ್ತು 8ನೇ ತರಗತಿಗಳಿಗೂ ವಾರ್ಷಿಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಲು ಕಲಿಕಾ ಚೇತರಿಕೆ ಮಾಡಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇವರ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ರೂಪಿಸಿ ಪರೀಕ್ಷೆ ನಡೆಸಿ ಮೌಲ್ಯಮಾಪನ ಮಾಡಬೇಕು. ಫಲಿತಾಂಶವನ್ನು ಶಾಲಾವಾರು ಕ್ಲಸ್ಟರ್ ವಾರು, ತಾಲೂಕವಾರು ವಿಶ್ಲೇಷಿಸಬೇಕು ಎಂದು ಸೂಚಿಸಲಾಗಿದೆ.
ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಒಟ್ಟಾರೆ ಸಾಧನೆ ಯಾವ ರೀತಿ ಇದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಒಟ್ಟಾರೆಯಾಗಿ ಮಕ್ಕಳ ಕಲಿಕೆಯ ಮಟ್ಟವೇನು? ಕೊರತೆಗಳೇನು? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ? ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಹಾಗೂ ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡುವುದು ಅವಶ್ಯವಿದೆ. ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ಆದೇಶ ಮಾಡಿದೆ ಎಂದು ತಿಳಿದುಬಂದಿದೆ.
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…