ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ 2022-23 ನೇ ಸಾಲಿನಿಂದ 5 ಮತ್ತು 8ನೇ ತರಗತಿಗಳಿಗೂ ವಾರ್ಷಿಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಲು ಕಲಿಕಾ ಚೇತರಿಕೆ ಮಾಡಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇವರ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ರೂಪಿಸಿ ಪರೀಕ್ಷೆ ನಡೆಸಿ ಮೌಲ್ಯಮಾಪನ ಮಾಡಬೇಕು. ಫಲಿತಾಂಶವನ್ನು ಶಾಲಾವಾರು ಕ್ಲಸ್ಟರ್ ವಾರು, ತಾಲೂಕವಾರು ವಿಶ್ಲೇಷಿಸಬೇಕು ಎಂದು ಸೂಚಿಸಲಾಗಿದೆ.
ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಒಟ್ಟಾರೆ ಸಾಧನೆ ಯಾವ ರೀತಿ ಇದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಒಟ್ಟಾರೆಯಾಗಿ ಮಕ್ಕಳ ಕಲಿಕೆಯ ಮಟ್ಟವೇನು? ಕೊರತೆಗಳೇನು? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ? ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಹಾಗೂ ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡುವುದು ಅವಶ್ಯವಿದೆ. ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ಆದೇಶ ಮಾಡಿದೆ ಎಂದು ತಿಳಿದುಬಂದಿದೆ.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…