ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ 2022-23 ನೇ ಸಾಲಿನಿಂದ 5 ಮತ್ತು 8ನೇ ತರಗತಿಗಳಿಗೂ ವಾರ್ಷಿಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಲು ಕಲಿಕಾ ಚೇತರಿಕೆ ಮಾಡಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇವರ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ರೂಪಿಸಿ ಪರೀಕ್ಷೆ ನಡೆಸಿ ಮೌಲ್ಯಮಾಪನ ಮಾಡಬೇಕು. ಫಲಿತಾಂಶವನ್ನು ಶಾಲಾವಾರು ಕ್ಲಸ್ಟರ್ ವಾರು, ತಾಲೂಕವಾರು ವಿಶ್ಲೇಷಿಸಬೇಕು ಎಂದು ಸೂಚಿಸಲಾಗಿದೆ.
ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಒಟ್ಟಾರೆ ಸಾಧನೆ ಯಾವ ರೀತಿ ಇದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಒಟ್ಟಾರೆಯಾಗಿ ಮಕ್ಕಳ ಕಲಿಕೆಯ ಮಟ್ಟವೇನು? ಕೊರತೆಗಳೇನು? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ? ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಹಾಗೂ ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡುವುದು ಅವಶ್ಯವಿದೆ. ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ಆದೇಶ ಮಾಡಿದೆ ಎಂದು ತಿಳಿದುಬಂದಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…