ಬೆಂಗಳೂರು : ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಹಾಗೂ ರಾಜ್ಯ ಪಠ್ಯಕ್ರಮದಿಂದ ಕೇಂದ್ರ ಪಠ್ಯಕ್ರಮಕ್ಕೆ ಸಂಯೋಜನೆಗೆ ನಿರಾಕ್ಷೇಪಣಾ ಪತ್ರ (NOC) ಮಂಜೂರಾತಿ ಪ್ರಕ್ರಿಯೆ ಸರಳೀಕರಣಕ್ಕಾಗಿ ರಾಜ್ಯ ಸರ್ಕಾರ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಪ್ರಕ್ರಿಯೆಗಳನ್ನು ಸರಳೀಕರಿಸಲಾಗಿದೆ. ಅತ್ಯಂತ ಕಡಿಮೆ ಹಂತಗಳಲ್ಲಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುತ್ತಿದೆ. ನೋಂದಣಿ, ನವೀಕರಣ ಮುಂತಾದ ಎಲ್ಲ ಪ್ರಕ್ರಿಯೆಗಳು ಈಗಾಗಲೇ ಆನ್ಲೈನ್ನಲ್ಲಿ ಲಭ್ಯವಿದ್ದು, ಇನ್ನಷ್ಟು ಸುಧಾರಿತ ರೀತಿಯಲ್ಲಿ ಎಲ್ಲ ಸೇವೆಗಳು ಶೀಘ್ರದಲ್ಲಿಯೇ ಆನ್ಲೈನ್ ಮೂಲಕ ಲಭ್ಯವಾಗಲಿವೆ. ಕಡಿಮೆ ಸಮಯದಲ್ಲಿ ಹೆಚ್ಚು ಪಾರದರ್ಶಕವಾಗಿ ಸೇವೆಗಳು ಲಭ್ಯವಾಗುತ್ತವೆ. ಈ ಕುರಿತಾದ ಮಾಹಿತಿಯನ್ನು ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ’ ಎಂದು ಸಚಿವ ನಾಗೇಶ್ ಅವರು ತಿಳಿಸಿದ್ದಾರೆ.
ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…
ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…
ವಾಷಿಂಗ್ಟನ್: ಅಮೇರಿಕಾ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್…
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…
ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…